ಚಿನ್ನದ ಸ್ಮಗಲಿಂಗ್ ಕೇಸ್: ಸ್ವಪ್ನ ಸುರೇಶ್ಗೆ ಜಾಮೀನು ಕೊಟ್ಟ ಹೈಕೋರ್ಟ್
ತಿರುವನಂತಪುರಂ, ನವೆಂಬರ್ 02: ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿದ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಅವರಿಗೆ ಕೇರಳ ಹೈಕೋರ್ಟ್ನಿಂದ ಇಂದು ಜಾಮೀನು ಮಂಜೂರಾಗಿದೆ.
ಕೇರಳ ಹೈಕೋರ್ಟ್ ವಿಭಾಗೀಯ ಪೀಠವು ಇಂದು ಸ್ವಪ್ನ ಸುರೇಶ್ ಹಾಗೂ ಇನ್ನಿತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಏಳು ಮಂದಿಗೆ ಜಾಮೀನು ಮಂಜೂರು ಮಾಡಿದೆ. ಜಸ್ಟೀಸ್ ಕೆ ವಿನೋದ್ ಚಂದ್ರನ್, ಜಸ್ಟೀಸ್ ಕೆ ಜಯ ಚಂದ್ರನ್ ಅವರಿದ್ದ ನ್ಯಾಯಪೀಠವು ಎರ್ನಾಕುಲಂ ಎನ್ಐಎ ಪೀಠವು ಜಾಮೀನು ಅರ್ಜಿ ತಿರಸ್ಕರಿಸಿ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ.
ಸ್ವಪ್ನ ಸುರೇಶ್, ಸರೀತ್ ಪಿ.ಎಸ್ ಅಲ್ಲದೆ ಮೊಹಮ್ಮದ್ ಶಫಿ ಪಿ, ಜಲಾಲ್ ಎ. ಎಂ ಹಮ್ಮದ್, ರಮೀಸ್ ಕೆ.ಟಿ, ಶರಾಫುದ್ದೀನ್ ಕೆ, ಮೊಹಮ್ಮದ್ ಅಲಿ ಎಂಬುವರಿಗೂ ಜಾಮೀನು ಸಿಕ್ಕಿದೆ. ಸ್ವಪ್ನ ಅವರು 25 ಲಕ್ಷ ರು ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಿ ಜಾಮೀನು ಪಡೆದುಕೊಳ್ಳಲು ಸೂಚಿಸಲಾಗಿದೆ. ಪಾಸ್ ಪೋರ್ಟ್ ತನಿಖಾಧಿಕಾರಿಗಳ ವಶಕ್ಕೆ ನೀಡಬೇಕು, ಸಾಕ್ಷ್ಯಾಧಾರ ನಾಶ ಪಡಿಸುವಂತಿಲ್ಲ, ತನಿಖೆಗೆ ಸಹಕರಿಸಬೇಕು ಮುಂತಾದ ಷರತ್ತುಗಳನ್ನು ವಿಧಿಸಲಾಗಿದೆ.

ಏಳು ಆರೋಪಿಗಳಿಗೆ ಜಾಮೀನು
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವಿಶೇಷ ನ್ಯಾಯಾಲಯವು ತನ್ನನ್ನು ಸೇರಿದಂತೆ ಪ್ರಕರಣದ ಇತರ ಏಳು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅಕ್ರಮ ಹಣವರ್ಗಾವಣೆ, ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಣೆ, ಕಾನೂನು ಬಾಹಿರ ಆರ್ಥಿಕ ವ್ಯವಹಾರ ಮುಂತಾದ ಆರೋಪಗಳನ್ನು ಹೊತ್ತುಕೊಂಡಿರುವ ಸ್ವಪ್ನ ಸುರೇಶ್ ಹಾಗೂ ಇತರೆ ಆರೋಪಿಗಳನ್ನು ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈನಲ್ಲಿ ಬಂಧಿಸಿತ್ತು. ಕಾನೂನು ಬಾಹಿರ ಆರ್ಥಿಕ ವ್ಯವಹಾರ UAPA ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸೆಕ್ಷನ್ 16, 17, 18 ಹಾಗೂ 20ರ ಅಡಿ ಪ್ರಕರಣ ದಾಖಲಾಗಿತ್ತು.

ಕಸ್ಟಮ್ಸ್ ಕಾಯ್ದೆಯಡಿ ಚಾರ್ಜ್ ಶೀಟ್
ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್ ಬ್ಯಾಗೇಜ್'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಆರೋಪಿಸಲಾಗಿದೆ. ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ. ಆದರೆ, ಚಿನ್ನದ ಸ್ಮಗಲಿಂಗ್ ಮೇಲಿನ ದೋಷಾರೋಪಣ ಪಟ್ಟಿಯು ಕಸ್ಟಮ್ಸ್ ಕಾಯ್ದೆಯಡಿ ಬರುವುದರಿಂದ UAPA ಕಾಯ್ದೆ ಉಲ್ಲಂಘನೆ ಎಂದು ಸುಳ್ಳು ಆರೋಪ ಮಾಡಲಾಗಿದೆ ಎಂದು ಸ್ವಪ್ನ ಪರ ವಕೀಲರು ವಾದಿಸಿದರು.

ಎನ್ಐಎ, ಸಿಬಿಐ ತನಿಖೆ
ಕಳೆದ ವರ್ಷ ಅಕ್ಟೋಬರ್ನಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಎಕನಾಮಿಕ್ ಇಂಟೆಲಿಜೆನ್ಸ್ ಎನ್ಐಎಗೆ ವರದಿಯನ್ನು ಸಲ್ಲಿಸಿದೆ. ವರದಿಯನ್ನು ಎನ್ಐಎ ನ್ಯಾಯಾಲಯದ ಮುಂದಿಡಲಾಯಿತು. I ಈ ಪ್ರಕರಣದ 5ನೇ ಆರೋಪಿ ಕೆಟಿ ರಮೀಸ್ ಹಾಗೂ 13ನೇ ಆರೋಪಿ ಷರಾಫುದ್ದೀನ್ ಇಬ್ಬರು ತಾಂಜೇನಿಯಾಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಅಲ್ಲಿ ದಾವೂದ್ ಜಾಲಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಎನ್ಐಎ ಹೇಳಿದೆ.
ದಾವೂದ್ ಇಬ್ರಾಹಿಂ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧ ಸಮಿತಿ ಬಿಡುಗಡೆ ಮಾಡಿದ ಪತ್ರ ಮತ್ತು ಯುಎಸ್ ಖಜಾನೆ ಇಲಾಖೆ ಪ್ರಕಟಿಸಿದ ಪರಿಶೀಲನಾ ವರಿಯಂತೆ ಡಿ ಗ್ಯಾಂಗ್ ಆಫ್ರಿಕಾದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ಐಎ ನ್ಯಾಯಾಲಯಕ್ಕೆ ತಿಳಿಸಿದೆ. ದಾವೂದ್ ಆಪ್ತ ಫಿರೋಜ್ ಎಂಬ ವ್ಯಕ್ತಿ ತಾಂಜೇನಿಯಾದಲ್ಲಿ ವಜ್ರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದಾನೆ ಆತನ ಜೊತೆ ರಮೀಸ್ ಸಂಪರ್ಕ ಹೊಂದಿದ್ದಾನೆ.

ಹಲವರ ಬಂಧನ ಮಾಡಿದ್ದ ಎನ್ಐಎ
ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ. 2019ರಿಂದ ಇಲ್ಲಿ ತನಕ ಸುಮಾರು 200 ಕೆ.ಜಿಗೂ ಅಧಿಕ ಚಿನ್ನವನ್ನು ಈ ರೀತಿ ಅಕ್ರಮವಾಗಿ ರವಾನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ವಪ್ನ ಪ್ರಭ ಸುರೇಶ್, ಫಾಜೀಲ್ ಫರೀದ್, ಸಂದೀಪ್ ನಾಯರ್ ಹಾಗೂ ಸರೀತ್ ಕುಮಾರ್ ಅವರ ವಿಚಾರಣೆಗೆ ಅಗತ್ಯವಿದೆ ಎಂದು ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಹೇಳಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಅವರಿಗೆ ಸಿಎಂ ಸಚಿವಾಲಯದ ಅಧೀನದ ಐಟಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಯನ್ನು ಕೊಡಿಸುವಲ್ಲಿ ಶಿವಶಂಕರ್ ಮಹತ್ವದ ಪಾತ್ರ ವಹಿಸಿದ್ದರು ಎಂದು ಆರೋಪ ಕೇಳಿ ಬಂದಿದೆ. ಆರೋಪ ಕೇಳಿ ಬಂದ ಬಳಿಕ ಸಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ತೆಗೆದು ಹಾಕಲಾಗಿತ್ತು. ಜೊತೆಗೆ ಸಿಎಂ ಪಿಣರಾಯಿ ವಿಜಯನ್ ಅವರಿಗೂ ಕ್ಲೀನ್ ಚಿಟ್ ಸಿಕ್ಕಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications