ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶುಕ್ರವಾರ (ಏ.15) 5 ಗಂಟೆಗಳ ಕಾಲ ಬಂದ್
ತಿರುವನಂತಪುರಂ, ಏಪ್ರಿಲ್ 14 : ಕೇರಳದ ತಿರುವನಂತಪುರಂನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ಶುಕ್ರವಾರ 5 ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ. ಪೈಂಗುಣಿ ಉತ್ಸವದ ಅಂಗವಾಗಿ ಶ್ರೀ ಪದ್ಮನಾಭಸ್ವಾಮಿ ದೇವರ ಆರಟ್ಟು ಮೆರವಣಿಗೆಗೆ ಅನುಕೂಲವಾಗಲಿ ಅಂತ ವಿಮಾನ ನಿಲ್ದಾಣದ ರನ್ವೇಯನ್ನ ಸಂಜೆ 4 ಗಂಟೆಯಿಂದ 9 ಗಂಟೆಯವರೆಗೆ ಮುಚ್ಚಲಾಗುವುದು ಎಂದು ವಿಮಾನ ನಿಲ್ದಾಣ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ವಿಮಾನ ನಿಲ್ದಾಣದಲ್ಲಿ ವಿಶು (ಸುಗ್ಗಿ ಕಾಲ ) ಹಾಗೂ ತಮಿಳರ ಹೊಸ ವರ್ಷವಾದ (ಪುತಾಂಡು)ವಿನ ಆಚರಣೆ ಹಾಗೂ ವಿವಿಧ ಕಾರ್ಯಕ್ರಮಗಳನ್ನ ನಡೆಸಲಾಗುತ್ತಿದೆ. ಹಳದಿ ಬಣ್ಣದ ಕನ್ನಿಕೊನ್ನಾ ಹೂಗಳಿಂದ ನಿಲ್ದಾಣವನ್ನ ಸಿಂಗರಿಸಿ ಸಾಂಪ್ರಾದಾಯಿಕ ಚಿಹ್ನೆಯಾದ ವಿಶುವನ್ನು ಅಂತರಾಷ್ಟ್ರೀಯ ಹಾಗೂ ದೇಶಿಯ ಟರ್ಮಿನಲ್ಗಳಲ್ಲಿ ಇರಿಸಲಾಗಿದೆ. ಹೀಗಾಗಿ ನಾಳೆ 5 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆ ಸ್ಥಗಿತವಾಗಲಿದೆ.

ತಿರುವನಂತಪುರಂ ವಿಮಾನ ನಿಲ್ದಾಣವು ಹಬ್ಬದ ಉತ್ಸಾಹದಿಂದ ಪ್ರಕಾಶಮಾನವಾಗಿ ಹೊಳೆಯುತ್ತಿದ್ದು, ನಿಮ್ಮೆಲ್ಲರಿಗೂ ಭವ್ಯವಾದ ಸ್ವಾಗತವನ್ನ ಕೋರಲು ನಾವು ನಮ್ಮ ಸಭಾಂಗಣವನ್ನ ಸುಂದರವಾಗಿ ಅಲಂಕರಿಸಿದ್ದೇವೆ ಅಂತ ತಿರುವನಂತಪುರಂ ವಿಮಾನ ನಿಲ್ದಾಣ ಟ್ವೀಟ್ ಮಾಡಿದೆ.
With the auspicious #Vishu just around the corner, #ThiruvananthapuramAirport is shining bright with the festive spirit. We’ve embellished our halls with beautiful decor to give you all a grand welcome.#HappyVishu #OneNationBillionCelebrations #GatewayToGoodness pic.twitter.com/k3LH9BFBAL
— Thiruvananthapuram International Airport (@TRV_Airport_Off) April 12, 2022
ಇದರ ಜೊತೆಗೆ ಮತ್ತೊಂದು ಟ್ವೀಟ್ ಕೂಡ ಮಾಡಿದ್ದು, ವಿಮಾನ ನಿಲ್ದಾಣದಲ್ಲಿ ವಿಶು ಹಬ್ಬದ ಆಚರಣೆಯ ಅಂಗವಾಗಿ ಪೇಟಿಂಗ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಈ ಚಟುವಟಿಕೆಯಲ್ಲಿ ಹಲವು ಪ್ರಯಾಣಿಕರು ಉತ್ಸಾಹದಿಂದ ಭಾಗಿಯಾಗಿದ್ದರು. ಬಳಿಕ ಎಲ್ಲಾ ಪ್ರಯಾಣಿಕರಿಗೂ ನಿಲ್ದಾಣದ ವತಿಯಿಂದ ಊಡುಗೊರೆಗಳನ್ನ ಹಸ್ತಾಂತರ ಮಾಡಲಾಯಿತು ಅಂತ ತಿಳಿಸಿದೆ.
twitter embed :As a part of the joyous #Vishu celebration, #ThiruvananthapuramAirport hosted a fun painting activity, in which many passengers participated with a great festive spirit. Those finished art pieces were then handed to the passengers as a gift.#HappyVishu #GatewayToGoodness pic.twitter.com/MFRlQ1J0nH
— Thiruvananthapuram International Airport (@TRV_Airport_Off) April 13, 2022
ಕಳೆದ ಎರಡು ದಿನಗಳಿಂದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿಶೇಷ ಬಹುಮಾನಗಳನ್ನ ಕೂಡ ನೀಡಲಾಗುತ್ತಿದೆ. ಈ ಸ್ಪರ್ಧೆಯಲ್ಲಿ ಇನ್ನು ಹೆಚ್ಚು ಜನರು ಭಾಗಿಯಾಗುವ ಮೂಲಕ ಆಕರ್ಷಕ ಊಡುಗೊರೆಗಳನ್ನ ಪಡೆದುಕೊಳ್ಳುವಂತೆ ವಿಮಾನ ನಿಲ್ದಾಣ ಪ್ರಕಟಣೆಯಲ್ಲಿ ತಿಳಿಸಿದೆ.

ಏನಿದು ಪೈಂಗುಣಿ ಹಬ್ಬ?
ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭಸ್ವಾಮಿ ದೇಗುಲದ ಪ್ರಮುಖ ಹಬ್ಬಗಳಲ್ಲಿ ಪೈಂಗುಣಿ ಹಬ್ಬವು ಒಂದು. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಬರುವ ಹಬ್ಬ ಇದಾಗಿದ್ದು, ಹತ್ತು ದಿನಗಳ ಕಾಲ ಈ ಹಬ್ಬ ವಿಜೃಂಭಣೆಯಿಂದ ನಡೆಯುತ್ತದೆ. ಮೊದಲ ದಿನದಂದು ಹಬ್ಬವನ್ನ ವಿಧ್ಯುಕ್ತ ಧ್ವಜಾರೋಹಣ ಮಾಡುವ ಮೂಲಕ ಪ್ರಾರಂಭಿಸಲಾಗುತ್ತದೆ. ವಿಶೇಷ ಅಂದರೆ ದೇವಾಲಯದ ಪೂರ್ವ ಪ್ರವೇಶದ್ವಾರದಲ್ಲಿ ಪಾಂಡವರ ಪ್ರತಿಮೆಗಳನ್ನ ಇರಿಸಿ ಪೂಜೆ ನೇರವೇರಿಸಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications