ಬೈಕ್ ಸವಾರರಿಗೆ ಪೊಲೀಸರಿಂದ ನೆಮ್ಮದಿ ನೀಡಿದ ಹೈಕೋರ್ಟ್ ಆದೇಶ
ತಿರುವನಂತಪುರಂ, ನವೆಂಬರ್ 22: ಬೈಕ್ ಸವಾರರಿಗೆ ಸಂಚಾರಿ ಪೊಲೀಸರ ಕಾಟ ಅಷ್ಟಿಷ್ಟಲ್ಲ. ಆದರೆ ಕೇರಳ ಹೈಕೋರ್ಟ್ ನೀಡಿರುವ ಆದೇಶ ಅಲ್ಲಿನ ಬೈಕ್ ಸವಾರರಿಗೆ ನಿರಾಳತೆ ನೀಡಿದೆ.
ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ನಿಲ್ಲಲು ಸಂಚಾರಿ ಪೊಲೀಸರು ಸೂಚಿಸಬಹುದೇ ವಿನಃ ಅವರನ್ನು ನಿಲ್ಲುವಂತೆ ಒತ್ತಡ ಹೇರುವಂತಿಲ್ಲ. ಬಲ ಪ್ರದರ್ಶನ ಮಾಡುವಂತಿಲ್ಲ, ಹಾಗೂ ಅವರನ್ನು ಬೆನ್ನಟ್ಟಿ ಹೋಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ಮಾಡಿದೆ. ಕೇರಳ ಹೈಕೋರ್ಟ್ನ ಈ ಆದೇಶ ಡಿಸೆಂಬರ್ 1 ರಿಂದ ಜಾರಿ ಆಗಲಿದೆ.
ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ, ಕೇರಳ ಹೈಕೋರ್ಟ್ ನ್ಯಾಯಾಧೀಶ ರಾಜಾ ವಿಜಯರಂಗನ್ ಅವರು ಈ ಆದೇಶ ಹೊರಡಿಸಿದ್ದು, ಬೈಕ್ ಸವಾರರನ್ನು ತಡೆಯಲು ಪೊಲೀಸರು 'ಬಲ ಪ್ರದರ್ಶನ' ಮಾಡುವಂತಿಲ್ಲ ಎಂದು ಆದೇಶಿಸಿದ್ದಾರೆ.

ಪೊಲೀಸರನ್ನು ಗುದ್ದಿದ್ದ ಕೇಸ್ ವಿಚಾರಣೆ ವೇಳೆ ಆದೇಶ
ಕೇರಳದ ಮುಫ್ಲಿ ಎಂಬ ವ್ಯಕ್ತಿ ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುತ್ತಿದ್ದಾಗ ಪೊಲೀಸರು ಆತನನ್ನು ತಡೆದಿದ್ದರು. ಆಗ ಆತನ ವಾಹನವು ತನ್ನನ್ನು ತಡೆದ ಪೊಲೀಸರಿಗೆ ಗುದ್ದಿದೆ. ಇದರ ವಿರುದ್ಧ ಪ್ರಕರಣ ದಾಖಲಾಗಿ ಮುಫ್ಲಿ ಜೈಲು ಅನುಭವಿಸುವಂತಾಗಿತ್ತು. ಆತನ ಜಾಮೀನು ಅರ್ಜಿ ವಿಚಾರಣೆ ವೇಳೆ ಮೇಲಿನಂತೆ ಆದೇಶ ಹೊರಡಿಸಲಾಗಿದೆ. ಮುಫ್ಲಿಗೆ ಜಾಮೀನು ಸಹ ಮಂಜೂರಾಗಿದೆ.

ಕೈ ಚಿಹ್ನೆ, ಅಥವಾ ವಾಹನಕ್ಕೆ ಅಡ್ಡ ಬರುವುದು ಮಾಡುವಂತಿಲ್ಲ
ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಪೊಲೀಸರು ತಂತ್ರಜ್ಞಾನ ಉಪಯೋಗಿಸಿ ಬೇರೆ ದಾರಿಗಳನ್ನು ಕಂಡುಕೊಳ್ಳಬೇಕೆ ವಿನಃ ಸವಾರರನ್ನು ಚೇಸ್ ಮಾಡಬಾರದು ಎಂದು ಹೈಕೋರ್ಟ್ ಹೇಳಿದೆ. ಸವಾರರನ್ನು ತಡೆಯಲು ಸಹ ಚಿಹ್ನೆಗಳು ಅಥವಾ ದೀಪಗಳನ್ನು ಬಳಸಿ ತಡೆಯಬೇಕೆ ವಿನಃ ದೈಹಿಕ ಸಂಜ್ಞೆಗಳನ್ನು ಉಪಯೋಗಿಸಿ, ಅಥವಾ ರಸ್ತೆಗೆ ಅಡ್ಡಲಾಗಿ ಬಂದು ತಡೆಯಬಾರದು ಎಂದು ಹೈಕೋರ್ಟ್ ಹೇಳಿದೆ.

ಸವಾರರಿಗೆ ತೊಂದರೆ ಆಗುವ ರೀತಿಯಲ್ಲಿ ದಂಡ ವಸೂಲಿ ಬೇಡ
ಡಿಜಿಟಲ್ ಕ್ಯಾಮೆರಾ, ಟ್ರಾಫಿಕ್ ಕಂಟ್ರೋಲ್ ಕ್ಯಾಮೆರಾ, ಮೊಬೈಲ್ ಕ್ಯಾಮೆರಾ ಮತ್ತಿತರೆ ಪರಿಕರಗಳನ್ನು ಹೆಚ್ಚಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿ ಸಂಚಾರ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಬೇಕೇ ವಿನಃ ಸವಾರರಿಗೆ ತೊಂದರೆ ಆಗುವ ರೀತಿಯಲ್ಲಿ ನಿಯಮವನ್ನು ಹೇರಲು, ದಂಡ ಕಟ್ಟಿಸಿಕೊಳ್ಳಲು ಯತ್ನಿಸಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

ನಿಗದಿತ ಸ್ಥಳದಲ್ಲಿಯೇ ಸಂಚಾರಿ ನಿಯಮ ಉಲ್ಲಂಘನೆ ತಪಾಸಣೆ ಮಾಡಿ
ಸಂಚಾರಿ ಪೊಲೀಸರು ತಮಗೆ ತೋಚಿದ ಸ್ಥಳದಲ್ಲಿ ನಿಂತು ಸಂಚಾರಿ ತಪಾಸಣೆ ಮಾಡುವ ಬಗ್ಗೆಯೂ ಕೇರಳ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ನಿಗದಿತ ಸ್ಥಳದಲ್ಲಿ ನಿಂತು ಪೊಲೀಸರು ಸಂಚಾರ ತಪಾಸಣೆ ಮಾಡಬೇಕು ಎಂದು ಹೇಳಿದೆ.

ಬೈಕ್ ಸವಾರರಿಬ್ಬರೂ ಹೆಲ್ಮೆಟ್ ಧರಿಸುವುದು ಕಡ್ಡಾಯ
ಕೇರಳ ರಾಜ್ಯದಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಾಗಿದೆ. ಮೊಟಾರು ವಾಹನ ಕಾಯ್ದೆ ತಿದ್ದುಪಡಿ ಅನ್ವಯ ದುಬಾರಿ ದಂಡಗಳನ್ನು ಜನರ ಮೇಲೆ ಹೇರಲು ಕೇರಳ ಸರ್ಕಾರ ವಿರೋಧಿಸಿತ್ತು. ಆದರೆ ಈಗ ಅಂತಿಮವಾಗಿ ಕೇರಳದಲ್ಲೂ ಸಹ ಮುಂಬದಿ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications