ವೈರಲ್ ಆಯ್ತು ಕೇರಳ ಸಲಿಂಗಿಗಳ ಪ್ರಿ ವೆಡ್ಡಿಂಗ್ ಫೋಟೊಶೂಟ್; ಜೊತೆಗೆ ಪ್ರೀತಿಯ ಸಂದೇಶ
Recommended Video
ಕೇರಳ, ಡಿಸೆಂಬರ್ 13: ನವ ಜೋಡಿಗಳು ತಮ್ಮ ಮದುವೆಯ ಮುಂಚಿನ ಆ ಸುಮಧುರ ಕ್ಷಣಗಳನ್ನು ಸ್ಮರಣೀಯವಾಗಿಸಿಕೊಳ್ಳಲು ಪ್ರಿ ವೆಡ್ಡಿಂಗ್ ಫೋಟೊ ಶೂಟ್ ಮಾಡಿಸಿಕೊಳ್ಳುವುದು ಟ್ರೆಂಡ್ ಆಗಿದೆ. ತಮ್ಮ ಪ್ರೀತಿಯ ಭಾವನೆ ವ್ಯಕ್ತಪಡಿಸುವ ಚೆಂದದ ಚಿತ್ರಗಳನ್ನು ತೆಗಿಸಿ ದಾಂಪತ್ಯದ ಹೊಸ್ತಿಲಲ್ಲಿ ನಿಂತು ತಮ್ಮ ಮುಂದಿನ ವೈವಾಹಿಕ ಜೀವನವನ್ನು ಖುಷಿಯಿಂದ ಆಮಂತ್ರಿಸುತ್ತಾರೆ.
ಹೀಗೆಯೇ ತಮ್ಮ ಪ್ರೀತಿಯನ್ನು ಸಂಭ್ರಮಿಸಲು, ಜೊತೆಜೊತೆಗೆ ಪ್ರೀತಿಯ ಕುರಿತು ಒಂದು ಸಂದೇಶವನ್ನು ನೀಡಲೆಂದೇ ಕೇರಳದಲ್ಲಿ ಸಲಿಂಗ ಪ್ರೇಮಿಗಳು ಪ್ರಿ ವೆಡ್ಡಿಂಗ್ ಫೋಟೊ ಶೂಟ್ ಮಾಡಿಸಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೇರಳದ ಅಬ್ದುಲ್ ರಹೀಂ ಮತ್ತು ನೆವಿದ್ ಆಂಟೋನಿ ಚುಲ್ಲಿಕಾಲ್ ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿರುವ ಸಲಿಂಗಿ ಜೋಡಿ. ತಮ್ಮ ಪ್ರೀತಿಯ ಭಾವಗಳನ್ನು ವ್ಯಕ್ತಪಡಿಸುವಂಥ ಹಲವು ಫೋಟೊಗಳನ್ನು ಈ ಜೋಡಿ ತೆಗೆಸಿಕೊಂಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

"ನವಜೋಡಿಗಳು ಮದುವೆಗೆ ಮುನ್ನ ಪ್ರಿ ವೆಡ್ಡಿಂಗ್ ಫೋಟೊ ಶೂಟ್ ಮಾಡಿಸಿಕೊಳ್ಳುತ್ತಾರೆ. ಹಾಗೆಯೇ ನಾವೂ ಮಾಡಿಸಿದೆವು. ಪ್ರೀತಿ ಎಲ್ಲರಿಗೂ ಒಂದೇ. ಎಲ್ಲಕ್ಕಿಂತ ಹೆಚ್ಚಾಗಿ ಸಲಿಂಗಿಗಳ ಪ್ರೀತಿಯು ಎಲ್ಲರಂತೆ ಸಹಜ ಎಂಬ ಸಂದೇಶವನ್ನು ಸಾರುವ ಉದ್ದೇಶವೂ ಈ ಫೋಟೊಶೂಟ್ ಹಿಂದಿದೆ. ಪ್ರೀತಿಯಲ್ಲಿ ಯಾವುದನ್ನೂ ಕಳೆದುಕೊಳ್ಳಬಾರದು, ಏಕೆಂದರೆ ಅದರಲ್ಲಿ ಎಲ್ಲವೂ ಸುಂದರ" ಎಂಬ ಸಂದೇಶ ಹಾಕಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಈ ಫೋಟೊಗಳಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ. ಫೋಟೊಶೂಟ್ ನೊಂದಿಗೆ ಅರಿಶಿನ ಶಾಸ್ತ್ರ, ಮೆಹೆಂದಿ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿರುವುದಾಗಿ ಈ ಜೋಡಿ ತಿಳಿಸಿದೆ. ಬೆಂಗಳೂರಿನಲ್ಲಿ ಮದುವೆಯಾಗುವ ಆಲೋಚನೆಯಿರುವುದಾಗಿಯೂ ಹೇಳಿದ್ದಾರೆ.

ಐದು ವರ್ಷದಿಂದ ಇವರು ಪ್ರೀತಿಸುತ್ತಿದ್ದಾರೆ. ಮನೆಯಿಂದ ಈ ಮದುವೆಗೆ ಬೆಂಬಲವಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಯ ಮಾತು ಕೇಳಿಬಂದಿದ್ದು, ಖುಷಿಯಿಂದ ಮದುವೆಯಾಗಲು ಅಣಿಯಾಗಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications