ಕೊರೊನಾ ಕಟ್ಟಿಹಾಕುವಲ್ಲಿ ದೇಶಕ್ಕೆ ಮಾದರಿಯಾದ ಕಾಸರಗೋಡು!
ತಿರುವನಂತಪುರಂ, ಏಪ್ರಿಲ್ 23: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಕೋವಿಡ್-19 ನಿಂದ ಸಾವಿನ ಪ್ರಮಾಣ ಕೂಡ ಹೆಚ್ಚಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲು ಹಲವು ದೇಶಗಳು ಸಮರೋಪಾದಿಯ ಕಾರ್ಯಗಳನ್ನು ಕೈಗೊಳ್ಳುತ್ತಿವೆ.
ಅತ್ತ ಕೊರೊನಾ ಮಹಾಮಾರಿಯನ್ನು ಕಟ್ಟಿಹಾಕಲು ಹಲವು ರಾಷ್ಟ್ರಗಳು ಒದ್ದಾಡುತ್ತಿದ್ದರೆ, ಇತ್ತ ಕೊರೊನಾ ವೈರಸ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ-ಕೇರಳ ಗಡಿಯಲ್ಲಿ ಇರುವ ಪುಟ್ಟ ಜಿಲ್ಲೆ ಕಾಸರಗೋಡು ಮಾದರಿಯಾಗಿದೆ.
ವಿದೇಶಗಳಿಂದ ಹಿಂದಿರುಗಿದವರೇ ಹೆಚ್ಚು ಮಂದಿ ಇದ್ದ ಕಾಸರಗೋಡಿಗೆ ಹೆಚ್ಚು ಅಪಾಯ ಕಾದಿದೆ ಎಂದು ಮೊದಲು ಅಂದಾಜಿಸಲಾಗಿತ್ತು. ಆದ್ರೆ, ಅಲ್ಲಿನ ವೈದ್ಯರು ಮತ್ತು ಹೆಲ್ತ್ ವರ್ಕರ್ಸ್ ಪಟ್ಟ ಶ್ರಮ, ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಜನತೆ ಕೊಟ್ಟ ಸಹಕಾರದಿಂದ ಕಾಸರಗೋಡಿನಲ್ಲಿ ಕೊರೊನಾ ವೈರಸ್ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ.

ಹೆಚ್ಚು ಮಂದಿ ಗುಣಮುಖರಾಗಿದ್ದಾರೆ
168 ದೃಢಪಟ್ಟ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಪೈಕಿ 113 ಮಂದಿ ಈಗಾಗಲೇ ಸಂಪೂರ್ಣವಾಗಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಡಿಸ್ಚಾರ್ಚ್ ಆಗಿದ್ದಾರೆ. ಕಾಸರಗೋಡಿನಲ್ಲಿ ರೋಗ ಗುಣಮುಖ ಹೊಂದಿರುವ ಪ್ರಮಾಣ 67.2% ರಷ್ಟಿದೆ. ಹಾಗ್ನೋಡಿದ್ರೆ, ಇಡೀ ಭಾರತದಲ್ಲಿ ಕೋವಿಡ್-19 ಗುಣಮುಖ ಹೊಂದಿರುವ ಪ್ರಾಣ ಸರಾಸರಿ 13.6% ರಷ್ಟಿದೆ.

ಅಪಾಯದಿಂದ ಪಾರು
ಅಷ್ಟಕ್ಕೂ, ಕಾಸರಗೋಡಿನಲ್ಲಿ 15.38% ರಷ್ಟು ಜನತೆ ವಿದೇಶಗಳಿಂದ ಹಿಂದಿರುಗಿದ್ದರು. ಹೀಗಾಗಿ, ವಿದೇಶಗಳಿಂದ ಬಂದವರಲ್ಲಿ ಇದ್ದ ಸೋಂಕು ಸ್ಥಳೀಯರಿಗೆ ಹಬ್ಬದಂತೆ ತಡೆಯುವುದು ಕಾಸರಗೋಡು ಜಿಲ್ಲಾಡಳಿತಕ್ಕೆ ದೊಡ್ಡ ಟಾಸ್ಕ್ ಆಗಿತ್ತು. ವಿದೇಶಗಳಿಂದ ವಾಪಸ್ ಆದವರ ಕಾಂಟಾಕ್ಟ್ ಟ್ರೇಸ್ ಮಾಡಿ, ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿ, ಬೇಗ ಕ್ವಾರಂಟೈನ್ ನಲ್ಲಿ ಇಟ್ಟ ಪರಿಣಾಮ ಕಾಸರಗೋಡಿನ ಜನ ದೊಡ್ಡ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಸೋಂಕಿತರ ಪ್ರಮಾಣ ಗಣನೀಯ ಇಳಿಕೆ
ಸಾಮಾಜಿಕ ಅಂತರದ ಮಹತ್ವ ಮತ್ತು ಕೋವಿಡ್-19 ಬಗ್ಗೆ ಜಿಲ್ಲಾಡಳಿತ ಕೈಗೊಂಡ ಜಾಗೃತಿ ಕಾರ್ಯಕ್ರಮಗಳಿಂದ ಕಾಸರಗೋಡಿನಲ್ಲಿ ಸೋಂಕಿತರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.

ಒಂದೂ ಸಾವು ಸಂಭವಿಸಿಲ್ಲ
ಮತ್ತೊಂದು ಗಮನಾರ್ಹ ಅಂಶ ಏನಂದ್ರೆ, ಕಾಸರಗೋಡಿನಲ್ಲಿ ಕೋವಿಡ್-19 ನಿಂದ ಈವರೆಗೂ ಒಂದೇ ಒಂದು ಸಾವು ಸಂಭವಿಸಿಲ್ಲ. ಹೆಚ್ಚು ಕೊರೊನಾ ಸೋಂಕಿತರು, ನಿಯಮಿತ ವೈದ್ಯಕೀಯ ಸೌಲಭ್ಯ ಇದ್ದರೂ, ಕೊರೊನಾ ವೈರಸ್ ಸೋಂಕನ್ನು ತಡೆಯುವಲ್ಲಿ ಕಾಸರಗೋಡು ನಿಜಕ್ಕೂ ಯಶಸ್ವಿಯಾಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications