ತಂದೆ-ಮಗುವನ್ನು ಅವಮಾನಿಸಿದ ಪೊಲೀಸ್ ಅಧಿಕಾರಿಯ ಸಮರ್ಥಿಸಿದ ಕೇರಳ ಸರ್ಕಾರಕ್ಕೆ 'ಹೈ' ಚಾಟಿ
ತಿರುವನಂತಪುರಂ, ಡಿಸೆಂಬರ್ 21: ತಿರುವನಂತಪುರಂ ಜಿಲ್ಲೆಯ ಅಟ್ಟಿಂಗಲ್ನಲ್ಲಿ ಪೊಲೀಸ್ ಅಧಿಕಾರಿಯಿಂದ ಅವಮಾನಕ್ಕೊಳಗಾದ ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೇರಳ ಹೈಕೋರ್ಟ್ ನಾಲ್ಕು ದಿನಗಳ ಹಿಂದೆ ಸೂಚನೆ ನೀಡಿದೆ. ಇದಾದ ಬಳಿಕ ಈಗ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವರದಿಯನ್ನು ಸ್ವೀಕಾರ ಮಾಡಲು ನಿರಾಕರಿಸಿದೆ.
ಆಗಸ್ಟ್ 27 ರಂದು, 38 ವರ್ಷದ ಜಯಚಂದ್ರ ಮತ್ತು ಅವರ ಮಗಳು ಇಸ್ರೋ ಘಟಕಕ್ಕೆ ಉಪಕರಣಗಳನ್ನು ಸಾಗಿಸುವ ಬೃಹತ್ ಟ್ರೈಲರ್ ಅನ್ನು ವೀಕ್ಷಣೆ ಮಾಡಲು ಅಟ್ಟಿಂಗಲ್ ಬಳಿಯ ಹೊರವಲಯದ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಪೊಲೀಸ್ ಅಧಿಕಾರಿ ಇವರಿಬ್ಬರನ್ನು ಅವಮಾನ ಮಾಡಿದ್ದಾರೆ. ತನ್ನ ಮೊಬೈಲ್ ಫೋನ್ ಕಾಣೆಯಾಗಿದೆ ಎಂದು ಹೇಳಿ ಮಹಿಳಾ ಅಧಿಕಾರಿ ರೆಜಿತಾ, ಪೊಲೀಸ್ ಗಸ್ತು ವಾಹನದ ಬಳಿ ನಿಂತಿದ್ದ ಜಯಚಂದ್ರ ಕದ್ದಿದ್ದಾರೆ ಎಂದು ಆರೋಪ ಮಾಡಿದ್ದರು. ಜಯಚಂದ್ರ ಮೊಬೈಲ್ ಕದ್ದು ಎಂಟು ವರ್ಷದ ಮಗಳಿಗೆ ನೀಡಿರಬೇಕು ಎಂದು ಮಹಿಳಾ ಅಧಿಕಾರಿ ರೆಜಿತಾ ದೂರಿದ್ದರು.
ಇಷ್ಟೇ ಅಲ್ಲದೇ ಸಾರ್ವಜನಿಕವಾಗಿ ಇಬ್ಬರ ಮೇಲೆ ವಾಗ್ದಾಳಿ ನಡೆಸಿದ್ದರು. ಇಬ್ಬರನ್ನು ಕೂಡಾ ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಬೆದರಿಕೆ ಹಾಕಿದ್ದರು. ಈ ಸಂದರ್ಭದಲ್ಲಿ ಅಲ್ಲಿ ಹಲವಾರು ಮಂದಿ ಬಂದು ಸೇರಿದ್ದರು. ಆ ಬಳಿಕ ರೆಜಿತಾ ಮೊಬೈಲ್ ಫೋನ್ ಪೊಲೀಸ್ ಗಸ್ತು ವಾಹನದಲ್ಲಿಯೇ ಪತ್ತೆಯಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದವು. ಆ ಬೆನ್ನಲ್ಲೇ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಥಾಪಿಸಲಾದ 'ಪಿಂಕ್ ಪೆಟ್ರೋಲ್'ಗೆ ಸೇರಿದ ಮಹಿಳಾ ಪೊಲೀಸ್ ಅಧಿಕಾರಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದವು.

ರಾಜ್ಯ ಸರ್ಕಾರದ ವರದಿಯಲ್ಲಿ ಏನಿದೆ?
ಈ ಘಟನೆಯ ಬಗ್ಗೆ ವರದಿ ನೀಡಿರುವ ರಾಜ್ಯ ಸರ್ಕಾರವು ಮಹಿಳಾ ಅಧಿಕಾರಿ ಆ ಚಿಕ್ಕ ಬಾಲಕಿಗೆ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಂಡಿಲ್ಲ. ಅನುಚಿತವಾಗಿ ವರ್ತನೆ ಮಾಡಿಲ್ಲ ಎಂದು ರಾಜ್ಯ ಸರ್ಕಾರದ ವರದಿ ಹೇಳಿದೆ. ಇನ್ನು ಅದಕ್ಕೆ ಸಾಕ್ಷಿ ಎಂಬಂತೆ ನಾಲ್ವರು ಸಾಕ್ಷಿಗಳನ್ನು ಕೂಡಾ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಹಾಗೆಯೇ ಆ ಮಗುವಿಗೆ ಪರಿಹಾರವನ್ನು ನಿರಾಕರಣೆ ಮಾಡಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದರೂ ಸರ್ಕಾರ ಅಧಿಕಾರದ ಮೇಲೆ ಮೃದು ಧೋರಣೆಯನ್ನು ತಳೆದಿದೆ ಎಂದು ಆರೋಪ ಮಾಡಲಾಗಿದೆ. ಇನ್ನು ಸರ್ಕಾರವು ವರದಿಯಲ್ಲಿ, "ಮಗು ಅವಮಾನದಿಂದ ಅಳಲಿಲ್ಲ. ಜನರು ಸೇರಿದ್ದನ್ನು ನೋಡಿ ಅತ್ತಿದೆ," ಎಂದು ಸರ್ಕಾರವು ಹೇಳಿದೆ.
ಅವಮಾನ ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ದೂರು
ಆಗಸ್ಟ್ 27 ರಂದು, ತಮ್ಮನ್ನು ಪೊಲೀಸ್ ಅಧಿಕಾರಿ ರೆಜಿತಾ ಕಳ್ಳತನದ ಆರೋಪ ಮಾಡಿ ಸಾರ್ವಜನಿಕವಾಗಿ ಅವಮಾನ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಗಸ್ಟ್ 31 ರಂದು, ಜಯಚಂದ್ರನ್ ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ರನ್ನು ಸಂಪರ್ಕ ಮಾಡಿ ಈ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಕಾಂತ್, ದಕ್ಷಿಣ ವಲಯ ಐಜಿ ಹರ್ಷಿತಾ ಅಟ್ಟಲೂರಿಗೆ ತನಿಖೆ ನಡೆಸುವಂತೆ ಸೂಚಿಸಿದ್ದರು. ಬಳಿಕ ರೆಜಿತಾರ ವರ್ಗಾವಣೆ ನಡೆದಿತ್ತು. ಆದರೆ ಅನುಕೂಲಕರವಾದ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳ ಬೆನ್ನಲ್ಲೇ ಸೆಪ್ಟೆಂಬರ್ನಲ್ಲಿ, ಕುಟುಂಬವು ಕೇರಳ ಸೆಕ್ರೆಟರಿಯೇಟ್ ಮುಂದೆ ಒಂದು ದಿನದ ಧರಣಿಯನ್ನು ಕೂತಿತ್ತು. ಇದಕ್ಕೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆ ಈ ಕುಟುಂಬವು ಕೇರಳ ಹೈಕೋರ್ಟ್ ಮೊರೆ ಹೋಯಿತು.
ಸರ್ಕಾರ ಅಧಿಕಾರಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಮತ್ತು ಮಗುವಿನ ಮೂಲಭೂತ ಹಕ್ಕುಗಳನ್ನು ನಿರಾಕರಿಸುತ್ತಿದೆ ಎಂದು ಮಗುವಿನ ಕುಟುಂಬ ಆರೋಪಿಸಿದೆ. ನವೆಂಬರ್ 29 ರಂದು, ಅಧಿಕಾರಿಯು ಮಗು ಮತ್ತು ಆಕೆಯ ತಂದೆಯನ್ನು ಅವಮಾನಿಸುವ ದೃಶ್ಯಗಳನ್ನು ವೀಕ್ಷಿಸಿದ ನಂತರ, ನ್ಯಾಯಾಲಯವು ಅಧಿಕಾರಿ ಮಗುವಿನ ಬಳಿ ಕ್ಷಮೆ ಕೂಡಾ ಕೇಳಿಲ್ಲ ಎಂಬುವುದನ್ನು ಗಮನಿಸಿದೆ. ಇದಾದ ಒಂದು ವಾರದ ನಂತರ, ಅಧಿಕಾರಿಯು ಹೈಕೋರ್ಟ್ಗೆ ಲಿಖಿತ ಕ್ಷಮೆಯಾಚನೆಯನ್ನು ಸಲ್ಲಿಸಿದರು. ಕುಟುಂಬ ಎದುರಿಸಿದ ಆಘಾತಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೋರಿ ಕುಟುಂಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದ್ದು, ಇದು ಭಾರೀ ಮೊತ್ತವಾದ ಕಾರಣ ಇಷ್ಟೊಂದು ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿದೆ. (ಒನ್ಇಂಡಿಯಾ ಸುದ್ದಿ)
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications