Get Updates
Get notified of breaking news, exclusive insights, and must-see stories!

ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿದ ಕೇರಳ ಮುಖ್ಯಮಂತ್ರಿ

ಬೆಂಗಳೂರು, ಏಪ್ರಿಲ್ 26: ಮಹಾ ಶಿವಶರಣ, ಅನುಭವ ಮಂಟಪ ಸಂಸ್ಥಾಪಕ, ಕ್ರಾಂತಿಯೋಗಿ ಬಸವಣ್ಣ ಜಯಂತಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದ ದೇಶದ ಹಲವು ಪ್ರಮುಖರು ಶುಭಕೋರಿದ್ದಾರೆ.

ನೆರೆ ರಾಜ್ಯ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಸವ ಜಯಂತಿಗೆ ಕನ್ನಡದಲ್ಲಿ ಶುಭಕೋರಿರುವುದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

Kerala CM Wish To Basava Jayanthi In Kannada

''ನಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಬೆಳೆಯಲು ಬಸವಣ್ಣ ನಮಗೆ ಮಾರ್ಗದರ್ಶಿಯಾಗಲಿ. ನಾವು ಕೊರೊನಾ ವಿರುದ್ಧ ಪ್ರತ್ಯೇಕವಾಗಿ ಹೋರಾಡಿ ಗೆಲ್ಲಲು ಸಾಧ್ಯವಿಲ್ಲ. ಈ ಸಾಂಕ್ರಾಮಿಕ ರೋಗವನ್ನು ಗೆಲ್ಲಲು ನಾವೆಲ್ಲ ಒಂದಾಗಿ ಹೋರಾಡಬೇಕಿದೆ'' ಎಂದು ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್ ಬಸವಣ್ಣ ಅವರ ವಚನದ ಸಾಲುಗಳನ್ನು ಕೂಡ ಬಳಸಿದ್ದಾರೆ.

"ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ.

ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ." ಎಂಬ ಸಾಲು ಬಳಸುವ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರುವನ್ನು ಸ್ಮರಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಮಾತ್ರವಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಬಸವಣ್ಣ ಅವರನ್ನು ಸ್ಮರಿಸಿದ್ದಾರೆ.

'ಮಹಾನ್ ಸಂತ, ಕವಿ ಮತ್ತು ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ಜಯಂತಿಯಂದು ನಾನು ಅವರಿಗೆ ಶಿರಬಾಗಿ ನಮಿಸುತ್ತೇನೆ. ಸಾಮಾಜಿಕ ಅನಿಷ್ಟಗಳ ವಿರುದ್ಧ ದೃಢವಾಗಿ ಹೋರಾಡಿದ್ದ ಬಸವಣ್ಣನವರ ಬೋಧನೆಗಳು ಎಲ್ಲಾ ಗಡಿಗಳನ್ನೂ ಮೀರಿ 'ಮಾನವೀಯತೆ ಎಲ್ಲಕ್ಕಿಂತಲೂ ಮಿಗಿಲು' ಎಂಬ ಸಂದೇಶವನ್ನು ಪಸರಿಸುವಲ್ಲಿ ಯಶಸ್ವಿಯಾಗಿದೆ' ಎಂದು ಶುಭಾಶಯ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+