ಕೇರಳ ಚುನಾವಣೆ; ಇದೇ ಮೊದಲ ಬಾರಿ ಮತ ಹಾಕದ ಮಾಜಿ ಸಿಎಂ ಅಚ್ಯುತಾನಂದನ್
ತಿರುವನಂತಪುರಂ, ಏಪ್ರಿಲ್ 7: ಮಂಗಳವಾರ ಕೇರಳ ವಿಧಾನಸಭೆ ಚುನಾವಣೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರು ಇದೇ ಮೊದಲ ಬಾರಿ ಮತದಾನ ಮಾಡಲು ಸಾಧ್ಯವಾಗಿಲ್ಲ. 97 ವರ್ಷದ ಅಚ್ಯುತಾನಂದನ್ ಅವರು ತಮ್ಮ ಪುತ್ರನ ನಿವಾಸದಲ್ಲಿ ತಂಗಿದ್ದು, ಅವರ ಮತವು ಅಲಪ್ಪುಳದಲ್ಲಿದ್ದ ಕಾರಣ ಮತ ಚಲಾಯಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಅಚ್ಯುತಾನಂದನ್ ಹಾಗೂ ಅವರ ಪತ್ನಿಗೆ ಅಂಚೆ ಮತದಾನಕ್ಕೆ ನೋಂದಣಿ ಮಾಡಲು ಸಾಧ್ಯವಾಗಿಲ್ಲ. ಪ್ರಯಾಣದಿಂದಾಗಿ ಮಂಗಳವಾರ ಅವರ ಆರೋಗ್ಯದಲ್ಲಿಯೂ ಕೊಂಚ ಏರುಪೇರಾಗಿದ್ದು, ಮತ ಹಾಕಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಅವರ ಪುತ್ರ ಹಾಗೂ ಮನೆಯ ಸದಸ್ಯರು ಅಂಬಲಾಪುರದಲ್ಲಿ ಮತ ಚಲಾಯಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ನಂತರ ಅಚ್ಯುತಾನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

2016ರ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಅಚ್ಯುತಾನಂದನ್ ಅವರಿಗೆ "ಕೇರಳ ಕ್ಯಾಸ್ಟ್ರೊ" ಎಂದು ಬಿರುದು ನೀಡಲಾಗಿತ್ತು. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಈ ಹುದ್ದೆಯನ್ನು ಅವರಿಗೆಂದೇ ರಚನೆ ಮಾಡಲಾಗಿತ್ತು. ಏಳು ಬಾರಿ ಶಾಸಕರಾಗಿದ್ದ ಅವರು ಈಚೆಗೆ ರಾಜೀನಾಮೆ ನೀಡಿ ತಮ್ಮ ಪುತ್ರನ ಮನೆಯಲ್ಲಿ ನೆಲೆಸಿದ್ದರು.
ಈ ಬಾರಿ ರಾಜ್ಯದಲ್ಲಿ ಬಿರುಸಿನ ಚುನಾವಣಾ ಕಾರ್ಯಗಳು ನಡೆಯುತ್ತಿದ್ದರೂ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಜೊತೆಗೆ ಅವರ ಚಿತ್ರಗಳೂ ಯಾವುದೇ ಪೋಸ್ಟರ್ಗಳಲ್ಲಿ ಕಾಣಿಸಿಕೊಂಡಿರಲಿಲ್ಲ.
1940ರಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಅಚ್ಯುತಾನಂದನ್ ಅವರು 1967ರಲ್ಲಿ ಮೊದಲ ಬಾರಿ ಶಾಸಕರಾದರು. 1996ರಲ್ಲಿ ಮುಖ್ಯಮಂತ್ರಿಯಾದರು. 2006ರಲ್ಲಿಯೂ ಮುಖ್ಯಮಂತ್ರಿಯಾಗಿ ಮುಂದುವರೆದು 2011ರಲ್ಲಿ ಎರಡೇ ಸೀಟುಗಳ ಅಂತರದಲ್ಲಿ ಸೋಲು ಕಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications