ಕೇರಳದಲ್ಲಿ ಬಸ್ ಸಂಚಾರ: ಟಿಕೆಟ್ ದರ ಶೇ.50 ರಷ್ಟು ಏರಿಕೆ
ತಿರುವನಂತಪುರಂ, ಮೇ 19: ಕೇರಳದಲ್ಲಿ ಮಾರ್ಚ್ 20 ರಿಂದ ಬಸ್ ಸಂಚಾರ ಆರಂಭಗೊಳ್ಳಲಿದೆ.ಒಂದು ಬಸ್ನಲ್ಲಿ 25 ಜನರಿಗೆ ಮಾತ್ರವೇ ಅವಕಾಶ ನೀಡಿರುವುದರಿಂದ ಅರ್ಧದಷ್ಟು ಜನ ಮಾತ್ರ ಪ್ರಯಾಣಿಸಿದಂತಾಗುತ್ತದೆ. ಇದರಿಂದ ಸಾರಿಗೆ ನಿಗಮಕ್ಕೆ ದಿನವೊಂದಕ್ಕೆ ಸುಮಾರು 42 ಲಕ್ಷ ರೂ ನಷ್ಟವಾಗುತ್ತದೆ.
ಒಂದು ಬಸ್ನಲ್ಲಿ 25ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವಂತಿಲ್ಲ. ಎರಡು ಆಸನಗಳು ಸೇರಿ ಓರ್ವ ಪ್ರಯಾಣಿಕ ಮಾತ್ರ ಕುಳಿತುಕೊಳ್ಳಬಹುದಾಗಿದೆ. ಬಸ್ ಹತ್ತುವ ಮುನ್ನ ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ.
ಸಂಚಾರ ಪುನರಾರಂಭಿಸುವ ಬಗ್ಗೆ ಖಾಸಗಿ ಬಸ್ ಮಾಲೀಕರು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.ಲಾಕ್ಡೌನ್ 4.0ದಲ್ಲಿ ಬಸ್ ಸಂಚಾರಕ್ಕೆ ವಿನಾಯಿತಿ ನೀಡಲಾಗಿರುವುದರಿಂದ ಅಂತರಜಿಲ್ಲಾ ಸಂಚಾರಕ್ಕೂ ಅನುಮತಿಸಲಾಗಿದೆ.

ಗರಿಷ್ಠ ಸಂಖ್ಯೆಯಲ್ಲಿ ಬಸ್ಗಳು ಸಂಚಾರ ನಡೆಸಲಿವೆ. ಸಂಚರಿಸಬೇಕಾದ ಮಾರ್ಗಗಳು ಮತ್ತು ಪ್ರಯಾಣದ ವೇಳಾಪಟ್ಟಿ ಅಂತಿಮಗೊಳಿಸಲು ಎಲ್ಲಾ ಡಿಪೊಗಳಿಗೆ ಸೂಚನೆ ನೀಡಲಾಗಿದೆ. ಕನಿಷ್ಠ ದರ 8 ರಿಂದ 12 ರೂ.ಗಳಿಗೆ ಹೆಚ್ಚಿಸಲಾಗಿದೆ.












Click it and Unblock the Notifications