ಫೋರ್ಜರಿ ಕೇಸಿನಲ್ಲಿ ಸ್ಮಗಲಿಂಗ್ ಆರೋಪಿ ಸ್ವಪ್ನ ಬಂಧನ
ತಿರುವನಂತಪುರಂ, ಸೆ. 3: ಕೇರಳದ ಚಿನ್ನ ಸ್ಮಗಲಿಂಗ್ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಮೇಲೆ ಕೇರಳ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿಕೊಂಡಿದ್ದು ನೆನಪಿರಬಹುದು. ನಕಲಿ ಪ್ರಮಾಣ ಪತ್ರ ನೀಡಿ ಸಿಎಂ ಪಿಣರಾಯಿ ವಿಜಯನ್ ಹೊಂದಿರುವ ಐಟಿ ಇಲಾಖೆಯಡಿಯಲ್ಲಿ ಸ್ವಪ್ನ ಕಾರ್ಯ ನಿರ್ವಹಿಸಲು ಗುತ್ತಿಗೆ ಪಡೆದುಕೊಂಡಿದ್ದು ಹೇಗೆ ಎಂದು ತನಿಖೆ ನಡೆಸಲಾಗಿತ್ತು. ಈಗ ಸ್ವಪ್ನ ಬಂಧನ ಹಾಗೂ ಕಸ್ಟಡಿಗಾಗಿ ಕೋರ್ಟಿಗೆ ಮನವಿ ಸಲ್ಲಿಸಲಾಗಿದೆ.
Recommended Video
ಚಿನ್ನ ಸ್ಮಗಲಿಂಗ್ ಪ್ರಕರಣದಲ್ಲಿ ಆರೋಪಿಯಾಗಿ ಕಕ್ಕನಾಡ್ ಜಿಲ್ಲೆ ಜೈಲಿನಲ್ಲಿರುವ ಸ್ವಪ್ನ ಸುರೇಶ್ ರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲು ತಮ್ಮ ವಶಕ್ಕೆ ನೀಡಬೇಕೆಂದು ಕೇರಳ ಪೊಲೀಸರು ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ.

ಕೇರಳ ಐಟಿ ಮೂಲಸೌಕರ್ಯ ಲಿಮಿಟೆಡ್ ನಲ್ಲಿ ಗುತ್ತಿಗೆ ಆಧಾರಿತ ಉದ್ಯೋಗದಲ್ಲಿದ್ದ ಸ್ವಪ್ನ ಅವರು ಈ ಪ್ರತಿಷ್ಠಿತ ಹುದ್ದೆ ಪಡೆಯಲು ನಕಲಿ ಪ್ರಮಾಣ ಪತ್ರ ನೀಡಿದ್ದಾರೆ ಎಂದು ದೂರು ದಾಖಲಾಗಿತ್ತು. ಕಂಟೋನ್ಮೇಂಟ್ ಪೊಲೀಸರು ದೂರು ದಾಖಲಿಸಿಕೊಂಡು,ಸ್ಪೇಸ್ ಪಾರ್ಕ್ ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸಲು ಸ್ವಪ್ನ ನೀಡಿದ್ದ ಪದವಿ ಪ್ರಮಾಣ ಪತ್ರ ನಕಲಿ ಎಂದು ತನಿಖೆಯಿಂದ ಕಂಡುಕೊಂಡಿದ್ದಾರೆ. ಫೋರ್ಜರಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈ ಪ್ರಕರಣದಲ್ಲಿ ಸ್ವಪ್ನ ಅಲ್ಲದೆ ಪ್ರೈಸ್ ವಾಟರ್ ಹೌಸ್ ಕೂಪರ್ಸ್, ವಿಷನ್ ಟೆಕ್ನಾಲಜೀಸ್ ಸಂಸ್ಥೆ ಕೂಡಾ ಆರೋಪಿಗಳಾಗಿದ್ದಾರೆ.
#KeralaGoldSmugglingCase: Kerala Police recorded arrest of accused Swapna Suresh at Kakkanad District Jail pertaining to forgery of fake degree certificate to secure job in Kerala State Info Technology Infrastructure Ltd under IT Dept. Police to approach court seeking her custody
— ANI (@ANI) September 3, 2020
ಇದಕ್ಕೂ ಮುನ್ನ ಮಹಾರಾಷ್ಟ್ರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಟೆಕ್ನಾಲಜೀಸ್ ವಿವಿ ಕೂಡಾ ಸ್ವಪ್ನ ನೀಡಿದ್ದ ಬಿ.ಕಾಂ ಪ್ರಮಾಣ ಪತ್ರ ನಕಲಿ ಎಂದು ದೃಢಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ನಡುವೆ ಸ್ವಪ್ನಗೆ ಕೆಲಸ ಕೊಡಿಸಲು ನೆರವಾದ ಶಿವಶಂಕರನ್ ಅವರನ್ನು ಸಿಎಂ ಆಪ್ತ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications