ಕೇರಳ ಚುನಾವಣೆ: ಗೆದ್ದ-ಬಿದ್ದ ಸಿನಿ ತಾರೆಯರು ಯಾರ್ಯಾರು?
ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ನಿನ್ನೆಯಷ್ಟೆ ಬಂದಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತಿದ್ದು, ಮತ್ತೊಮ್ಮೆ ಪಿಣರಾಯಿ ವಿಜಯನ್ ಸಿಎಂ ಆಗುವುದು ಖಾತ್ರಿಯಾಗಿದೆ.
ನೆರೆಯ ತಮಿಳುನಾಡು, ಆಂಧ್ರಪ್ರದೇಶಗಳಂತೆ ಸಿನಿಮಾ ನಟ-ನಟಿಯರು ಕೇರಳದಲ್ಲಿ ಸಕ್ರಿಯ ರಾಜಕೀಯದ ಭಾಗವಾಗಿರಲಿಲ್ಲ. ಬಹಳ ಇತ್ತೀಚೆಗೆ ಸಿನಿಮಾ ನಟರು ರಾಜಕೀಯದಲ್ಲಿ ಗುರುತಿಸಿಕೊಂಡರು, ಈಗಲೂ ಸಹ ಕಡಿಮೆ ಸಂಖ್ಯೆಯ ನಟರು ಸಕ್ರಿಯ ರಾಜಕೀಯದಲ್ಲಿ ತೊಡಗುತ್ತಾರೆ.
ಈ ಬಾರಿಯ ಕೇರಳ ವಿಧಾನಸಭೆ ಚುನಾವಣೆಗೆ ಕೆಲವು ಸಿನಿಮಾ ನಟ-ನಟಿಯರು ಸ್ಪರ್ಧೆ ಮಾಡಿದ್ದರು. ಆದರೆ ಗೆದ್ದವರು ಯಾರು? ಸೋತವರು ಯಾರು? ಯಾವ ಪಕ್ಷದಿಂದ ಸ್ಪರ್ಧಿಸಿದ್ದರು? ಇಲ್ಲಿದೆ ಪಟ್ಟಿ.
ಮಲಯಾಳಂ ಹಾಗೂ ಕೆಲವು ತಮಿಳು ಸಿನಿಮಾಗಳಲ್ಲಿ ಸಹ ನಟಿಸಿರುವ ನಟ ಮುಖೇಶ್ ಅವರು ಸಿಪಿಐ(ಎಂ) ಪಕ್ಷದಿಂದ ಕೇರಳದ ಕೊಲ್ಲಂ ವಿಧಾನಸಭೆ ಕ್ಷೇತ್ರಕ್ಕೆ ಉಮೇದುವಾರಿಕೆ ಹೂಡಿದ್ದರು. ಎದುರಾಳಿ ಕಾಂಗ್ರೆಸ್ ವಿರುದ್ಧ 1863 ಮತಗಳ ಅಂತರದ ಗೆಲುವನ್ನು ಮುಖೇಶ್ ಸಾಧಿಸಿದ್ದಾರೆ.

ನಿರೀಕ್ಷೆ ಹುಟ್ಟಿಸಿದ್ದ ಸುರೇಶ್ ಗೋಪಿಗೆ ಸೋಲು
ಈ ಬಾರಿ ಕುತೂಹಲ ಕೆರಳಿಸಿದ್ದು ನಟ ಸುರೇಶ್ ಗೋಪಿ ಕ್ಷೇತ್ರ. ಹಲವು ವರ್ಷಗಳಿಂದ ಮಲಯಾಳಂ ಸಿನಿಮಾರಂಗದಲ್ಲಿರುವ ಸುರೇಶ್ ಗೋಪಿ ಎನ್ಡಿಎ ಅಭ್ಯರ್ಥಿಯಾಗಿ ತ್ರಿಶೂರ್ನಿಂದ ಸ್ಪರ್ಧಿಸಿದ್ದರು. ಕುತೂಹಲ ಕೆರಳಿಸಿದ್ದ ಈ ಕಣದಲ್ಲಿ ಸುರೇಶ್ ಗೋಪಿಗೆ ಮೂರನೇ ಸ್ಥಾನ.

ಕಾಮಿಡಿ ನಟ ಧರ್ಮಜನ್ ಬೋಲ್ಗಟ್ಟಿಗೆ ಸೋಲು
ಮಲಯಾಳಂ ಸಿನಿಮಾ ಕಾಮಿಡಿ ನಟ ಧರ್ಮಜನ್ ಬೋಲ್ಗಟ್ಟಿ ಕೇರಳದ ಬಾಲುಸೇರಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಿದ್ದರು ಆದರೆ ಯುವಕ ಸಚಿನ್ ದೇವ್ ಭಾರಿ ಅಂತರದಿಂದ ಧರ್ಮಜನ್ ಬೋಲ್ಗಟ್ಟಿ ಅನ್ನು ಸೋಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಜಿ.ಕೃಷ್ಣಕುಮಾರ್ಗೆ ಸೋಲು
ತಿರುವನಂತಪುರಂ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಟಿವಿ ಹಾಗೂ ಸಿನಿಮಾ ನಟ ಕೃಷ್ಣಕುಮಾರ್ ಜಿ ಸಹ ತೀವ್ರ ನಿರಾಸೆ ಅನುಭವಿಸಿದ್ದಾರೆ. ಮೂರನೇ ಸ್ಥಾನಕ್ಕೆ ಅವರು ತೃಪ್ತಿ ಪಟ್ಟುಕೊಂಡಿದ್ದಾರೆ.

ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಅನೂಪ್
ಟಿವಿ ಧಾರಾವಾಹಿ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟಿ ಪ್ರಿಯಾಂಕಾ ಅನೂಪ್ ಡೆಮಾಕ್ರೆಟಿಕ್ ಸೋಷಿಯಲ್ ಜಸ್ಟಿಸ್ ಪಕ್ಷದ ಅಭ್ಯರ್ಥಿಯಾಗಿ ಅರೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಇನ್ನು ಟಿವಿ ನಟ ವಿವೇಕ್ ಗೋಪನ್ ಅವರು ಚವಾರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications