ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಕೇರಳ ರಾಜ್ಯಪಾಲರಿಂದ ಉಪವಾಸ ಸತ್ಯಾಗ್ರಹ
ತಿರುವನಂತಪುರಂ, ಜುಲೈ 14: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಒಂದು ದಿನದ ಉಪವಾಸ ಆರಂಭಿಸಿದ್ದಾರೆ.
ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ ಮತ್ತು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ದಿನದ ಉಪವಾಸ ಕೈಗೊಂಡಿದ್ದಾರೆ.
ಜತೆಗೆ ರಾಜಧಾನಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳಲಿದ್ದಾರೆ. ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘಟನೆಗಳು ಜಾಗೃತಿ ಮೂಡಿಸುವ ಉಪವಾಸ ಸತ್ಯಾಗ್ರಹ ಆಯೋಜಿಸಿವೆ.

ಕಳೆದ ತಿಂಗಳೇ ರಾಜ್ಯಪಾಲರು ವರದಕ್ಷಿಣೆ ವಿರೋಧಿ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕನಾಗಿ ಭಾಗವಹಿಸುವುದಾಗಿ ವಾಗ್ಧಾನ ಮಾಡಿದ್ದರು.
ಸಾಮಾಜಿಕ ಸಮಸ್ಯೆಯನ್ನು ಎತ್ತಿ ಹಿಡಿಯಲು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಜನರ ಜತೆ ಸೇರುವುದಾಗಿಯೂ ಅವರು ತಿಳಿಸಿದ್ದರು. ಕಳೆದ ತಿಂಗಳು ವರದಕ್ಷಿಣೆಗೆ ಬಲಿಯಾದ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾದ ಬಳಿಕ ಆರಿಫ್ ಮೊಹಮ್ಮದ್ ಖಾನ್ ಈ ಹೇಳಿಕೆ ನೀಡಿದ್ದರು. ವರದಕ್ಷಿಣೆಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸುವ ಅವಶ್ಯಕತೆಯನ್ನು ರಾಜ್ಯಪಾಲರು ಒತ್ತಿ ಹೇಳಿದ್ದರು.
ವರದಕ್ಷಿಣೆ ಪಿಡುಗು ರಾಜ್ಯದ ಹಲವಾರು ಮಹಿಳೆಯರ ಆತ್ಮಹತ್ಯೆಗೆ ಕಾರಣವಾಗಿದೆ. ಇದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, ವರದಕ್ಷಿಣೆ ವಿರುದ್ಧ ಸ್ವಯಂಸೇವಕರಾಗಿ ಕೆಲಸ ಮಾಡುವುದಾಗಿ ಕಳೆದ ತಿಂಗಳು ಭರವಸೆ ನೀಡಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications