ಉಚಿತ ಓಣಂ ದಿನಸಿ ಕಿಟ್ ವಿತರಣೆ; ಕೇರಳ ಸಿಎಂ ಘೋಷಣೆ
ತಿರುವನಂತಪುರಂ, ಆಗಸ್ಟ್ 12 : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಚಿತವಾಗಿ ಓಣಂ ದಿನಸಿ ಕಿಟ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಗುರುವಾರದಿಂದ ರಾಜ್ಯದಲ್ಲಿ ಕಿಟ್ ವಿತರಣೆ ಆರಂಭವಾಗಲಿದೆ.
ಓಣಂ ಹಬ್ಬದ ಹಿನ್ನಲೆಯಲ್ಲಿ ವಿಶೇಷ ದಿನಸಿ ಕಿಟ್ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಓಣಂ ವಿಶೇಷ ಕಿಟ್ನಲ್ಲಿ 11 ಬಗೆಯ ದಿನಸಿ ಸಾಮಾಗ್ರಿಗಳು ಇರಲಿವೆ. ಪಡಿತರ ಚೀಟಿ ಹೊಂದಿರುವ 88 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಕಿಟ್ ದೊರೆಯಲಿದೆ.
ರಾಜ್ಯದ 2000 ಕೇಂದ್ರಗಳಲ್ಲಿ ವಿಶೇಷ ಕಿಟ್ಗಳನ್ನು ಪ್ಯಾಕ್ ಮಾಡಲಾಗುತ್ತಿದೆ. ಸ್ವಯಂ ಸೇವಕರು ಕಿಟ್ಗಳಿಗೆ ದಿನಸಿ ಭರ್ತಿ ಮಾಡಿ, ಅವುಗಳನ್ನು ತೂಕ ಮಾಡಿದ ಬಳಿಕ ಜನರಿಗೆ ಉಚಿತವಾಗಿ ಹಂಚಿಕೆ ಮಾಡಲಾಗುತ್ತದೆ.

ಕೇರಳದಲ್ಲಿನ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ, ಓಣಂ ಹಬ್ಬದ ಸಂದರ್ಭದಲ್ಲಿ ದಿನಸಿ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ. ಆದ್ದರಿಂದ ಹಬ್ಬಕಾಗಿ ವಿಶೇಷ ಕಿಟ್ಗಳನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ.
ಓಣಂ ವಿಶೇಷ ಕಿಟ್ಗಳನ್ನು ಪ್ಯಾಕ್ ಮಾಡಿ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ರೇಷನ್ ಅಂಗಡಿಗಳಿಗೆ ತಲುಪಿಸಲಾಗುತ್ತದೆ. ಒಂದು ದಿನಸಿ ಕಿಟ್ ಮೌಲ್ಯ ಸುಮಾರು 500 ರೂ. ಆಗಿದೆ.
ಮೊದಲ ಹಂತದಲ್ಲಿ ಆಗಸ್ಟ್ 13, 14 ಮತ್ತು 16ರಂದು ಅಂತ್ಯೋದಯ ವಿಭಾಗದಲ್ಲಿ ಬರುವ ಕುಟುಂಬಗಳಿಗೆ ಕಿಟ್ ವಿತರಣೆ ನಡೆಯಲಿದೆ. ಆಗಸ್ಟ್ 19 ರಿಂದ 22ರ ತನಕ ಉಳಿದ ಕಾರ್ಡ್ದಾರರಿಗೆ ಕಿಟ್ ವಿತರಣೆ ಮಾಡಲಾಗುತ್ತದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications