ಐಸಿಸ್ ಸೇರಿದ್ದ ಕೇರಳದ ಉಗ್ರ ಅಮೆರಿಕದ ಡ್ರೋನ್ ದಾಳಿಯಲ್ಲಿ ಸಾವು
ತಿರುವನಂತಪುರಂ, ಜುಲೈ 31: ಸುಮಾರು ಎರಡು ವರ್ಷದ ಹಿಂದೆ ಕೇರಳದಿಂದ ತೆರಳಿ ಐಸಿಸ್ ಉಗ್ರ ಸಂಘಟನೆ ಸೇರಿದ್ದ ವ್ಯಕ್ತಿಯೊಬ್ಬ ಜುಲೈ 18ರಂದು ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಕೇರಳದ ಮಲಪ್ಪುರಂ ಜಿಲ್ಲೆಯ ಎಡಪ್ಪಳ್ ಪಟ್ಟಣದ ನಿವಾಸಿಯಾಗಿದ್ದ ಮುಹಮ್ಮದ್ ಮುಹಾಸಿನ್, 2017ರ ಅಕ್ಟೋಬರ್ನಲ್ಲಿ ಐಸಿಸ್ ಸೇರಲು ಮನೆಬಿಟ್ಟಿದ್ದ. ಈಗ ಅಫ್ಘಾನಿಸ್ತಾನದ ಖೋರೊಸಾನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ನ ಪ್ರಮುಖ ಕಮಾಂಡರ್ ಹುಜೈಫಾ ಅಲ್ ಬಾಕಿಸ್ತಾನಿಯ ಜತೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಬಾಕಿಸ್ತಾನಿ, ಅತ್ಯುನ್ನತ ತರಬೇತಿ ಪಡೆದಿರುವ ಪಾಕಿಸ್ತಾನದ ವ್ಯಕ್ತಿಯಾಗಿದ್ದಾನೆ. ಈಗ ಭಾರತದ ಅನೇಕ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ ಪ್ರಚೋದನೆ ನೀಡಿದ್ದ.
ಮುಹಾಸಿನ್ನ ಸಾವಿನ ಕುರಿತು ಕೇರಳದಲ್ಲಿರುವ ಆತನ ಕುಟುಂಬಕ್ಕೆ ಅಫ್ಘಾನಿಸ್ತಾನದಿಂದ ಅಪರಿಚಿತ ಸಂಖ್ಯೆಯೊಂದರಿಂದ ವಾಟ್ಸಾಪ್ ಮೂಲಕ ಮಾಹಿತಿ ನೀಡಲಾಗಿದೆ.

ಮಲಯಾಳಂನಲ್ಲಿಯೇ ಈ ಸಂದೇಶ ಬರೆಯಲಾಗಿದ್ದು, 'ನಿಮ್ಮ ಸಹೋದರ ಹುತಾತ್ಮನಾಗಲು ಬಯಸಿದ್ದ. ಅಲ್ಲಾಹು ಆತನ ಆಸೆಯನ್ನು ನೆರವೇರಿಸಿದ್ದಾನೆ. ಅಮೆರಿಕದ ಪಡೆಗಳು ಹತ್ತು ದಿನಗಳ ಹಿಂದೆ ನಡೆಸಿದ ಡ್ರೋನ್ ದಾಳಿಯಲ್ಲಿ ಆತ ಹುತಾತ್ಮನಾಗಿದ್ದಾನೆ' ಎಂದು ಹೇಳಲಾಗಿದೆ.
'ಈ ಮಾಹಿತಿಯನ್ನು ಪೊಲೀಸರಿಗೆ ದಯವಿಟ್ಟು ನೀಡಬೇಡಿ. ಹಾಗೆ ಮಾಡಿದರೆ ಅವರು ನಿಮ್ಮ ಮನೆಗೆ ಬಂದು ನಿಮಗೆ ಕಷ್ಟ ಕೊಡಲು ಆರಂಭಿಸುತ್ತಾರೆ. ನಿಮ್ಮ ಸಹೋದರ ಇದನ್ನು ಬಯಸಿರಲಿಲ್ಲ' ಎಂದು ಸಂದೇಶದಲ್ಲಿ ತಿಳಿಸಲಾಗಿದೆ.
ಎರಡು ವರ್ಷದ ಹಿಂದೆ ಜೂನ್ 15ರಂದು ಕೇರಳದ ಎಂಟು ಮಹಿಳೆಯರು ಸೇರಿದಂತೆ 40 ಮಂದಿ ಐಸಿಸ್ ಸೇರಿದ್ದರು. ಕಳೆದ ಕೆಲವು ವರ್ಷಗಳಲ್ಲಿ ಸುಮಾರು 98 ಮಂದಿ ಕೇರಳದ ಜನರು ಇಸ್ಲಾಮಿಕ್ ಸ್ಟೇಟ್ ಸೇರಿಕೊಂಡಿದ್ದಾರೆ. ಅವರಲ್ಲಿ 38 ಮಂದಿ ಹತ್ಯೆಯಾಗಿದ್ದು, 60 ಮಂದಿ ಇನ್ನೂ ಜೀವಂತವಾಗಿದ್ದಾರೆ. ಅವರು ಇಸ್ಲಾಮಿಕ್ ಸ್ಟೇಟ್ನಲ್ಲಿ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಸರ್ಕಾರಿ ದಾಖಲೆಗಳು ಹೇಳಿವೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications