ಎರಡು ಫಾರ್ಮ್ಗಳಲ್ಲಿ ಹಂದಿಜ್ವರ; ಅಲರ್ಟ್ ಆಯ್ತು ಕೇರಳ ಗೌರ್ಮೆಂಟ್!
ವಯನಾಡ್, ಜುಲೈ 23: ಕೇರಳದ ವಯನಾಡ್ ಜಿಲ್ಲೆಯ ಎರಡು ಫಾರ್ಮ್ಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾದ ಬೆನ್ನಲ್ಲೇ, ರಾಜ್ಯ ಸರ್ಕಾರ ಫುಲ್ ಅಲರ್ಟ್ ಆಗಿದೆ. ಈ ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದಕ್ಕೆ ಮುಂದಾಗಿದೆ.
ರಾಜ್ಯದಲ್ಲಿ ಹಂದಿಜ್ವರದ ಸೋಂಕಿನ ಬಗ್ಗೆ ಕೇರಳದ ಪಶುಸಂಗೋಪನಾ ಸಚಿವ ಜೆ ಚಿಂಚು ರಾಣಿ ದೃಢಪಡಿಸಿದ್ದಾರೆ. ಹಂದಿ ಜ್ವರದ ಕ್ರಿಯಾ ಯೋಜನೆಯ ಭಾಗವಾಗಿ ಜೈವಿಕ ಭದ್ರತೆ ಮತ್ತು ತ್ಯಾಜ್ಯ ವಿಲೇವಾರಿ ಕಾರ್ಯವಿಧಾನವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಂದಿ ಸಾಕಣೆ ಕೇಂದ್ರಗಳಿಗೆ ನಿರ್ದೇಶನ ನೀಡಿದ್ದಾರೆ.
ಶುಕ್ರವಾರ ಈ ಕುರಿತು ಮಾತನಾಡಿದ ಸಚಿವರು, "ವಯನಾಡ್ ಜಿಲ್ಲೆಯ ಮನಂತವಾಡಿ ಪ್ರದೇಶದಲ್ಲಿ ಇರುವ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಈ ರೋಗವನ್ನು ಐಸಿಎಆರ್ ಸಂಬಂಧಿತ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ-ಸೆಕ್ಯುರಿಟಿ ಅನಿಮಲ್ ಡಿಸೀಸ್ (NIHSAD) ದೃಢಪಡಿಸಿದೆ

ಕೇರಳದಲ್ಲಿ ಹಂದಿಜ್ವರದಿಂದ 44 ಹಂದಿ ಸಾವು
"ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿ ಫಾರ್ಮ್ನಲ್ಲಿ 43 ಹಂದಿಗಳು ಮತ್ತು ತಾವಿನ್ಹಾಳ್ ಪಂಚಾಯಿತಿಯ ಜಮೀನಿನಲ್ಲಿ ಒಂದು ಹಂದಿ ಸಾವನ್ನಪ್ಪಿವೆ. ಪಂಚಾಯಿತಿಯ ಜಮೀನಿನಲ್ಲಿ 300 ಹಂದಿಗಳಿವೆ. ಪ್ರಸ್ತುತ, ಮೂರು ಪ್ರಾಣಿಗಳು ಅನಾರೋಗ್ಯದ ಲಕ್ಷಣಗಳನ್ನು ತೋರಿಸುತ್ತಿವೆ. ಕಳೆದ ಜುಲೈ 19, 2022 ರಂದು, ಪಶುಸಂಗೋಪನಾ ಇಲಾಖೆಯ ಅಡಿಯಲ್ಲಿ ವಿವಿಧ ವಿಭಾಗಗಳ ತಜ್ಞರ ಸಭೆಯನ್ನು ನಡೆಸಲಾಯಿತು. ನಾವು ರೋಗವನ್ನು ನಿಯಂತ್ರಣಕ್ಕೆ ಸಂಬಂಧಿಸಿದ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ವಯನಾಡ್ ಜಿಲ್ಲೆ ಹಂದಿ ಸಾಕಾಣಿಕೆದಾರರಿಗೆ ತರಬೇತಿ
"ಹಂದಿಜ್ವರ ಪೀಡಿತ ಪ್ರದೇಶಗಳಿಗೆ ಪರಿಣಿತರ ತಂಡವು ಭೇಟಿ ನೀಡಿ ಮಾದರಿಯನ್ನು ಸಂಗ್ರಹಿಸಲಿದೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸಲು ಅಗತ್ಯ ಮಾಹಿತಿ ನೀಡಲಾಗುತ್ತದೆ. ಜಿಲ್ಲಾ ಪಶು ವೈದ್ಯಾಧಿಕಾರಿಗಳ ಸಭೆಯು ಬತ್ತೇರಿಯಲ್ಲಿ ನಡೆದಿದ್ದು, ಮುಖ್ಯ ರೋಗ ತನಿಖಾ ಅಧಿಕಾರಿಯು ಪರಿಸ್ಥಿತಿಯನ್ನು ವಿವರಿಸಿದರು. ವಯನಾಡ್ ಹಂದಿ ಸಾಕಣೆದಾರರ ಸಂಘದ ಪ್ರತಿನಿಧಿಗಳಿಗೆ ಜಾಗೃತಿ ತರಬೇತಿ ನೀಡಿದ್ದಾರೆ," ಎಂದು ಹೇಳಿದರು.

ಹಂದಿ ಮಾಂಸ ಆಮದು ಮತ್ತು ರಫ್ತಿಗೆ ನಿರ್ಬಂಧ
ಕೇರಳದಲ್ಲಿ ಹಂದಿಜ್ವರದ ರೋಗ ದೃಢಪಟ್ಟಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ, ಪ್ರಾಣಿಗಳಲ್ಲಿನ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾಯ್ದೆ, 2009 (2009 ರ ಕೇಂದ್ರ ಕಾಯಿದೆ 27) ಅನ್ನು ವಿಧಿಸಲಾಗಿದೆ. ಇದರಿಂದ ಹಂದಿಗಳನ್ನು ರಾಜ್ಯದ ಒಳಗೆ ಮತ್ತು ಹೊರಗೆ ಸಾಗಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಎಲ್ಲಾ ಗಡಿ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸುವಂತೆ ಮತ್ತು ಹಂದಿಗಳು, ಹಂದಿ ಮಾಂಸ, ಹಂದಿ ಮಾಂಸದ ಉತ್ಪನ್ನಗಳು ಮತ್ತು ಹಂದಿಗಳ ಮಲವನ್ನು ಸಾಗಿಸುವ ವಾಹನಗಳು ರಾಜ್ಯಕ್ಕೆ ಪ್ರವೇಶಿಸುವುದನ್ನು ತಡೆಯಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದೇಶೀಯ ಹಂದಿಗಳಿಗೆ ಮಾರಣಾಂತಿಕ ರೋಗ
ಕೇರಳದ ಎಲ್ಲಾ ಹಂದಿ ಫಾರಂಗಳಲ್ಲಿ ಪಶು ಕಲ್ಯಾಣ ಇಲಾಖೆಯ ವೈದ್ಯರ ಮಾರ್ಗದರ್ಶನದ ಅಡಿ ತಪಾಸಣೆ ನಡೆಸಲಾಗುತ್ತಿದೆ. ನಿಯಮಾವಳಿ ಉಲ್ಲಂಘಿಸಿ ಹಂದಿ ಸಾಗಾಟಕ್ಕೆ ಯತ್ನಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುವುದು. ಪ್ರಸ್ತುತ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಲಸಿಕೆ ಇಲ್ಲದಿದ್ದರೆ ಪಶು ಕಲ್ಯಾಣ ಇಲಾಖೆ ಸೂಚಿಸಿದಂತೆ ಜೈವಿಕ ಭದ್ರತಾ ವ್ಯವಸ್ಥೆ ಬಲಪಡಿಸಲು ಎಲ್ಲಾ ತೋಟದ ಮಾಲೀಕರು ಕಾಳಜಿ ವಹಿಸಬೇಕು ಎಂದು ಸಚಿವರು ತಿಳಿಸಿದರು.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications