ನಿರ್ಮಾಪಕಿ ಆಯಿಷಾ ಸುಲ್ತಾನಾಗೆ ಜಾಮೀನು ನೀಡಿದ ಕೇರಳ ಹೈಕೋರ್ಟ್
ದೇಶದ್ರೋಹ ಪ್ರಕರಣ ಎದುರಿಸುತ್ತಿದ್ದ ಲಕ್ಷದ್ವೀಪ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿದೆ.
ದ್ವೀಪದ ಸ್ಥಳೀಯರ ವಿರುದ್ಧ ಜೈವಿಕ ಅಸ್ತ್ರ ಪ್ರಯೋಗಿಸಲೆಂದೇ ಕೇಂದ್ರ ಸರ್ಕಾರ ನಡುಗಡ್ಡೆಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಗೊಳಿಸಿದೆ ಎಂದು ಟೆಲಿವಿಷನ್ ನೇರಪ್ರಸಾರ ಕಾರ್ಯಕ್ರಮವೊಂದರಲ್ಲಿ ಆಯಿಷಾ ಹೇಳಿದ್ದರು. ದ್ವೀಪ ಸಮೂಹದಲ್ಲಿ ಕೋವಿಡ್ ನಿರ್ಬಂಧ ಸಡಿಲಿಸುವ ಕೇಂದ್ರ ಸರ್ಕಾರದ ನಿರ್ಧಾರ ನಡುಗಡ್ಡೆಗಳ ಸ್ಥಳೀಯರ ಮೇಲಿನ ಜೈವಿಕ ಅಸ್ತ್ರ ಪ್ರಯೋಗ ಎಂದು ಸುಲ್ತಾನಾ ಕಾರ್ಯಕ್ರಮದಲ್ಲಿ ತಿಳಿಸಿದ್ದರು.
ಮಲಯಾಳಂ ಟಿ.ವಿ ಚಾನೆಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು 'ಜೈವಿಕ ಶಸ್ತ್ರ' ಬಳಸಲಾಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಸುಲ್ತಾನಾ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಖಂಡಿಸಿದ ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಅವರು ಜೂನ್ 11 ರಂದು ಆಯಿಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪದ ಕವರತ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆಯಿಷಾ ವಿರುದ್ಧ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ನ್ಯಾಯಮೂರ್ತಿ ಅಶೋಕ್ ಮೆನನ್ ನೇತೃತ್ವದ ಏಕಸದಸ್ಯ ಪೀಠ "ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವಂತಹ ಯಾವುದೇ ಆಪಾದನೆಗಳ ಸ್ಪಷ್ಟ ಸೂಚನೆ ಆಯಿಷಾ ಅವರ ಹೇಳಿಕೆಯಲ್ಲಿ ಇಲ್ಲ" ಎಂದು ತೀರ್ಪು ನೀಡಿತು.
ನ್ಯಾಯಾಲಯ ಹೇಳಿದ್ದೇನು?
ಐಪಿಸಿ ಸೆಕ್ಷನ್ 124 ಎ ಪ್ರಕಾರ ದೇಶದ್ರೋಹ ಅಪರಾಧ ನಿರೂಪಿಸುವ ನಿರ್ಣಾಯಕ ಅಂಶ ಎಂದರೆ ಭಾರತದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತವಾದ ಸರ್ಕಾರವನ್ನು ದ್ವೇಷ ಅಥವಾ ನಿಂದನೆಗೆ ಕಾರಣವಾಗುವಂತಹ ಕೃತ್ಯಗಳನ್ನು ರೂಪಿಸುವುದಾಗಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಭಾರತ ಸರ್ಕಾರದ ವಿರುದ್ಧ ಅಂತಹ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಯಾವುದೇ ಸುಳಿವು ಇಲ್ಲ.
ಸುಲ್ತಾನಾ ತಮ್ಮ ಹೇಳಿಕೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವಂತಹ ಅಥವಾ ಯಾವುದೇ ವರ್ಗದ ವ್ಯಕ್ತಿಗಳನ್ನು ಮತ್ತೊಂದು ಗುಂಪಿನ ವ್ಯಕ್ತಿಗಳ ವಿರುದ್ಧ ಪ್ರಚೋದಿಸಿಲ್ಲ. ಹೀಗಾಗಿ ಐಪಿಸಿ ಸೆಕ್ಷನ್ 153-ಎ ಅಡಿ ಶಿಕ್ಷೆಗೆ ಒಳಪಡಿಸಬಹುದೇ ಎಂಬ ಅನುಮಾನವಿದೆ.
*ಅರ್ಜಿದಾರರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ಆಕೆ (ಆಯಿಷಾ) ಕಾನೂನಿನಿಂದ ಪಲಾಯಾನ ಮಾಡುವ ಸಾಧ್ಯತೆ ಇಲ್ಲ.
*ಅರ್ಜಿದಾರರನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸುವುದು ಮತ್ತು ಜೈಲಿನಲ್ಲಿರಿಸುವುದು ಕೋವಿಡ್ ಸಂದರ್ಭದ ಅಗತ್ಯವಲ್ಲ.
*ಆಕೆ ಕಾನೂನಿನಿಂದ ತಪ್ಪಿಸಿಕೊಳ್ಳುತ್ತಾರೆ ಅಥವಾ ತನಿಖೆಗೆ ಸಹಕರಿಸುವುದಿಲ್ಲ ಎಂಬ ಆತಂಕವನ್ನು ಪ್ರಾಸಿಕ್ಯೂಷನ್ ವ್ಯಕ್ತಪಡಿಸಿಲ್ಲ.
*ಅರ್ಜಿದಾರರು ರೂ 50,000 ಮೊತ್ತದ ಬಾಂಡ್ ಸಲ್ಲಿಸಬೇಕಿದ್ದು, ಇಬ್ಬರ ಶ್ಯೂರಿಟಿ ಅಗತ್ಯವಿದೆ.
*ತೀರ್ಪು ನಿರೀಕ್ಷಣಾ ಜಾಮೀನಿಗೆ ಮಾತ್ರ ಸಂಬಂಧಿಸಿದ್ದು ಪ್ರಕರಣದ ಅರ್ಹತೆಯನ್ನು ನ್ಯಾಯಾಲಯ ನಿರ್ಧರಿಸುವುದಿಲ್ಲ.
*ಲಕ್ಷದ್ವೀಪದಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ ಬಳಿಕ ಆಯಿಷಾ ನಿರೀಕ್ಷಣಾ ಜಾಮೀನು ಕೋರಿ ಈ ತಿಂಗಳ ಆರಂಭದಲ್ಲಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಹಿರಿಯ ನ್ಯಾಯವಾದಿ ಪಿ ವಿಜಯಭಾನು ಅವರು ಸುಲ್ತಾನಾ ಪರ ಹಾಜರಾಗಿದ್ದರೆ, ಸ್ಥಾಯಿ ವಕೀಲ ಎಸ್ ಮನು ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.(ಮಾಹಿತಿ ಬಾರ್ ಆಂಡ್ ಬೆಂಚ್)
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications