ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಮತ ಎಣಿಕೆ ಶುರು
ತಿರುವನಂತಪುರಂ, ಡಿಸೆಂಬರ್ 16: ಮುಂಬರುವ ಕೇರಳ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎನ್ನಲಾಗಿರುವ 'ದೇವರ ಸ್ವಂತ ನಾಡಿನ' ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಬುಧವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. ಸಿಪಿಎಂ ನಾಯಕತ್ವದ ಎಲ್ಡಿಎಫ್, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಗಳಿಗೆ ತಳಮಟ್ಟದಿಂದ ತಮ್ಮ ಬಲಾಬಲವನ್ನು ಕಂಡುಕೊಳ್ಳಲು ಇದು ವೇದಿಕೆಯಾಗಿದೆ.
941 ಗ್ರಾಮ ಪಂಚಾಯಿತಿಗಳ 15,962 ವಾರ್ಡ್ಗಳು, 152 ಬ್ಲಾಕ್ ಪಂಚಾಯತಿಗಳ 2080 ವಾರ್ಡ್ಗಳು, 14 ಜಿಲ್ಲಾ ಪಂಚಾಯಿತಿಗಳ 331 ವಿಭಾಗಗಳು, 86 ಮುನಿಸಿಪಾಲಿಟಿಗಳ 3078 ವಾರ್ಡ್ಗಳು ಮತ್ತು ಆರು ಮುನಿಸಿಪಲ್ ಕಾರ್ಪೊರೇಷನ್ಗಳ 414 ವಾರ್ಡ್ಗಳಿಗೆ ಚುನಾವಣೆ ನಡೆದಿದೆ. ಡಿಸೆಂಬರ್ 8, 10 ಮತ್ತು 14ರಂದು ಮೂರು ಹಂತಗಳಲ್ಲಿ ಸ್ಥಳೀಯ ಕದನಗಳಿಗೆ ಮತದಾನ ನಡೆದಿತ್ತು. 2015ರಲ್ಲಿ ನಡೆದಿದ್ದ ಚುನಾವಣೆಗಳಲ್ಲಿ ಶೇ 77.76ರಷ್ಟು ಮತದಾನ ನಡೆದಿದ್ದರೆ, ಈ ಬಾರಿ ಅದಕ್ಕಿಂತ ಕೊಂಚ ಕಡಿಮೆ ಶೇ 76ರಷ್ಟು ಮತದಾನ ನಡೆದಿದೆ.
2015ರ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ಡಿಎಫ್ 941 ಗ್ರಾಮ ಪಂಚಾಯಿತಿಗಳಲ್ಲಿ 551ರಲ್ಲಿ ಗೆಲುವು ಕಂಡಿತ್ತು. ಜತೆಗೆ 86 ಮುನಿಸಿಪಾಲಿಟಿಗಳಲ್ಲಿ 42ರಲ್ಲಿ, 14 ಜಿಲ್ಲಾ ಪಂಚಾಯಿತಿಗಳ ಪೈಕಿ 7ರಲ್ಲಿ, 152 ಬ್ಲಾಕ್ ಪಂಚಾಯಿತಿಗಳ ಪೈಕಿ 88ರಲ್ಲಿ ಮತ್ತು 6 ಕಾರ್ಪೊರೇಷನ್ಗಳ ಪೈಕಿ 4ರಲ್ಲಿ ಗೆಲುವು ಸಾಧಿಸಿತ್ತು.

ಎರಡನೆಯ ಸ್ಥಾನ ಪಡೆದಿದ್ದ ಯುಡಿಎಫ್, 362 ಪಂಚಾಯಿತಿಗಳು, 7 ಜಿಲ್ಲಾ ಪಂಚಾಯಿತಿಗಳು, 2 ಕಾರ್ಪೊರೇಷನ್, 40 ಮುನಿಸಿಪಾಲಿಟಿ ಮತ್ತು 63 ಬ್ಲಾಕ್ ಪಂಚಾಯಿತಿಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ ಕೇವಲ 14 ಪಂಚಾಯಿತಿಗಳು ಮತ್ತು 1 ಮುನಿಸಿಪಾಲಿಟಿಯಲ್ಲಿ ಜಯಗಳಿಸಿತ್ತು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications