ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಕೇರಳ ರಾಜ್ಯಪಾಲರಿಂದ ಉಪವಾಸ ಸತ್ಯಾಗ್ರಹ

|
Google Oneindia Kannada News

ತಿರುವನಂತಪುರಂ, ಜುಲೈ 14: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇಂದು ಒಂದು ದಿನದ ಉಪವಾಸ ಆರಂಭಿಸಿದ್ದಾರೆ.

ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ ಮತ್ತು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ದಿನದ ಉಪವಾಸ ಕೈಗೊಂಡಿದ್ದಾರೆ.

ಜತೆಗೆ ರಾಜಧಾನಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳಲಿದ್ದಾರೆ. ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘಟನೆಗಳು ಜಾಗೃತಿ ಮೂಡಿಸುವ ಉಪವಾಸ ಸತ್ಯಾಗ್ರಹ ಆಯೋಜಿಸಿವೆ.

 Kerala Governor Arif Mohammed Khan Joins Protest Fast Against Dowry Menace

ಕಳೆದ ತಿಂಗಳೇ ರಾಜ್ಯಪಾಲರು ವರದಕ್ಷಿಣೆ ವಿರೋಧಿ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕನಾಗಿ ಭಾಗವಹಿಸುವುದಾಗಿ ವಾಗ್ಧಾನ ಮಾಡಿದ್ದರು.

ಸಾಮಾಜಿಕ ಸಮಸ್ಯೆಯನ್ನು ಎತ್ತಿ ಹಿಡಿಯಲು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಜನರ ಜತೆ ಸೇರುವುದಾಗಿಯೂ ಅವರು ತಿಳಿಸಿದ್ದರು. ಕಳೆದ ತಿಂಗಳು ವರದಕ್ಷಿಣೆಗೆ ಬಲಿಯಾದ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾದ ಬಳಿಕ ಆರಿಫ್ ಮೊಹಮ್ಮದ್ ಖಾನ್ ಈ ಹೇಳಿಕೆ ನೀಡಿದ್ದರು. ವರದಕ್ಷಿಣೆಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸುವ ಅವಶ್ಯಕತೆಯನ್ನು ರಾಜ್ಯಪಾಲರು ಒತ್ತಿ ಹೇಳಿದ್ದರು.

ವರದಕ್ಷಿಣೆ ಪಿಡುಗು ರಾಜ್ಯದ ಹಲವಾರು ಮಹಿಳೆಯರ ಆತ್ಮಹತ್ಯೆಗೆ ಕಾರಣವಾಗಿದೆ. ಇದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, ವರದಕ್ಷಿಣೆ ವಿರುದ್ಧ ಸ್ವಯಂಸೇವಕರಾಗಿ ಕೆಲಸ ಮಾಡುವುದಾಗಿ ಕಳೆದ ತಿಂಗಳು ಭರವಸೆ ನೀಡಿದ್ದರು.

English summary
In first for a governor in the state, Governor Arif Mohammed Khan has decided to join a protest called against the practise of dowry organised in the wake of recent tragic death of Vismaya, a young woman who was repeatedly assaulted by her husband in the name of dowry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X