Today's Chanakya: ಪಿಣರಾಯಿ ವಿಜಯನ್ ಸೀಟು ಭದ್ರ
ಕೇರಳದಲ್ಲಿ ಆಡಳಿತಾರೂಢ ಪಿಣರಾಯಿ ವಿಜಯನ್ ಸರ್ಕಾರ ಮುಂದುವರೆಯಲಿದೆ ಎನ್ನುತ್ತಿದೆ ಟುಡೇಸ್ ಚಾಣಕ್ಯ ಮತದಾನೋತ್ತರ ಸಮೀಕ್ಷೆ.
ನಿಫಾ, ಭೀಕರ ಪ್ರವಾಹ, ಕೊರೊನಾ ಪರಿಸ್ಥಿತಿಯನ್ನು ಯಶಸ್ವಿಯಾಗಿಯೇ ನಿರ್ವಹಿಸಿದರು ಎಂಬ ಜನಾಭಿಪ್ರಾಯವುಳ್ಳ ಪಿಣರಾಯಿ ವಿಜಯನ್ ಸರ್ಕಾರ ಈ ವಿಧಾನಸಭೆಯಲ್ಲಿ ಉತ್ತಮ ಬಹುಮತದಿಂದಲೇ ಮರಳಿ ಆಯ್ಕೆ ಆಗಲಿದ್ದಾರೆ ಎಂದಿದೆ ಟುಡೇಸ್ ಚಾಣಕ್ಯ ಸಮೀಕ್ಷೆ.
ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ 102 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಮುನ್ನಡೆಸುತ್ತಿರುವ ಯುಡಿಎಫ್ 35 ಕ್ಷೇತ್ರಗಳಿಗಷ್ಟೆ ಸೀಮಿತಗೊಳ್ಳಲಿದೆ.

ಸಮೀಕ್ಷೆಯ ಪ್ರಕಾರ ಬಿಜೆಪಿಯು ಕೇರಳ ವಿಧಾನಸಭೆ ಚುನಾವಣೆಯಲ್ಲಿ ತನ್ನ ಸ್ಥಾನವನ್ನು ತುಸುವೇ ಉತ್ತಮ ಗೊಳಿಸಿಕೊಳ್ಳಲಿದೆ ಒಂದು ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದೆ ಸಮೀಕ್ಷೆ. ಎಲ್ಡಿಎಫ್, ಯುಡಿಎಫ್, ಬಿಜೆಪಿ ಹೊರತಾಗಿ ಇತರೆ ಪಕ್ಷಗಳು 3 ಸ್ಥಾನಗಳನ್ನು ಗೆಲ್ಲಲಿವೆ.
ಕಳೆದ ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ನೋಡುವುದಾದರೆ ಅಧಿಕಾರಾರೂಢ ಎಲ್ಡಿಎಫ್ 91, ಯುಡಿಎಫ್ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.
ಎಲ್ಡಿಎಫ್ನಲ್ಲಿ ಸಿಪಿಐ(ಎಂ), ಸಿಪಿಐ, ಜೆಡಿಎಸ್, ಕೇರಳ ಕಾಂಗ್ರೆಸ್(ಎಂ), ಎನ್ಸಿಪಿ, ಐಎನ್ಎಲ್, ಆರ್ಎಸ್ಪಿ, ಸೆಕ್ಯೂಲರ್ ಕಾಂಗ್ರೆಸ್ ಇನ್ನೂ ಕೆಲವು ಪಕ್ಷಗಳಿವೆ. ಮೈತ್ರಿಕೂಟದ ನಾಯಕ ಪಿಣರಾಯಿ ವಿಜಯನ್.
ಯುಡಿಎಫ್ ಮೈತ್ರಿಕೂಟವನ್ನು ಕಾಂಗ್ರೆಸ್ ಮುನ್ನಡೆಸುತ್ತಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕೇರಳ ಕಾಂಗ್ರೆಸ್, ಎನ್ಸಿಕೆ, ರೆವೆಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಕಮ್ಯೂನಿಸ್ಟ್ ಮಾರ್ಕ್ಸಿಸ್ಟ್ ಪಾರ್ಟಿ ಇನ್ನೂ ಕೆಲವು ಪಕ್ಷಗಳು ಇವೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications