ಪಿಜಿ 3ನೇ ಸೆಮಿಸ್ಟರ್ನಲ್ಲಿ ಸಾವರ್ಕರ್ ಪಠ್ಯ ಬೋಧನೆ ಇಲ್ಲ: ಕಣ್ಣೂರು ವಿಶ್ವವಿದ್ಯಾಲಯ
ಕಣ್ಣೂರು, ಸೆಪ್ಟೆಂಬರ್ 17: ಪಿಜಿ ವಿದ್ಯಾರ್ಥಿಗಳಿಗೆ 3ನೇ ಸೆಮಿಸ್ಟರ್ನಲ್ಲಿ ಆರ್ಎಸ್ಎಸ್ ಮುಖಂಡ ಎಂಎಸ್ ಗೋಲ್ವಾಲ್ಕರ್ ಹಾಗೂ ಹಿಂದೂ ಮಹಾಸಭಾ ಮುಖಂಡ ವಿಡಿ ಸಾರ್ವರ್ಕರ್ ಪಠ್ಯವನ್ನು ಬೋಧಿಸುವುದಿಲ್ಲ ಎಂದು ಕಣ್ಣೂರು ವಿಶ್ವವಿದ್ಯಾಲಯದ ಉಪ ಕುಲಪತಿ ಗೋಪಿನಾಥ್ ರವೀಂದ್ರನ್ ಹೇಳಿದ್ದಾರೆ.
ಪಠ್ಯಗಳಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದೆ. ನಾಲ್ಕನೇ ಸೆಮಿಸ್ಟರ್ನಲ್ಲಿ ಪಠ್ಯಗಳನ್ನು ಬೋಧಿಸಲಾಗುತ್ತದೆ. ವಿಶ್ವವಿದ್ಯಾಲಯದ ಹೊಸ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲು ಸೂಚಿಸಲಾಗಿದೆ. ಬದಲಾವಣೆಗಳು ಆದ ಬಳಿಕ ಸಮಿತಿಗೆ ಕಳುಹಿಸಲಾಗುವುದು ಎಂದರು.
ವಿಶ್ವವಿದ್ಯಾಲಯದ ನಿರ್ಧಾರವು ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಟೀಕೆಗೆ ಒಳಗಾಯಿತು. ತಜ್ಞರ ಸಮಿತಿ ವರದಿಯನ್ನು ಅಧ್ಯಯನ ಮಂಡಳಿಗೆಕಳುಹಿಸಲಾಗಿದೆ ಎಂದು ರವೀಂದ್ರನ್ ಹೇಳಿದ್ದಾರೆ.

ಎಡರಂಗದ ಪ್ರಾಬಲ್ಯವಿರುವ ಕಣ್ಣೂರು ವಿಶ್ವವಿದ್ಯಾಲಯದ ಕೋರ್ಸ್ಗಳ ಪಠ್ಯಕ್ರಮವನ್ನು ಕೇಸರೀಕರಣಗೊಳಿಸಲಾಗಿದ್ದು, ಪಠ್ಯಕ್ರಮದಲ್ಲಿ ಸಾರ್ವಕರ್ ಮತ್ತು ಗೋಲ್ವಾಲ್ಕರ್ ಅವರ ಕುರಿತಾದ ವಿಚಾರಗಳ ಸೇರ್ಪಡೆಗೊಳಿಸಲಾಗಿದೆ ಎಂಬ ಆರೋಪವನ್ನು ಉಪಕುಲಪತಿ ಗೋಪಿನಾಥ್ ನಿರಾಕರಿಸಿದ್ದರು.
ಪಠ್ಯಕ್ರಮ ಸಿದ್ಧಪಡಿಸುವಿಕೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಹಾಗೂ ವಿವಾದದ ಕುರಿತಂತೆ ದ್ವಿಸದಸ್ಯ ಸಮಿತಿ ಪರಿಶೀಲಿಸಲಿದೆ ಎಂದು ಅವರು ಹೇಳಿದ್ದರು. ಪಠ್ಯಕ್ರಮದಲ್ಲಿ ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅವರ ಕುರಿತಾದ ವಿಚಾರಗಳ ಸೇರ್ಪಡೆ ತಪ್ಪಲ್ಲ, ಪಠ್ಯಕ್ರಮವನ್ನು ರದ್ದುಗೊಳಿಸುವುದಿಲ್ಲ ಎಂದಿದ್ದರು.
ತಲಶ್ಮೇರಿಯ ಸರ್ಕಾರಿ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದ ಸ್ನಾತಕೋತ್ತರ ಕೋರ್ಸ್ನ ಪಠ್ಯ ಕ್ರಮದಲ್ಲಿ ಸಾವರ್ಕರ್ ಬರೆದ ಹಿಂದುತ್ವ, ಹಿಂದೂ ಯಾರು?, ಎಂಎಸ್ ಗೋಲ್ವಾಲ್ಕರ್ ಬರೆದ ನಾವು ಮತ್ತು ರಾಷ್ಟ್ರೀಯವಾದ ಪರಿಕಲ್ಪನೆ, ಬಾಲರಾಜ್ ಮೊಧೋಕ್ರ ಭಾರತೀಕರಣ, ಯಾಕೆ?ಹೇಗೆ?ಏನು? ಹಾಗೂ ದೀನ್ ದಯಾಳ್ ಉಪಾಧ್ಯಾಯರ ಸಮಗ್ರ ಮಾನವತಾವಾದ ಎಂಬ ಪುಸ್ತಕವನ್ನು ಸೇರಿಸಲಾಗಿತ್ತು.
ಕೇಸರೀಕರಣದ ಆರೋಪ ನಿರಾಧಾರ, ಇಂತಹ ಆರೋಪಗಳನ್ನು ಕಣ್ಣೂರು ವಿವಿ ವಿರುದ್ಧ ಮಾಡಿದರೆ ಅಂತುಹುದೇ ಆರೋಪಗಳನ್ನು ಜವಾಹರ್ಲಾಲ್ ನೆಹರೂ ವಿವಿ ಕುರಿತೂ ಮಾಡಬಹುದು, ಪಠ್ಯದಲ್ಲಿ ಸಾವರ್ಕರ್, ಗೋಲ್ವಾಲ್ಕರ್ ಸೇರ್ಪಡೆ ತಪ್ಪಲ್ಲ ಎಂದು ಹೇಳಿದರು.
ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಆರ್ ಬಿಂದು ಈ ವಿವಾದ ಕುರಿತಂತೆ ಸ್ಪಷ್ಟೀಕರಣ ಕೇಳಿರುವ ಬಗ್ಗೆ ಅವರ ಗಮನ ಸೆಳೆದಾಗ ಈಗಾಗಲೇ ಉತ್ತರಿಸಿರುವುದಾಗಿ ತಿಳಿಸಿದ್ದಾರೆ. ಶೈಕ್ಷಣಿಕ ಪಠ್ಯಕ್ರಮದಲ್ಲಿ ಮತೀಯ ಶಕ್ತಿಗಳು ಜಾಗ ಪಡೆಯುತ್ತಿರುವುದು ಅಪಾಯಕಾರಿ ಎಂದು ಸಚಿವೆ ಈ ಹಿಂದೆ ಹೇಳಿದ್ದರು.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications