ಕಾಡಿನ ಮೂಲಕ ಉಗ್ರರ ಪ್ರವೇಶ: ಶಬರಿಮಲೆಯಲ್ಲಿ ಗುಪ್ತಚರ ಹೈಅಲರ್ಟ್
ತಿರುವನಂತಪುರಂ ನ 12: ವಿಶ್ವವಿಖ್ಯಾತ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಅರಣ್ಯದ ಮೂಲಕ ಸಾಗಬೇಕಾಗಿರುವುದರಿಂದ, ಆ ಮೂಲಕವೇ ಉಗ್ರರು ನುಸುಳುವ ಸಾಧ್ಯತೆಯಿದೆ ಎಂದು ಕೇರಳ ಮತ್ತು ಕೇಂದ್ರ ಸರಕಾರಕ್ಕೆ ವರದಿಯನ್ನು ಗುಪ್ತಚರ ಇಲಾಖೆ ನೀಡಿದೆ.
ನವೆಂಬರ್ ಹದಿನಾರರಿಂದ ಜನವರಿ ಇಪ್ಪತ್ತರವರೆಗೆ ಶಬರಿಮಲೆ ದೇವಾಲಯ ಮಂಡಲಪೂಜೆ ಮತ್ತು ಮಕರ ಸಂಕ್ರಾತಿಗಾಗಿ, 66 ದಿನ ಬಾಗಿಲು ತೆರೆದಿರುತ್ತದೆ. ಈ ಅವಧಿಯಲ್ಲಿ ಅತೀವ ಭದ್ರತೆಯನ್ನು ನೀಡುವಂತೆ, ಗುಪ್ತಚರ ಇಲಾಖೆ ಸೂಚಿಸಿದೆ.
ಅರಣ್ಯ ಪ್ರದೇಶದಲ್ಲಿ ಭಕ್ತರು ಬರುವಾಗ ಅವರ ರೂಪದಲ್ಲೇ ಉಗ್ರರು ನುಸುಳುವ ಸಾಧ್ಯತೆಯಿದೆ. ದೇವಾಲಯಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರ ಬಳಿಯೂ ಮಾಹಿತಿಯನ್ನು ಸಂಗ್ರಹಿಸಿ, ದೇವಾಲಯದೊಳಗೆ ಬಿಡಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಬಾರಿ, ಶಬರಿಮಲೆ ದೇವಾಲಯದ ಮೇಲೆ, ವಾಯುಸೇನೆ ಮತ್ತು ನೌಕಾಪಡೆಯ ರಕ್ಷಣೆಯೂ ಇರಲಿದೆ. ಜೊತೆಗೆ, ದೇವಾಲಯಕ್ಕೆ ಸಾಮಗ್ರಿಗಳನ್ನು ತೆಗೆದುಕೊಂಡು ಬರುವ ವಾಹನವೂ ವಿಶೇಷ ತಪಾಸಣೆಗೆ ಒಳಪಡಲಿದೆ.
ನವೆಂಬರ್ 16 ರಿಂದ ಡಿಸೆಂಬರ್ 27ರವರೆಗೆ ದೇವಾಲಯ ಮಂಡಲಪೂಜೆಗೆ ತೆರೆಯಲಿದೆ. ಡಿಸೆಂಬರ್ 28, 29ರಂದು ದೇವಾಲಯವನ್ನು ಮುಚ್ಚಲಾಗುವುದು. ನಂತರ, ಡಿಸೆಂಬರ್ 30ರಿಂದ ಜನವರಿ 21ರವರೆಗೆ, ಮಕರ ವಿಳಕ್ಕುಗಾಗಿ ದೇವಾಲಯ ಮತ್ತೆ ತೆರೆಯಲಿದೆ.
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಹೇರಿದ್ದ ನಿಷೇಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಈ ವಾರದಲ್ಲಿ (ನ 12-16) ನೀಡುವ ಸಾಧ್ಯತೆಯಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications