ಆನ್ಲೈನ್ ತರಗತಿ ಮಿಸ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ
ತಿರುವನಂತಪುರಂ, ಜೂನ್ 2: ಆನ್ಲೈನ್ ತರಗತಿಗೆ ಹಾಜರಾಗದಿದ್ದಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.
Recommended Video
9ನೇ ತರಗತಿಯ ದೇವಿಕಾ ಬಾಲಕೃಷ್ಣನ್ ಎಂಬ ಬಾಲಕಿ ಮಲಪ್ಪುರಂ ಜಿಲ್ಲೆಯ ವಲಂಚೇರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ, ಆನ್ಲೈನ್ ತರಗತಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ.
ಆನ್ಲೈನ್ ತರಗತಿಯಲ್ಲಿ ಪಾಲ್ಗೊಳ್ಳಲು ತಮ್ಮ ಮನೆಯಲ್ಲಿ ಟಿವಿ ಇಲ್ಲ ಹಾಗೂ ಸ್ಮಾರ್ಟ್ ಪೋನ್ ಕೂಡ ಇಲ್ಲ ಎಂದು ಬೇಸರ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ. ಅಕ್ಕಪಕ್ಕ ಯಾವುದೇ ಮನೆಗಳಿಲ್ಲದ ಕಾರಣ ಯಾರಿಗೂ ಈ ವಿಚಾರ ಸೂಕ್ತ ಸಮಯದಲ್ಲಿ ಗೊತ್ತಾಗಲಿಲ್ಲ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇದು ಸ್ವಾಭಾವಿಕ ಸಾವು ಎಂದು ಎಫ್ ಐ ಆರ್ ಹಾಕಿದ್ದಾರೆ. ಮನೆಯಲ್ಲಿ ಆಕೆ ಬರೆದಿದ್ದ ಡೆತ್ನೋಟ್ ಸಿಕ್ಕಿದ್ದು, ''ನಾನು ಹೋಗುತ್ತೇನೆ'' ಎಂದು ಭಾವನಾತ್ಮಕ ಪತ್ರ ಬರೆದಿದ್ದಾರಂತೆ.
45 ವರ್ಷದ ದೇವಿಕಾ ಅವರ ತಂದೆ ಬಾಲಕೃಷ್ಣನ್ ದಿನಗೂಲಿ ಕಾರ್ಮಿಕ. ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಕೆಲಸ ಮಾಡಲು ಸಹ ಸಾಧ್ಯವಾಗಿರಲಿಲ್ಲ. ಮಗಳಿಗೆ ಆನ್ಲೈನ್ ತರಗತಿಗೆ ವ್ಯವಸ್ಥೆ ಮಾಡುವಷ್ಟು ಶಕ್ತರಾಗಿರಲಿಲ್ಲ. ದೇವಿಕಾ ಸಾವಿನ ಪ್ರಕರಣವನ್ನು ತನಿಖೆ ನಡೆಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿ ಶಿಕ್ಷಣ ಸಚಿವ ಪ್ರೊ.ಸಿ.ರವೀಂದ್ರನಾಥ್ ಆದೇಶಿಸಿದ್ದಾರೆ.
ಕೊರೊನಾ ವೈರಸ್ ಲಾಕ್ಡೌನ್ನಿಂದ ಶಾಲೆ ಕಾಲೇಜುಗಳು ಕಳೆದ ಮೂರು ತಿಂಗಳಿನಿಂದ ಮುಚ್ಚಿದೆ. ಎಲ್ಲ ಮೊದಲಿನಂತೆ ಇದ್ದಿದ್ದರೇ ಮೇ ಮತ್ತು ಜೂನ್ ತಿಂಗಳಲ್ಲಿ ಶಾಲೆ-ಕಾಲೇಜುಗಳು ಆರಂಭವಾಗಬೇಕಿತ್ತು. ಆದರೆ, ಸೋಂಕಿನ ಭೀತಿ ಇರುವ ಹಿನ್ನೆಲೆ ಆನ್ಲೈನ್ ಮೂಲಕ 1 ರಿಂದ 12ನೇ ತರಗತಿವರೆಗೂ ಕ್ಲಾಸ್ ಶುರು ಮಾಡಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications