ಸೋಲಾರ್ ಹಗರಣ: ಸಿಬಿಐ ತನಿಖೆಗೆ ಒಪ್ಪಿಸಲು ಕೇರಳ ಸರ್ಕಾರ ನಿರ್ಧಾರ
ತಿರುವನಂತಪುರ,ಜನವರಿ 24: ಸೋಲಾರ್ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೇರಳ ಸರ್ಕಾರ ಮುಂದಾಗಿದೆ.
2003 ರಲ್ಲಿ ಟೀಮ್ ಸೋಲಾರ್ ಎಂಬ ಹೆಸರಿನ ನಕಲಿ ಕಂಪನಿ ಇಬ್ಬರು ಮಹಿಳೆಯರನ್ನು ಬಳಸಿಕೊಂಡು ಕೇರಳ ರಾಜ್ಯದಲ್ಲಿ ಸೌರ ವಿದ್ಯುತ್ ಘಟಕಗಳ ಸ್ಥಾಪನೆಗೆ ಮುಂದಾಗಿತ್ತು.
ಈ ಮಹಿಳೆಯರು ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಆಪ್ತ ಸಿಬ್ಬಂದಿ ಜತೆ ಸಂಪರ್ಕ ಸಾಧಿಸಿ, 70 ಮಿಲಿಯನ್ ಮೊತ್ತದ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದ್ದರು.

ಈ ನಕಲಿ ಕಂಪನಿಯ ನಿರ್ದೇಶಕರಾಗಿದ್ದ ಬಿಜು ರಾಧಾಕೃಷ್ಣನ್ ಹಾಗೂ ಸರಿತಾ ನಾಯರ್ ಸಾವಿರಾರು ಹೂಡಿಕೆದಾರರಿಂದ ಹಣ ಸಂಗ್ರಹಿಸಿ, ಪಾಲುದಾರಿಕೆ ಆಮಿಷ ಒಡ್ಡಿದ್ದರು. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಚಾಂಡಿ ಅವರ ಆಪ್ತ ಟೆನ್ನಿ ಎಂಬಾತನನ್ನು ಬಂಧಿಸಲಾಗಿತ್ತು.
ಕೇರಳದ ವಿಪಕ್ಷ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರಾದ ಮಾಜಿ ಸಿಎಂ ಉಮ್ಮನ್ ಚಾಂಡಿ, ಕೆ.ಸಿ.ವೇಣುಗೋಪಾಲ್, ಎಪಿ ಅನಿಲ್ ಕುಮಾರ್ ಮತ್ತು ಅಡೂರ್ ಪ್ರಕಾಶ್ ಮತ್ತು ಹಿಬಿ ಈಡನ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಾ ಕುಟ್ಟಿ ಸೇರಿದಂತೆ ಹಲವು ನಾಯಕರ ಹೆಸರು ಹಗರಣದಲ್ಲಿ ಕೇಳಿಬಂದಿತ್ತು.
ಸಚಿವರಾದ ಶಿಬು ಬೇಬಿ ಜಾನ್ ಮತ್ತು ಎ.ಪಿ.ಅನಿಲ್ ಕುಮಾರ,ಕಾಂಗ್ರೆಸ್ ಶಾಸಕರಾದ ಹೈಬಿ ಎಡೆನ್ ಮತ್ತು ಎ.ಪಿ.ಅಬ್ದುಲ್ಲಾ ಕುಟ್ಟಿ, ಕಾಂಗ್ರೆಸ್ ನಾಯಕ ಆರ್ಯದನ್ ಶೌಕತ್ತು ಮತ್ತು ಅನಿಲ್ ಕುಮಾರರ ಆಪ್ತ ಕಾರ್ಯದರ್ಶಿಗಳು ಹಗರಣದ ಪ್ರಮುಖ ಅಪರಾಧಿ ಸರಿತಾ ನಾಯರ್ ರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು ಎಂದು ಬಿಜು ಆರೋಪಿಸಿದ್ದರು.
ಪೆರುಂಬವೂರ್ ನಿವಾಸಿ ಸಜ್ಜದ್ ಎನ್ನುವವರು ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸರಿತಾ ಮತ್ತು ರಾದಾಕೃಷ್ಣನ್ ಪರಮಾಪ್ತರೆನ್ನುವ ವಿಚಾರ ರಾಜಕೀಯ ಮಹತ್ವವನ್ನು ಪಡೆದಿತ್ತು.
ಹಗರಣದ ಆರೋಪಿಗಳಾಗಿದ್ದ ಸರಿತಾ ಎಸ್ ನಾಯರ್ ಮತ್ತು ಬಿಜು ರಾಧಾಕೃಷ್ಣರಿಗೆ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲುಶಿಕ್ಷೆ, 10 ಸಾವಿರ ದಂಡವನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟಿ ಶಾಲೂ ಮೆನನ್ ಮತ್ತು ಆಕೆಯ ತಾಯಿಯನ್ನು ಖುಲಾಸೆಗೊಳಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications