ಕೇರಳ ಸ್ಥಳೀಯ ಸಂಸ್ಥೆ ಉಪಚುನಾವಣೆ: 30ರಲ್ಲಿ 16 ಸ್ಥಾನ ಎಲ್ ಡಿಎಫ್ ಗೆ
ತಿರುವನಂತಪುರ, ಫೆಬ್ರವರಿ 16: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿವಾದ ಹೊರತಾಗಿಯೂ ಕೇರಳ ರಾಜ್ಯದ ವಿವಿಧೆಡೆ ಸ್ಥಳೀಯ ಸಂಸ್ಥೆಗಳಿಗೆ ನಡೆದ ಉಪಚುನಾವಣೆಯಲ್ಲಿ 30 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ ಡಿಎಫ್ ಗೆದ್ದುಕೊಂಡಿದೆ. ಶುಕ್ರವಾರದಂದು ಫಲಿತಾಂಶ ಬಂದಿದೆ.
ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಹನ್ನೆರಡು ಸ್ಥಾನಗಳನ್ನು ಪಡೆದಿದೆ. ರೆವಲ್ಯೂಷನರಿ ಮಾರ್ಕ್ಸಿಸ್ಟ್ ಪಾರ್ಟಿ ಹಾಗೂ ಕಾಂಗ್ರೆಸ್ ನ ಭಿನ್ನಮತೀಯರು ಎರಡು ಸ್ಥಾನಗಳನ್ನು ಪಡೆದಿದ್ದಾರೆ. ಶಬರಿಮಲೆ ವಿಚಾರದಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಈ ಚುನಾವಣೆ ಬಗ್ಗೆ ದೊಡ್ಡ ನಿರೀಕ್ಷೆಯಲ್ಲಿತ್ತು. ಆದರೆ ಒಂದು ಸ್ಥಾನ ಕೂಡ ಗೆಲ್ಲಲು ಆಗಿಲ್ಲ.
ಈ ಉಪಚುನಾವಣೆಯಲ್ಲಿ ಯುಡಿಎಫ್ ಐದು ಸ್ಥಾನಗಳನ್ನು ಕಳೆದುಕೊಂಡಿದೆ. ಆ ಪೈಕಿ ನಾಲ್ಕು ಸ್ಥಾನವನ್ನು ಎಲ್ ಡಿಎಫ್ ಗೆದ್ದುಕೊಂಡಿದೆ. ಒಂದನ್ನು ಕಾಂಗ್ರೆಸ್ ಭಿನ್ನಮತೀಯ ಗೆದ್ದಿದ್ದಾರೆ. ಇನ್ನು ಯುಡಿಎಫ್ ಗೆದ್ದಿರುವ ಸ್ಥಾನಗಳ ಪೈಕಿ ಐದು ಆಡಳಿತಾರೂಢ ಎಲ್ ಡಿಎಫ್ ನ ತೆಕ್ಕೆಯಲ್ಲಿ ಇದ್ದಂಥವು.

ಕಳೆದ ವರ್ಷ ನವೆಂಬರ್ ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಮೂವತ್ತೊಂಬತ್ತು ಸ್ಥಾನಗಳ ಪೈಕಿ ಎಲ್ ಡಿಎಫ್ ಇಪ್ಪತ್ತೊಂದು, ಯುಡಿಎಫ್ ಹನ್ನೆರಡು ಹಾಗೂ ಬಿಜೆಪಿ ಎರಡು ಸ್ಥಾನದಲ್ಲಿ ಜಯ ಗಳಿಸಿದ್ದವು.
ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನ ಮಾಡುವುದಕ್ಕೆ ಬದ್ಧವಾಗಿರುವುದಾಗಿ ಎಲ್ ಡಿಎಫ್ ಸರಕಾರ ತಿಳಿಸಿತ್ತು. ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಹಾಗೂ ಭಕ್ತರಿಂದ ಭಾರೀ ಪ್ರಮಾಣದಲ್ಲಿ ಹಿಂಸಾಚಾರ, ಪ್ರತಿಭಟನೆ ನಡೆಸಲಾಗಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications