ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಸಮ್ಮತಿ
ಕಾಸರಗೋಡು, ಜೂನ್ 8: ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಚುನಾವಣಾ ಆಕ್ರಮ ಆರೋಪ ಕೇಳಿ ಬಂದಿದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಕಾಸರಗೋಡು ಕೋರ್ಟ್ ಸಮ್ಮತಿ ನೀಡಿದೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ ಸುರೇಂದ್ರನ್ ಸ್ಪರ್ಧಿಸಿದ್ದರು. ತಮ್ಮ ಎದುರಾಳಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಪ್ರಭಾವ ಬೀರಿ, ಲಂಚ ನೀಡಿದ ಆರೋಪ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮೇಲಿದೆ. ಕಾಸರಗೋಡು ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸಿದ್ದ ಸಿಪಿಐ(ಎಂ) ಅಭ್ಯರ್ಥಿ ವಿವಿ ರಮೇಶನ್ ಎಂಬುವರು ದೂರು ದಾಖಲಿಸಿದ್ದರು. ಈಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸುರೇಂದ್ರನ್ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ.

ಕೆ ಸುರೇಂದ್ರನ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 171(ಬಿ) ಮತ್ತು (ಇ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಸ್ ಪಿ ಅಭ್ಯರ್ಥಿ ಕೆ ಸುಂದರ ಅವರು ಕೆ ಸುರೇಂದ್ರನ್ ಬಗ್ಗೆ ಆರೋಪ ಮಾಡಿ 2.5 ಲಕ್ಷ ರು ಹಾಗೂ ಸ್ಮಾರ್ಟ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲು ಸೂಚಿಸಿದ್ದರು. ಒಂದು ವೇಳೆ ಕೆ ಸುರೇಂದ್ರನ್ ಗೆದ್ದಿದ್ದರೆ 15 ಲಕ್ಷ ರು, ಕರ್ನಾಟಕದಲ್ಲಿ ಒಂದು ಬಂಗಲೆ, ವೈನ್ ಸ್ಟೋರ್ ನೀಡುವ ಭರವಸೆ ಸಿಕ್ಕಿತ್ತು ಎಂದಿದ್ದಾರೆ.
2016 ರಲ್ಲಿ ಕೆ ಸುರೇಂದ್ರನ್ ಕೇವಲ 89 ಮತಗಳಿಂದ ಸೋಲು ಕಂಡಿದ್ದರು. ಈ ಬಾರಿ ಕೂಡಾ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದಾರೆ. ತಮ್ಮ ಹೆಸರಿಗೆ ಸಾಮ್ಯತೆ ಇರುವ ಇತರೆ ಸ್ಪರ್ಧಿಗಳಿಗೆ ಆಮಿಷವೊಡ್ಡಿ ಸ್ಪರ್ಧಾಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ ಎಂದು ಇತರೆ ಪಕ್ಷಗಳು ಆರೋಪಿಸಿವೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರು ಸುರೇಂದ್ರನ್ ರನ್ನು 745 ಮತಗಳ ಅಂತರದಿಂದ 2021ರಲ್ಲಿ ಸೋಲಿಸಿದ್ದಾರೆ. ಜನತಿಪತ್ಯ ರಾಷ್ಟ್ರೀಯ ಪಕ್ಷ ಕೂಡಾ ಸುರೇಂದ್ರನ್ ವಿರುದ್ಧ ಆಮಿಷದ ಆರೋಪ ಮಾಡಿದೆ.
ಜೆಆರ್ ಪಿ ರಾಜ್ಯಾಧ್ಯಕ್ಷರಾದ ಸಿಕೆ ಜಾನು ಅವರಿಗೆ ತಿರುವನಂತಪುರಂನ ಹೋಟೆಲ್ ವೊಂದರಲ್ಲಿ 10 ಲಕ್ಷ ರು ಹಣ ಸಂದಾಯವಾಗಿದೆ ಎಂದು ಪಕ್ಷದ ರಾಜ್ಯ ಖಜಾಂಚಿ ಪ್ರಸೀತಾ ಅಳೀಕೋಡ್ ಆರೋಪಿಸಿದ್ದಾರೆ. ಈ ಕುರಿತಂತೆ ಆಡಿಯೋ ರಿಲೀಸ್ ಮಾಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications