ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಗೆದ್ದ ಅತಿ ಕಿರಿಯ ಅಭ್ಯರ್ಥಿ ರೇಷ್ಮಾ
ಪಥನಂತಿಟ್ಟ, ಡಿ. 16: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಪಂಚಾಯಿತಿಗೆ ಆಯ್ಕೆಯಾದ ಸಾಧನೆ ದಾಖಲಾಗಿದೆ. ಕೊನ್ನಿ ಪಂಚಾಯತಿಯಿಂದ ಆಯ್ಕೆಯಾಗಿರುವ ರೇಷ್ಮಾ ಮರಿಯಂ ರಾಯ್ ವಯಸ್ಸು 21 ವರ್ಷ ಮಾತ್ರ.
ಕೊನ್ನಿ ಆರುವಪುಳಂ ಪಂಚಾಯತಿಯ 11 ವಾರ್ಡ್ ನಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರೇಷ್ಮಾ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕುತೂಹಲ ಮೂಡಿತ್ತು. ನವೆಂಬರ್ 19ರಂದು ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನಾಂಕವಾಗಿತ್ತು.
ಇದಕ್ಕೂ ಒಂದು ದಿನ ಮುನ್ನ ನಾಮಪತ್ರ ಸಲ್ಲಿಸಲು ಬೇಕಾದ ಕನಿಷ್ಠ ವಯಸ್ಸು 21ಕ್ಕೆ ರೇಷ್ಮಾ ಕಾಲಿರಿಸಿದರು. ಹೀಗಾಗಿ, 21 ವರ್ಷ ಒಂದು ದಿನ ವಯಸ್ಸಿನ ರೇಷ್ಮಾ ನಾಮಪತ್ರ ಸಲ್ಲಿಸಲು ಸಾಧ್ಯವಾಯಿತು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯ ಅತಿ ಕಿರಿಯ ಅಭ್ಯರ್ಥಿ ಎನಿಸಿಕೊಂಡರು.

ಕಾಂಗ್ರೆಸ್ ಬೆಂಬಲಿತ ಕುಟುಂಬ
ರೇಷ್ಮಾ ಅವರ ಕುಟುಂಬ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುತ್ತಾ ಬಂದಿತ್ತು. ಆದರೆ, ಈ ಬಾರಿ ಸಿಪಿಐ ಅಭ್ಯರ್ಥಿಯಾಗಲು ಕರೆ ಬಂದಾಗ ಸಂತಸದಿಂದ ಸ್ವೀಕರಿಸಿದರು. ಬಿರುಸಿನ ಚುನಾವಣಾ ಪ್ರಚಾರ ನಡೆಸಿ, ಜನರ ಆಶೋತ್ತರಗಳನ್ನು ಆಲಿಸಿದರು. ಜನರಲ್ಲಿ ಹೊಸ ಭರವಸೆ ಮೂಡಿಸಿದರು.

ಎಸ್ಎಫ್ಐ ಸದಸ್ಯೆ
ಕೊನ್ನಿ ವಿಎನ್ಎಸ್ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿರುವ ರೇಷ್ಮಾ ಅವರು ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಸಕ್ರಿಯ ಸದಸ್ಯೆಯಾಗಿದ್ದಾರೆ. DYFI ಜಿಲ್ಲಾ ಘಟಕ ಸಮಿತಿಯ ಪ್ರಮುಖ ಸದಸ್ಯೆಯಾಗಿದ್ದಾರೆ. ಈ ಬಾರಿ ಪಂಚಾಯಿತಿ ಚುನಾವಣೆಯಲ್ಲಿ ಯುಡಿಎಫ್ ಹಾಗೂ ಎಲ್ ಡಿ ಎಫ್ ನಡುವೆ ತೀವ್ರ ಸ್ಪರ್ಧೆ ನಿರೀಕ್ಷಿಸಲಾಗಿತ್ತು. ಯುವ ಅಭ್ಯರ್ಥಿಯನ್ನು ಸಿಪಿಐ ಆಯ್ಕೆ ಮಾಡಿ ಗೆದ್ದಿದೆ.

ಕೊನ್ನಿ ಆರುವಪುಳಂ ಪಂಚಾಯತಿ ಫಲಿತಾಂಶ
ಪಥನಂತಿಟ್ಟನಲ್ಲಿ 54 ಗ್ರಾಮ ಪಂಚಾಯಿತಿಗಳಿದ್ದು, ಕೊನ್ನಿ ಆರುವಪುಳಂ ಗ್ರಾಮ ಪಂಚಾಯಿತಿಯಲ್ಲಿ 15 ವಾರ್ಡ್ ಗಳಿವೆ.
ಕೊನ್ನಿ ಆರುವಪುಳಂ ಪಂಚಾಯತಿ ಫಲಿತಾಂಶ 2020: 11ನೇ ವಾರ್ಡಿನಿಂದ 21ವರ್ಷ ವಯಸ್ಸಿನ ರೇಷ್ಮಾಗೆ ಗೆಲುವು. ಎಲ್ ಡಿ ಎಫ್ ಅಭ್ಯರ್ಥಿ ರೇಷ್ಮಾಗೆ 450 ಮತಗಳು, ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಸುಜಾತಾ ಮೋಹನ್ ಗೆ 380 ಮತಗಳು

ಸ್ಥಳೀಯ ಸಂಸ್ಥೆ ಚುನಾವಣೆ
941 ಗ್ರಾಮ ಪಂಚಾಯಿತಿಯ 15,962ವಾರ್ಡ್, 152 ಬ್ಲಾಕ್ ಪಂಚಾಯಿತಿಯ 2080 ವಾರ್ಡು, 14 ಜಿಲ್ಲಾ ಪಂಚಾಯಿತಿಯ 331 ಡಿವಿಷನ್, 86 ಮುನ್ಸಿಪಾಲಿಟಿಯ 3078 ವಾರ್ಡು, 6 ಮುನ್ಸಿಪಲ್ ಕಾರ್ಪೊರೇಷನ್ ನ 414 ವಾರ್ಡುಗಳಿಗೆ ಡಿಸೆಂಬರ್ 8, 10 ಹಾಗೂ 14ರಂದು ಮತದಾನ ನಡೆಸಲಾಗಿದ್ದು, ಒಟ್ಟಾರೆ, 76% ಮತದಾನ ದಾಖಲಾಗಿದೆ. ಡಿಸೆಂಬರ್ 16ರಂದು ಫಲಿತಾಂಶ ಹೊರ ಬರಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications