ಹಸಿವು ನೀಗಿಸಿಕೊಳ್ಳಲು ಕೊಳಚೆ ನೀರಲ್ಲಿ ಮೀನು ಹಿಡಿಯುವ ಸ್ಥಿತಿ!
ತಿರುವನಂತಪುರಂ, ಮೇ 31: ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದ ದಿನದ ಹೊತ್ತಿನ ಊಟಕ್ಕೂ ಕಣ್ಣು-ಬಾಯಿ ಬಿಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಬದುಕು ಕಟ್ಟಿಕೊಳ್ಳುವುದಕ್ಕಾಗಿ ಊರು ಬಿಟ್ಟು ಊರಿಗೆ ಬಂದ ವಲಸೆ ಕಾರ್ಮಿಕರ ಜೀವನವಂತೂ ಲಾಕ್ಡೌನ್ನಿಂದ ಅಕ್ಷರಶಃ ನರಕವಾಗಿದೆ.
ಕೇರಳದಲ್ಲಿ ಲಾಕ್ಡೌನ್ನಿಂದ ಒಂದು ಕಡೆಯಲ್ಲಿ ದಿನಗೂಲಿ ನೌಕರರು ಇಲ್ಲ. ಮತ್ತೊಂದು ಕಡೆಯಲ್ಲಿ ಕೆಲಸ ಮಾಡುವವರಿಗೆ ಉದ್ಯೋಗವೇ ಸಿಗುತ್ತಿಲ್ಲ. ದುಡಿಯುವ ಕೈಗಳಿಗೆ ಕೆಲಸವಿಲ್ಲ, ಹಸಿದ ಹೊಟ್ಟೆಗೆ ಊಟ ಸಿಗುತ್ತಿಲ್ಲ.
ವಲಸೆ ಕಾರ್ಮಿಕರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ವಲಸೆ ಕಾರ್ಮಿಕರ ಹಸಿವು ನೀಗಿಸುವುದಕ್ಕಾಗಿ ವಿಶೇಷ ಸಮುದಾಯದ ಆಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳುತ್ತಿದ್ದೆಯಾದರೂ, ತ್ರಿಶುರ್ ಜಿಲ್ಲಾಡಳಿತ ಎಡವಿದ್ದೆಲ್ಲಿ ಎಂಬುದನ್ನು ಅರಿತುಕೊಂಡಿಲ್ಲ. ಈ ಮಾತನ್ನು ಸಾಕ್ಷೀಕರಿಸುವಂತಾ ಭಾವಚಿತ್ರ ಮನದ ಭಾವನೆಗಳನ್ನು ಕೆದಕುವುದರ ಜೊತೆಗೆ ವಾಸ್ತವದ ದುಸ್ಥಿತಿಯನ್ನು ಎತ್ತಿ ತೋರಿಸುವಂತಿದೆ.

ಕೇರಳ ಕೌಮುದಿ ಫೋಟೋಗ್ರಾಫರ್ ಕ್ಲಿಕ್ಕಿಸಿದ ಫೋಟೋ:
ಕೊರೊನಾವೈರಸ್ ಭೀತಿ ಮತ್ತು ಲಾಕ್ಡೌನ್ ಫಜೀತಿಯಿಂದ ವಲಸೆ ಕಾರ್ಮಿಕರ ಬದುಕು ಬೀದಿಗೆ ಬಂದು ನಿಂತಿದೆ. ತ್ರಿಶುರ್ ರೈಲ್ವೆ ನಿಲ್ದಾಣದ ಪ್ರದೇಶದಲ್ಲಿ ಹರಿಯುವ ಕೊಳಚೆ ನೀರಿನಲ್ಲಿ ಜನರು ಮೀನು ಹಿಡಿಯುತ್ತಿರುವ ಚಿತ್ರವನ್ನು ಕೇರಳ ಕೌಮುದಿಯ ಹಿರಿಯ ಛಾಯಾಗ್ರಾಹಕ ರಫಿ ಎಂ ದೇವಸ್ಸಿ ಸೆರೆ ಹಿಡಿದಿದ್ದಾರೆ. ಇದು ಒಂದು ನಿನ್ನೆಯ ದೃಶ್ಯವಲ್ಲ. ಬದಲಿಗೆ ಪ್ರತಿನಿತ್ಯ ಈ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಕೊಳಚೆ ನೀರಿನಲ್ಲೇ ಮೀನು ಹಿಡಿದು ಹಸಿವು ನೀಗಿಸಿಕೊಳ್ಳುತ್ತಿದ್ದಾರೆ.
ಕಲುಷಿತಗೊಂಡ ಕೊಳಚೆ ನೀರಿನಲ್ಲಿ ಮುಶಿ ಮತ್ತು ಪಲ್ಲತಿಯಂತಹ ಮೀನುಗಳು ಮಾತ್ರ ಸಿಗುತ್ತವೆ. ಈ ಮೀನುಗಳ ಗಟ್ಟಿ ಚರ್ಮವನ್ನು ಹೊಂದಿರುವುದರಿಂದ ಕಲುಷಿತ ನೀರಿನಲ್ಲೂ ಜೀವಿಸಬಲ್ಲವು. ಆದರೆ ಇಂಥ ಮೀನುಗಳ ಸೇವನೆಯಿಂದ ಡೆಂಗ್ಯೂ ಜ್ವರ ಸೇರಿದಂತೆ ಹಲವು ರೀತಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications