ಕೇರಳ ಚಿನ್ನ ಕಳ್ಳಸಾಗಣೆ: 5 ಗಂಟೆ ಟಿವಿ ಪತ್ರಕರ್ತನ ವಿಚಾರಣೆ
ತಿರುವನಂತಪುರಂ, ಆಗಸ್ಟ್ 27: ಕೇರಳ ಅಕ್ರಮ ಚಿನ್ನ ಕಳ್ಳ ಸಾಗಣೆ ಕುರಿತಂತೆ ಕೇಳದ ಸುದ್ದಿವಾಹಿನಿ ಆಂಕರ್ ಒಬ್ಬರನ್ನು ಕಸ್ಟಂ ಅಧಿಕಾರಿಗಳು ಪ್ರಶ್ನಿಸಿದ್ದಾರೆ.
ಜನಮ್ ಟಿವಿ ಕೋ-ಆರ್ಡಿನೇಟಿಂಗ್ ಎಡಿಟರ್ ಅನಿಲ್ ನಂಬಿಯಾರ್ ಅವರನ್ನು ಕಸ್ಟಂ ಅಧಿಕಾರಿಗಳು ಚಿನ್ನ ಕಳ್ಳಸಾಗಣೆ ಕುರಿತಂತೆ ಪ್ರಶ್ನೆ ಮಾಡಿದ್ದಾರೆ.
ಸ್ವಪ್ನ ಸುರೇಶ್ ಜೊತೆ ಅವರಿಗಿರುವ ಸಂಬಂಧದ ಬಗ್ಗೆ ಐದು ತಾಸುಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅವರ ಕಾಲ್ ರೆಕಾರ್ಡ್ನಲ್ಲಿ ಅನಿಲ್ ಅವರು ಜುಲೈ 5 ರಂದು ಸ್ವಪ್ನ ಅವರಿಗೆ ಕರೆ ಮಾಡಿದ್ದಾರೆ ಎಂದಿದೆ. ಅದೇ ದಿನ ಕಸ್ಟಂ ಅಧಿಕಾರಿಗಳು ತಿರುವನಂತಪುರಂ ಏರ್ಪೋರ್ಟ್ನಲ್ಲಿ 30 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು.

ಒಂದು ಗಂಟೆ ಬಳಿಕ ಅಂದರೆ ಮಧ್ಯಾಹ್ನ 1.43ರ ವೇಳೆ ಸ್ವಪ್ನ ಸುರೇಶ್ ನಂಬಿಯಾರ್ಗೆ ಕರೆ ಮಾಡಿದ್ದರು. ಬಳಿಕ ಆಕೆ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಳು.
ಕೇರಳ ರಾಜ್ಯ ಸಚಿವಾಲಯದಲ್ಲಿ ಸಂಜೆ 4.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಆದರೆ ಹಲವು ಕಡತಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಎರಡನೇ ಮಹಡಿಯಲ್ಲಿರುವ ಶಿಷ್ಟಾಚಾರ ವಿಭಾಗದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತು. ಅಕ್ರಮ
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಇಲಾಖೆಯನ್ನು ಗುರಿಯಾಗಿಸಿಕೊಂಡು ಎನ್ಐಎ ತನಿಖೆ ನಡೆಸುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಆದರೆ ಕಡತಗಳು, ದಾಖಲೆಗಳು, ಕಂಪ್ಯೂಟರ್ಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿತು ಎಂದು ಸಾರ್ವಜನಿಕ ಆಡಳಿತ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಪಿ. ಹನಿ ಹೇಳಿದ್ದಾರೆ.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications