Breaking; ಕೇರಳ ಆರೆಸ್ಸೆಸ್ ಕಚೇರಿ ಮೇಲೆ ಬಾಂಬ್ ದಾಳಿ; ಪಿಎಫ್ಐ ಪ್ರತಿಭಟನೆ ಘೋರ
ತಿರುವನಂತಪುರಂ, ಸೆ. 23: ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿಗಳ ಮೇಲೆ ದೇಶಾದ್ಯಂತ ಎನ್ಐಎ ರೇಡ್ ನಡೆದಿರುವುದನ್ನು ವಿರೋಧಿಸಿ ಆ ಸಂಘಟನೆ ಶುಕ್ರವಾರ ಕರೆ ಕೊಟ್ಟಿದ್ದ ಕೇರಳ ಹರತಾಳದಲ್ಲಿ ಬಹಳಷ್ಟು ಹಿಂಸಾ ಕೃತ್ಯಗಳು ಜರುಗುತ್ತಿವೆ.
ಕಣ್ಣೂರು ಜಿಲ್ಲೆಯ ಮಟ್ಟನೂರ್ ನಗರದಲ್ಲಿರುವ ಆರ್ ಎಸ್ ಎಸ್ ಕಚೇರಿ ಮೇಲೆ ದುಷ್ಕರ್ಮಿಗಳು ಬಾಂಬ್ ದಾಳಿ ಎಸಗಿರುವುದು ವರದಿಯಾಗಿದೆ. ಆದರೆ, ಈ ಘಟನೆಯಲ್ಲಿ ಸಾವು ನೋವು ಆಗಿರುವ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಯಾರು ಈ ಬಾಂಬ್ ಹಾಕಿದ್ದು ಎಂಬುದೂ ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ.
ಕೇರಳಾದ್ಯಂತ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯುತ್ತಿರುವ ಹರತಾಳದ ವೇಳೆ ವಿವಿಧೆಡೆ ಹಿಂಸಾಚಾರ ಘಟನೆಗಳು ಸಂಭವಿಸಿವೆ. ಕೇರಳ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯ ಬಸ್ಸುಗಳು ಹೆಚ್ಚಾಗಿ ಪ್ರತಿಭಟನಾಕಾರರ ಆಕ್ರೋಶಕ್ಕೆ ತುತ್ತಾಗಿವೆ. ತಿರುವನಂತಪುರಂ, ಕೊಲ್ಲಂ, ಕೋಳಿಕೋಡ್, ವಯನಾಡ್, ಅಲಪ್ಪುಳ ಮೊದಲಾದ ಜಿಲ್ಲೆಗಳಲ್ಲಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಇದೇ ವೇಳೆ ಬಹಳಷ್ಟು ಮಂದಿಗೆ ಗಾಯಗಳಾಗಿರುವುದು ತಿಳಿದುಬಂದಿದೆ. ಕೇರಳ ಸರಕಾರ ನೀಡಿರುವ ಮಾಹಿತಿ ಪ್ರಕಾರ ೭೦ಕ್ಕೂ ಹೆಚ್ಚು ಬಸ್ಸುಗಳಿಗೆ ಹಾನಿಯಾಗಿದೆ.

ಹೈಕೋರ್ಟ್ ಸುಮೋಟೊ ಪ್ರಕರಣ
ಕೇರಳದಲ್ಲಿ ಪಿಎಫ್ಐ ನಡೆಸಿರುವ ಬಂದ್ ಮತ್ತು ಹಿಂಸಾಚಾರ ಘಟನೆಗಳ ಸಂಬಂಧ ಕೇರಳ ಉಚ್ಚ ನ್ಯಾಯಾಲಯ ಸ್ವಯಂ ಆಗಿ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದೆ.

ಯಾರೂ ಹರತಾಳ ನಡೆಸಕೂಡದು ಎಂದು ನ್ಯಾಯಾಲಯವೇ ಈ ಹಿಂದೆ ಆದೇಶ ನೀಡಿತ್ತು. ಆದರೂ ಪಿಎಫ್ಐ ಶುಕ್ರವಾರ ಹರತಾಳ ನಡೆಸಿರುವದರಿಂದ ಹೈಕೋರ್ಟ್ ಸುಮೋಟೋ ಕೇಸ್ ದಾಖಲಿಸಿದೆ. ಹರತಾಳ ನಿಷೇಧಿಸುವ ಕೋರ್ಟ್ ಆದೇಶವನ್ನು ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇರಳ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗೆಯೇ, ಯಾವುದೇ ರೀತಿಯ ಹಿಂಸಾಚಾರ ಆಗದಂತೆ ಹೇಗಾದರೂ ಮಾಡಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದೂ ಕೋರ್ಟ್ ಸೂಚಿಸಿದೆ.
(ಒನ್ಇಂಡಿಯಾ ಸುದ್ದಿ)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications