ಶಬರಿಮಲೆ ಪ್ರತಿಭಟನೆ: 39,979 ಜನರ ಮೇಲೆ ಕೇಸು, 3917 ಮಂದಿ ಬಂಧನ
ತಿರುವನಂತಪುರಂ, ಜನವರಿ 05: ಶಬರಿಮಲೆಗೆ ಮಹಿಳೆಯರಿಬ್ಬರು ಪ್ರವೇಶಿಸಿದ ನಂತರ ಉಂಟಾದ ಗಲಭೆಗಳಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರು 3917 ಜನರನ್ನು ಈವರೆಗೆ ಬಂಧಿಸಿದ್ದಾರೆ.
ಹಿಂಸೆ, ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ, ಮಾರಕಾಸ್ತ್ರ ಬಳಕೆ, ಶಾಂತಿ ಕದಡುವ ಯತ್ನ ಇನ್ನೂ ಹಲವು 1286 ಪ್ರಕರಣಗಳನ್ನು ಬರೋಬ್ಬರಿ 37,979 ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದಾರೆ ಕೇರಳ ಪೊಲೀಸರು.
ಕೇರಳ: ಬಿಜೆಪಿ, ಸಿಪಿಎಂ ಮುಖಂಡರ ಮನೆ ಮೇಲೆ ಕಚ್ಚಾಬಾಂಬ್ ದಾಳಿ
ಈ ಅಂಕಿ-ಅಂಶ ಶನಿವಾರ ಬೆಳಿಗ್ಗೆ ದೊರೆತಿದ್ದು, ಶನಿವಾರ ಸಹ ಬಂಧನಗಳು ನಡೆದಿವೆ. ಕೇಸು ದಾಖಲಿಸುವುದು ಸಹ ಮುಂದುವರೆದಿದೆ.
ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಜನವರಿ 1 ರ ಇಳಿ ರಾತ್ರಿ 3:45 ರ ವೇಳೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ ನಂತರ ಕೇರಳದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಗಳು ಹಿಂಸಾರೂಪ ತಳೆದಿವೆ.
ಶಬರಿಮಲೆ ವಿಚಾರದಲ್ಲಿ ಕೇರಳ ಸರಕಾರ ಹಠಮಾರಿತನ ಬಿಡಬೇಕು: ಪೇಜಾವರ ಶ್ರೀ
ಹಿಂಸಾಚಾರದಿಂದಾಗಿ ಈಗಾಗಲೇ ಹಲವರು ಗಾಯಗೊಂಡಿದ್ದಾರೆ. ಕೆಲವರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಸಿಪಿಎಂ ಮತ್ತು ಬಿಜೆಪಿ ಎರಡೂ ಪಕ್ಷದ ಮುಖಂಡರ ಮನೆಗಳ ಮೇಲೆ ಕಚ್ಚಾ ಬಾಂಬ್ ದಾಳಿಗಳು ನಡೆದಿವೆ.
ಅಯ್ಯಪ್ಪ! ಕಣ್ಣೀರು ತುಂಬಿಕೊಂಡೇ ತನ್ನ ಕರ್ತವ್ಯ ನಿರ್ವಹಿಸಿದ ಆ ಪತ್ರಕರ್ತೆ
ಪರಿಸ್ಥಿತಿಯನ್ನು ತಿಳಿಗೊಳಿಸಲೆಂದು ಪೊಲೀಸರು ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವ ಜನರನ್ನು ಬಂಧಿಸುತ್ತಿದ್ದಾರೆ. ಇನ್ನೂ ಕೆಲವು ದಿನಗಳಲ್ಲಿ ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.