ಅತ್ಯಾಚಾರ ಪ್ರಕರಣ ವರದಿ ಮಾಡಿದ್ದಕ್ಕೆ ಮಾಧ್ಯಮಗಳಿಗೆ ಚರ್ಚ್ ಬಹಿಷ್ಕಾರ
ಕೊಚ್ಚಿ, ಡಿಸೆಂಬರ್ 13: ಕ್ರೈಸ್ತ ಸನ್ಯಾಸಿನಿಯರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಿಂದ ಸದ್ದು ಮಾಡಿದ್ದ ಕೇರಳದ ಸೈರೊ ಮಲಾಬಾರ್ ಕ್ಯಾಥೋಲಿಕ್ ಚರ್ಚ್ ಮತ್ತೊಂದು ವಿವಾದ ಸೃಷ್ಟಿಸಿದೆ.
ಚರ್ಚ್ನ ವಿರುದ್ಧ ಮಾಧ್ಯಮಗಳು ಸುಳ್ಳು ಕಥೆ ಬರೆಯುತ್ತಿವೆ ಎಂದು ಆರೋಪಿಸಿ ಅವುಗಳನ್ನು ಬಹಿಷ್ಕರಿಸುವುದಾಗಿ ಚರ್ಚ್ ಹೇಳಿದೆ.
ಚರ್ಚ್ನ ಮುಖವಾಣಿ ಪತ್ರಿಕೆ 'ಕ್ಯಾಥೋಲಿಕಸಭಾ'ದಲ್ಲಿ ಮಾಧ್ಯಮಗಳ ವಿರುದ್ಧ ಹರಿಹಾಯ್ದಿರುವ ಲೇಖನದಲ್ಲಿ, ಎರಡು ಮಾಧ್ಯಮ ಸಂಸ್ಥೆಗಳ ಹೆಸರನ್ನು ಸಹ ಉಲ್ಲೇಖಿಸಲಾಗಿದೆ.

'ಚರ್ಚ್ ವಿರುದ್ಧದ ಸಂಚು: ಭಕ್ತರು ಮಾಧ್ಯಮವನ್ನು ಬಹಿಷ್ಕರಿಸುತ್ತಾರೆ' ಎಂಬ ಶೀರ್ಷಿಕೆಯ ಲೇಖನದಲ್ಲಿ, ಬಿಷಪ್ ಫ್ರಾಂಕೊ ಮುಲಕ್ಕಲ್ ಮತ್ತು ಕಾರ್ಡಿನಲ್ ಜಾರ್ಜ್ ಮಾರ್ ಅಲೆಂಚೆರ್ರಿ ಅವರ ವಿರುದ್ಧ ಪತ್ರಿಕೆಗಳು ಮತ್ತು ಸುದ್ದಿವಾಹಿನಿಗಳು ಸಂಚು ರೂಪಿಸಿವೆ ಎಂದು ಆರೋಪಿಸಲಾಗಿದೆ.
'ರಾತ್ರಿ ವೇಳೆ ಚರ್ಚೆಗಳನ್ನು ನಡೆಸುವ ಮತ್ತು ವರದಿಗಳನ್ನು ಬಿತ್ತರಿಸುವ ಎಲ್ಲ ಮಾಧ್ಯಮ ಸಂಸ್ಥೆಗಳು ತಮ್ಮ ಮಾಲೀಕರ ರಾಜಕೀಯ, ಆರ್ಥಿಕ ಮತ್ತು ಧಾರ್ಮಿಕ ಉದ್ದೇಶಗಳನ್ನು ಮನದಲ್ಲಿಟ್ಟುಕೊಂಡಿವೆ. ಬಹುಸಂಖ್ಯಾತ ಸಮುದಾಯದವರನ್ನು ಓಲೈಸಲು ಇತರರ ಭಾವನೆಗಳಿಗೆ ಧಕ್ಕೆ ತರುವ ವ್ಯವಹಾರವನ್ನು ಮಾಧ್ಯಮಗಳು ಮಾಡುತ್ತಿವೆ. ನಂಬಿಕೆಗಳನ್ನು ಆಚರಣೆಗಳನ್ನು ಅಣಕಿಸುವ ಮೂಲಕ ಮಾಧ್ಯಮಗಳು ತಮ್ಮ ಮೂಲ ಗುರಿಯಾದ ಚರ್ಚ್ಗಳನ್ನು ಮತ್ತು ಅದರ ನಾಯಕತ್ವವನ್ನು ಅವಮಾನಿಸುವ ಕೆಲಸ ಮಾಡುತ್ತಿವೆ ಎಂದು ಚರ್ಚ್ನ ಆನ್ಲೈನ್ ಪತ್ರಿಕೆ ಹೇಳಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications