ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಸರಗೋಡು ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ:CPM ಮುಖಂಡ ಪೊಲೀಸ್ ವಶಕ್ಕೆ

|
Google Oneindia Kannada News

ಕಾಸರಗೋಡು, ಫೆಬ್ರವರಿ 20: ಕೇರಳದ ಕಾಸರಗೋಡಿನಲ್ಲಿ ಭಾನುವಾರ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನು ಕೊಲೆಗೈದ ಘಟನೆಗೆ ಸಂಬಂಧಿಸಿದಂತೆ ಸಿಪಿಎಂ ಮುಖಂಡರೊಬ್ಬರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ ಕಾಸರಗೋಡಿನಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ

ಸಿಪಿಎಂ ನ ಪೆರಿಯಾ ಸ್ಥಳೀಯ ಸಮಿತಿ ಸದಸ್ಯ ಎ ಪೀತಾಂಬರನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ರಾಹುಲ್ ಆಕ್ರೋಶ ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ರಾಹುಲ್ ಆಕ್ರೋಶ

ಕೃಪೇಶ್ ಮತ್ತು ಶರತ್ ಎಂಬ ಕಾಂಗ್ರೆಸ್ ನ ಇಬ್ಬರು ಕಾರ್ಯಕರ್ತರನ್ನು ಕಾರಸಗೋಡಿನ ಐತಿಹಾಸಿಕ ಬೇಕಲ್ ಕೋಟೆಯ ಬಳಿ ಪೆರಿಯ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿತ್ತು.

Kasargod Congress workers murder case: CPM leader held

ಈ ಘಟನೆಯನ್ನು ಕಟು ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, 'ಹಂತಕರಿಗೆ ಶಿಕ್ಷೆ ಕೊಡಿಸುವವರೆಗೆ ನಮ್ಮ ಪಕ್ಷ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ, ಕಾಸರಗೋಡಿನಲ್ಲಿ ನಮ್ಮ ಯುವ ಕಾಂಗ್ರೆಸ್ ಕುಟುಂಬದ ಇಬ್ಬರು ಸದಸ್ಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತರಾದ ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ನೈತಿಕ ಬೆಂಬಲ ನೀಡಲಿದೆ' ಎಂದಿದ್ದರು.

English summary
The Special Investigation Team (SIT) probing the twin murders of Youth Congress workers, Sharath Lal and Kripesh, at Periya arrested CPM Periya local committee member A. Peethambaran on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X