ಹೆಂಡತಿ, ಮಗುವನ್ನುನೋಡಲು ಬಸ್ಸನ್ನೇ ಕದ್ದ ವ್ಯಕ್ತಿ, ಮುಂದೇನಾಯ್ತು?
ತಿರುವನಂತಪುರಂ, ಮೇ 12: ಹೆಂಡತಿ, ಮಗುವನ್ನು ನೋಡಲು ವ್ಯಕ್ತಿಯೊಬ್ಬ ಬಸ್ಸನ್ನೇ ಕಳವು ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಂತೆ ಕೇರಳದಲ್ಲೂ ಲಾಕ್ಡೌನ್ ಜಾರಿಯಲ್ಲಿದೆ. ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಹೆಂಡತಿ, ಮಗುವನ್ನುನೋಡಲು ಬಸ್ಸನ್ನೇ ಕದ್ದಿದ್ದ.
30 ವರ್ಷದ ದಿನೂಪ್ ಕಳ್ಳತನ ಮಾಡಿದ ವ್ಯಕ್ತಿ, ಆತನ ಹೆಂಡತಿ ಮತ್ತು ಮಗು ಪಥನಮತ್ತಟ್ಟಾ ಜಿಲ್ಲೆಯ ತಿರುವಲ್ಲಾದಲ್ಲಿ ವಾಸವಿದ್ದಾರೆ. ಆದರೆ ಆತನು ಕೆಲಸ ಮಾಡುತ್ತಿದ್ದುದು 270 ಕಿ.ಮೀ ದೂರದ ಕೋಳಿಕ್ಕೋಡ್ನಲ್ಲಿ, ಲಾಕ್ಡೌನ್ನಲ್ಲಿ ಲಾಕ್ ಆಗಿದ್ದ ದಿನೂಪ್ ತಿರುವಲ್ಲಾಗೆ ತೆರಳಲು ಉಪಾಯವೊಂದನ್ನು ಮಾಡಿದ್ದಾನೆ.

ಅಲ್ಲೇ ನಿಲ್ಲಿಸಿದ್ದ ಬಸ್ ಒಂದನ್ನು ಗಮನಿಸಿದ ಆತ, ಸುತ್ತ ಯಾರೂ ಇಲ್ಲದನ್ನು ಗಮನಿಸಿ ಹೇಗೋ ಗಾಡಿ ಸ್ಟಾರ್ಟ್ ಮಾಡಿದ್ದಾನೆ. ಗಾಡಿಯಲ್ಲಿ ಪೂರ್ತಿ ಡೀಸೆಲ್ ಇದ್ದಿದ್ದರಿಂದ ಊರಿಗೆ ತೆಗೆದುಕೊಂಡು ಹೋಗಬಹುದು ಎಂಬ ನಂಬಿಕೆ ಇತ್ತು.
ಶನಿವಾರ ರಾತ್ರಿ ಕೋಳಿಕ್ಕೋಡ್ನಿಂದ ಹೊರಟು, ಮಲಪ್ಪುರಂ, ತ್ರಿಶೂರ್, ಎರ್ನಾಕುಲಂ ಮೂಲಕ ಕೊಟ್ಟಾಯಂ ಜಿಲ್ಲೆ ಪ್ರವೇಶಿಸಿದ್ದಾನೆ. ಆದರೆ ಅಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಮಾರಕೋಮ್ನಲ್ಲಿ ಪೊಲೀಸರು ಆತನನ್ನು ತಡೆದಿದ್ದಾರೆ.
ಈ ಹಿಂದೆ ನಾಲ್ಕು ಜಿಲ್ಲೆಗಳಲ್ಲಿ ಕಾರ್ಮಿಕರನ್ನು ಬೇರೆಡೆಗೆ ಸಾಗಿಸಲು ಹೋಗುತ್ತಿರುವುದಾಗಿ ಹೇಳಿದ್ದಾನೆ. ಆದರೆ ಚಾಲನಾ ಪರವಾನಗಿ ಇಲ್ಲದ ಕಾರಣ ಪೊಲೀಸರಿಗೆ ಅನುಮಾನ ಬಂದು, ಆರ್ಟಿಒ ಅಪ್ಲಿಕೇಷನ್ನಲ್ಲಿ ಗಾಡಿಯ ನಂಬರ್ ತೆಗೆದು ಚೆಕ್ ಮಾಡಿದ್ದಾರೆ. ಅದರಲ್ಲಿದ್ದ ಗಾಡಿ ಮಾಲೀಕನ ನಂಬರ್ಗೆ ಕರೆ ಮಾಡಿದಾಗ ಆತ ಸಿಕ್ಕಿಬಿದ್ದಿದ್ದಾನೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications