ಚಿನ್ನದ ಸ್ಮಗಲಿಂಗ್ ಕೇಸ್ ಸಿಬಿಐಗೆ ಒಪ್ಪಿಸಿ, ಪಿಎಂಗೆ ಸ್ವಪ್ನ ಸುರೇಶ್ ಪತ್ರ
ತಿರುವನಂತಪುರಂ, ಜೂನ್ 21: ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿ, ಪಿಣರಾಯಿ ವಿಜಯನ್ ಸರ್ಕಾರವನ್ನೇ ಅಲ್ಲಾಡಿಸಿರುವ ಚಿನ್ನದ ಕಳ್ಳಸಾಗಣೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ನಿರೀಕ್ಷಣಾ ಜಾಮೀನು ರದ್ದುಗೊಳಿಸಲಾಗಿದೆ. ಈ ವಾರ ಮತ್ತೊಮ್ಮೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಒಳಪಡಬೇಕಾಗಿದೆ. ಆದರೆ, ಈ ಪ್ರಕರಣದ ತನಿಖೆಯನ್ನು ಸಿಬಿಐವಹಿಸುವಂತೆ ಕೋರಿ ಪ್ರಧಾನಿ ಮೋದಿಗೆ ಸ್ವಪ್ನ ಸುರೇಶ್ ಪತ್ರ ಬರೆದಿರುವುದು ಈಗ ವೈರಲ್ ಆಗಿದೆ.
ಕೇರಳ ಹೈಕೋರ್ಟ್ ಇಂದು ಪಿ.ಎಸ್ ಸರಿತ್ ಹಾಗೂ ಸ್ವಪ್ನ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದೆ. ಇದಾದ ಬಳಿಕ ಮಾಧ್ಯಮಗಳ ಮುಂದೆ ಸ್ವಪ್ನ ಸುರೇಶ್ ಅತ್ತು ಕರೆದು ಸಿಎಂ ವಿಜಯನ್ ಮೇಲೆ ಆರೋಪ ಮಾಡಿದ್ದರು.

ಇದಕ್ಕೂ ಮುನ್ನ ಕೇರಳ ಹೈಕೋರ್ಟ್ ವಿಭಾಗೀಯ ಪೀಠವು 2021ರ ನವೆಂಬರ್ ತಿಂಗಳಲ್ಲಿ ಸ್ವಪ್ನ ಸುರೇಶ್ ಹಾಗೂ ಇನ್ನಿತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಏಳು ಮಂದಿಗೆ ಜಾಮೀನು ಮಂಜೂರು ಮಾಡಿತ್ತು. ಜಸ್ಟೀಸ್ ಕೆ ವಿನೋದ್ ಚಂದ್ರನ್, ಜಸ್ಟೀಸ್ ಕೆ ಜಯ ಚಂದ್ರನ್ ಅವರಿದ್ದ ನ್ಯಾಯಪೀಠವು ಎರ್ನಾಕುಲಂ ಎನ್ಐಎ ಪೀಠವು ಜಾಮೀನು ಅರ್ಜಿ ತಿರಸ್ಕರಿಸಿ ನೀಡಿದ್ದ ಆದೇಶವನ್ನು ರದ್ದುಗೊಳಿಸಿತ್ತು.

ವಿಜಯನ್ ವಿರುದ್ಧ ತಿರುಗಿ ಬಿದ್ದ ಸ್ವಪ್ನ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ ಪಿಸಿ ಸೆಕ್ಷನ್ 164ರಂತೆ ತಾವು ನೀಡಿರುವ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಲಾಗುತ್ತಿದೆ. ಸಿಎಂ ವಿಜಯನ್ ಈ ಪ್ರಕರಣದಲ್ಲಿ ತಮ್ಮ ಪಾಲುದಾರಿಕೆ ಬಗ್ಗೆ ಏಕೆ ಬಹಿರಂಗಪಡಿಸುತ್ತಿಲ್ಲ, ನಮ್ಮನ್ನು ಏಕೆ ಸಿಕ್ಕಿಸುತ್ತಿದ್ದಾರೆ ಎಂದು ಸ್ವಪ್ನ ಪ್ರಶ್ನಿಸಿದ್ದರು. ಈ ನಡುವೆ ಸ್ವಪ್ನ, ಸರಿತ್ ವಿರುದ್ಧ ಮಾಜಿ ಸಚಿವ ಕೆಟಿ ಜಲೀಲ್ ದೂರು ನೀಡಿದ್ದು, ಪ್ರಕರಣ ಮತ್ತೊಂದು ಮಗ್ಗಲಿಗೆ ತಿರುಗಿದೆ. ಸಿಎಂ ವಿಜಯನ್ ಆಪ್ತ ಶಾಜಿ ಕಿರಣ್ ಎಂಬಾತ ನನ್ನ ಕಚೇರಿಗೆ ಬಂದು ಬೆದರಿಕೆ ಹಾಕಿದ್ದರಿಂದ ನಾನು ಹೇಳಿಕೆ ನೀಡಬೇಕಾಯಿತು. ನನ್ನ ಕುಟುಂಬದ ರಕ್ಷಣೆ ನನಗೆ ಮುಖ್ಯವಾಗಿತ್ತು ಎಂದು ಸ್ವಪ್ನ ಮಾಧ್ಯಮಗಳ ಮುಂದೆ ಹೇಳಿದ್ದರು.

ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ
ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವಿಶೇಷ ನ್ಯಾಯಾಲಯವು ತನ್ನನ್ನು ಸೇರಿದಂತೆ ಪ್ರಕರಣದ ಇತರ ಏಳು ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಕ್ರಮ ಹಣವರ್ಗಾವಣೆ, ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಣೆ, ಕಾನೂನು ಬಾಹಿರ ಆರ್ಥಿಕ ವ್ಯವಹಾರ ಮುಂತಾದ ಆರೋಪಗಳನ್ನು ಹೊತ್ತುಕೊಂಡಿರುವ ಸ್ವಪ್ನ ಸುರೇಶ್ ಹಾಗೂ ಇತರೆ ಆರೋಪಿಗಳನ್ನು ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈನಲ್ಲಿ ಬಂಧಿಸಿತ್ತು. ಕಾನೂನು ಬಾಹಿರ ಆರ್ಥಿಕ ವ್ಯವಹಾರ UAPA ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸೆಕ್ಷನ್ 16, 17, 18 ಹಾಗೂ 20ರ ಅಡಿ ಪ್ರಕರಣ ದಾಖಲಾಗಿತ್ತು.

UAPA ಕಾಯ್ದೆ ಉಲ್ಲಂಘನೆ?
ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್ ಬ್ಯಾಗೇಜ್'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಆರೋಪಿಸಲಾಗಿದೆ. ಯುಎಇ ಕಾನ್ಸುಲೇಟ್ ಅಧಿಕಾರಿಯಾಗಿದ್ದ ಪಿಎಸ್ ಸರೀತ್, ಮಾಜಿ ಉದ್ಯೋಗಿ ಸ್ವಪ್ನ ಸುರೇಶ್, ಸಂದೀಪ್ ನಾಯರ್, ಫೈಜಲ್ ಫರೀದ್ ಅವರ ವಿರುದ್ಧ Unlawful Activities (Prevention) Act ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತನಿಖೆ ಮುಂದುವರೆಸಿದೆ. ಆದರೆ, ಚಿನ್ನದ ಸ್ಮಗಲಿಂಗ್ ಮೇಲಿನ ದೋಷಾರೋಪಣ ಪಟ್ಟಿಯು ಕಸ್ಟಮ್ಸ್ ಕಾಯ್ದೆಯಡಿ ಬರುವುದರಿಂದ UAPA ಕಾಯ್ದೆ ಉಲ್ಲಂಘನೆ ಎಂದು ಸುಳ್ಳು ಆರೋಪ ಮಾಡಲಾಗಿದೆ ಎಂದು ಸ್ವಪ್ನ ಪರ ವಕೀಲರು ವಾದಿಸಿದರು.

ಎನ್ಐಎಗೆ ವರದಿ
2020ರ ಅಕ್ಟೋಬರ್ನಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಎಕನಾಮಿಕ್ ಇಂಟೆಲಿಜೆನ್ಸ್ ಎನ್ಐಎಗೆ ವರದಿಯನ್ನು ಸಲ್ಲಿಸಿದೆ. ವರದಿಯನ್ನು ಎನ್ಐಎ ನ್ಯಾಯಾಲಯದ ಮುಂದಿಡಲಾಯಿತು. I ಈ ಪ್ರಕರಣದ 5ನೇ ಆರೋಪಿ ಕೆಟಿ ರಮೀಸ್ ಹಾಗೂ 13ನೇ ಆರೋಪಿ ಷರಾಫುದ್ದೀನ್ ಇಬ್ಬರು ತಾಂಜೇನಿಯಾಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಅಲ್ಲಿ ದಾವೂದ್ ಜಾಲಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದು ಎನ್ಐಎ ಹೇಳಿದೆ. ದಾವೂದ್ ಇಬ್ರಾಹಿಂ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧ ಸಮಿತಿ ಬಿಡುಗಡೆ ಮಾಡಿದ ಪತ್ರ ಮತ್ತು ಯುಎಸ್ ಖಜಾನೆ ಇಲಾಖೆ ಪ್ರಕಟಿಸಿದ ಪರಿಶೀಲನಾ ವರಿಯಂತೆ ಡಿ ಗ್ಯಾಂಗ್ ಆಫ್ರಿಕಾದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ಐಎ ನ್ಯಾಯಾಲಯಕ್ಕೆ ತಿಳಿಸಿದೆ. ದಾವೂದ್ ಆಪ್ತ ಫಿರೋಜ್ ಎಂಬ ವ್ಯಕ್ತಿ ತಾಂಜೇನಿಯಾದಲ್ಲಿ ವಜ್ರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದಾನೆ ಆತನ ಜೊತೆ ರಮೀಸ್ ಸಂಪರ್ಕ ಹೊಂದಿದ್ದಾನೆ.
Kerala | Gold smuggling case accused Swapna Suresh writes to PM Narendra Modi seeking CBI inquiry in the case pic.twitter.com/a5DStrGH1g
— ANI (@ANI) June 21, 2022
ಸ್ವಪ್ನ ಸುರೇಶ್, ಪಿ.ಎಸ್ ಸರೀತ್ ಅಲ್ಲದೆ ಮೊಹಮ್ಮದ್ ಶಫಿ ಪಿ, ಜಲಾಲ್ ಎ. ಎಂ ಹಮ್ಮದ್, ರಮೀಸ್ ಕೆ.ಟಿ, ಶರಾಫುದ್ದೀನ್ ಕೆ, ಮೊಹಮ್ಮದ್ ಅಲಿ ಎಂಬುವರಿಗೂ ಜಾಮೀನು ಸಿಕ್ಕಿತ್ತು. ಆದರೆ, ಮಾಜಿ ಸಚಿವ ಕೆಟಿ ಜಲೀಲ್ ವಿರುದ್ಧ ಆರೋಪ ಮಾಡಿದ್ದ ಸ್ವಪ್ನಗೆ ಮತ್ತೆ ಸಂಕಷ್ಟ ಎದುರಾಗಿದೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications