ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಚಿತ ಓಣಂ ದಿನಸಿ ಕಿಟ್ ವಿತರಣೆ; ಕೇರಳ ಸಿಎಂ ಘೋಷಣೆ

|
Google Oneindia Kannada News

ತಿರುವನಂತಪುರಂ, ಆಗಸ್ಟ್ 12 : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಚಿತವಾಗಿ ಓಣಂ ದಿನಸಿ ಕಿಟ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಗುರುವಾರದಿಂದ ರಾಜ್ಯದಲ್ಲಿ ಕಿಟ್ ವಿತರಣೆ ಆರಂಭವಾಗಲಿದೆ.

ಓಣಂ ಹಬ್ಬದ ಹಿನ್ನಲೆಯಲ್ಲಿ ವಿಶೇಷ ದಿನಸಿ ಕಿಟ್ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಓಣಂ ವಿಶೇಷ ಕಿಟ್‌ನಲ್ಲಿ 11 ಬಗೆಯ ದಿನಸಿ ಸಾಮಾಗ್ರಿಗಳು ಇರಲಿವೆ. ಪಡಿತರ ಚೀಟಿ ಹೊಂದಿರುವ 88 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಕಿಟ್ ದೊರೆಯಲಿದೆ.

ಕೇರಳ: ಇಡುಕ್ಕಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆ ಕೇರಳ: ಇಡುಕ್ಕಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 52ಕ್ಕೆ ಏರಿಕೆ

ರಾಜ್ಯದ 2000 ಕೇಂದ್ರಗಳಲ್ಲಿ ವಿಶೇಷ ಕಿಟ್‌ಗಳನ್ನು ಪ್ಯಾಕ್ ಮಾಡಲಾಗುತ್ತಿದೆ. ಸ್ವಯಂ ಸೇವಕರು ಕಿಟ್‌ಗಳಿಗೆ ದಿನಸಿ ಭರ್ತಿ ಮಾಡಿ, ಅವುಗಳನ್ನು ತೂಕ ಮಾಡಿದ ಬಳಿಕ ಜನರಿಗೆ ಉಚಿತವಾಗಿ ಹಂಚಿಕೆ ಮಾಡಲಾಗುತ್ತದೆ.

ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್ ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್

Kerala CM Announced Free Onam Grocery Kits

ಕೇರಳದಲ್ಲಿನ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ, ಓಣಂ ಹಬ್ಬದ ಸಂದರ್ಭದಲ್ಲಿ ದಿನಸಿ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ. ಆದ್ದರಿಂದ ಹಬ್ಬಕಾಗಿ ವಿಶೇಷ ಕಿಟ್‌ಗಳನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ.

ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪ್ರಯಾಣಿಕರು ಹೇಳಿದ್ದೇನು? ಕೇರಳ ವಿಮಾನ ದುರಂತದಲ್ಲಿ ಬದುಕುಳಿದ ಪ್ರಯಾಣಿಕರು ಹೇಳಿದ್ದೇನು?

ಓಣಂ ವಿಶೇಷ ಕಿಟ್‌ಗಳನ್ನು ಪ್ಯಾಕ್ ಮಾಡಿ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ರೇಷನ್ ಅಂಗಡಿಗಳಿಗೆ ತಲುಪಿಸಲಾಗುತ್ತದೆ. ಒಂದು ದಿನಸಿ ಕಿಟ್ ಮೌಲ್ಯ ಸುಮಾರು 500 ರೂ. ಆಗಿದೆ.

ಮೊದಲ ಹಂತದಲ್ಲಿ ಆಗಸ್ಟ್ 13, 14 ಮತ್ತು 16ರಂದು ಅಂತ್ಯೋದಯ ವಿಭಾಗದಲ್ಲಿ ಬರುವ ಕುಟುಂಬಗಳಿಗೆ ಕಿಟ್ ವಿತರಣೆ ನಡೆಯಲಿದೆ. ಆಗಸ್ಟ್ 19 ರಿಂದ 22ರ ತನಕ ಉಳಿದ ಕಾರ್ಡ್‌ದಾರರಿಗೆ ಕಿಟ್ ವಿತರಣೆ ಮಾಡಲಾಗುತ್ತದೆ.

English summary
Kerala CM Pinarayi Vijayan announced free Onam grocery kits. Kit will consist of 11 grocery items and 88 lakh ration card holders in the state will get this kit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X