ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿದ ಕೇರಳ ಮುಖ್ಯಮಂತ್ರಿ
ಬೆಂಗಳೂರು, ಏಪ್ರಿಲ್ 26: ಮಹಾ ಶಿವಶರಣ, ಅನುಭವ ಮಂಟಪ ಸಂಸ್ಥಾಪಕ, ಕ್ರಾಂತಿಯೋಗಿ ಬಸವಣ್ಣ ಜಯಂತಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದ ದೇಶದ ಹಲವು ಪ್ರಮುಖರು ಶುಭಕೋರಿದ್ದಾರೆ.
ನೆರೆ ರಾಜ್ಯ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿರುವುದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

''ನಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಬೆಳೆಯಲು ಬಸವಣ್ಣ ನಮಗೆ ಮಾರ್ಗದರ್ಶಿಯಾಗಲಿ. ನಾವು ಕೊರೊನಾ ವಿರುದ್ಧ ಪ್ರತ್ಯೇಕವಾಗಿ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ. ಈ ಸಾಂಕ್ರಾಮಿಕ ರೋಗವನ್ನು ಗೆಲ್ಲಲು ನಾವೆಲ್ಲ ಒಂದಾಗಿ ಹೋರಾಡಬೇಕಿದೆ'' ಎಂದು ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್ ಬಸವಣ್ಣ ಅವರ ವಚನದ ಸಾಲುಗಳನ್ನು ಕೂಡ ಬಳಸಿದ್ದಾರೆ.
#BasavaJayanti Greetings
— Pinarayi Vijayan (@vijayanpinarayi) April 26, 2020
Let the great Basavanna be our guide to transcend our differences. We will not win the battle against the pandemic by being divided. It takes all of us to win this.
"ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ.
ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ." pic.twitter.com/vQPcWYLWbc
"ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ.
ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ." ಎಂಬ ಸಾಲು ಬಳಸುವ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರುವನ್ನು ಸ್ಮರಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಮಾತ್ರವಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಬಸವಣ್ಣ ಅವರನ್ನು ಸ್ಮರಿಸಿದ್ದಾರೆ.
ಮಹಾನ್ ಸಂತ, ಕವಿ ಮತ್ತು ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ಜಯಂತಿಯಂದು ನಾನು ಅವರಿಗೆ ಶಿರಬಾಗಿ ನಮಿಸುತ್ತೇನೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ದೃಢವಾಗಿ ಹೋರಾಡಿದ್ದ ಬಸವಣ್ಣನವರ ಬೋಧನೆಗಳು ಎಲ್ಲಾ ಗಡಿಗಳನ್ನೂ ಮೀರಿ ‘ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲು' ಎಂಬ ಸಂದೇಶವನ್ನು ಪಸರಿಸುವಲ್ಲಿ ಯಶಸ್ವಿಯಾಗಿದೆ. pic.twitter.com/DdYoigF2f0
— Amit Shah (@AmitShah) April 26, 2020
'ಮಹಾನ್ ಸಂತ, ಕವಿ ಮತ್ತು ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ಜಯಂತಿಯಂದು ನಾನು ಅವರಿಗೆ ಶಿರಬಾಗಿ ನಮಿಸುತ್ತೇನೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ದೃಢವಾಗಿ ಹೋರಾಡಿದ್ದ ಬಸವಣ್ಣನವರ ಬೋಧನೆಗಳು ಎಲ್ಲಾ ಗಡಿಗಳನ್ನೂ ಮೀರಿ 'ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲು' ಎಂಬ ಸಂದೇಶವನ್ನು ಪಸರಿಸುವಲ್ಲಿ ಯಶಸ್ವಿಯಾಗಿದೆ' ಎಂದು ಶುಭಾಶಯ ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications