ಕೇರಳದಲ್ಲಿ ಬಸ್, ಟ್ಯಾಕ್ಸಿ, ಆಟೋ ದರ ಏರಿಕೆ ಹೊರೆ, ಪ್ರಯಾಣಿಕರಿಗೆ ಬರೆ
ಕೇರಳ, ಮೇ 1 : ಇತ್ತೀಚಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವ ಪರಿಣಾಮ ಕೇರಳದಲ್ಲಿ ಇಂದಿನಿಂದ ಸಾರ್ವಜನಿಕ ಸಾರಿಗೆ ವೆಚ್ಚವನ್ನ ಏರಿಕೆ ಮಾಡಲಾಗಿದೆ. ಬಸ್, ಟ್ಯಾಕ್ಸಿ, ಆಟೋ ಪ್ರಯಾಣ ದರ ಏರಿಕೆಯ ದರದ ಜೊತೆಗೆ ವಿದ್ಯಾರ್ಥಿಗಳ ಪಾಸ್ ದರವನ್ನು ಕೂಡ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಮಾರ್ಚ್ 30 ರಂದು ನಡೆದ ಸಭೆಯಲ್ಲಿ ಬಸ್, ಆಟೋ, ಟ್ಯಾಕ್ಸಿ ಪ್ರಯಾಣ ದರವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಘೋಷಣೆ ಮಾಡಿತ್ತು. ಈ ಮೂಲಕ ಕೇರಳ ಜನತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭಾರದ ಜೊತೆಗೆ ಈಗ ಸಾರಿಗೆ ದರವನ್ನು ಸರ್ಕಾರ ಹೆಚ್ಚಿಸಿರುವುದರಿಂದ ಭಾರದ ಹೊರೆ ಮತ್ತಷ್ಟು ಹೆಚ್ಚಾಗಿದೆ.
ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು 8 ರಿಂದ 12 ರೂಪಾಯಿಗೆ ಏರಿಕೆ ಮಾಡಬೇಕು ಮತ್ತು ಪ್ರತಿ ಕಿಲೋಮೀಟರ್ಗೆ 90 ಪೈಸೆಯಿಂದ 1.10 ಪೈಸೆ ಹೆಚ್ಚಿಸಬೇಕು ಎಂದು ಒತ್ತಾಯಿಸಿತ್ತು. ಇದರ ಜೊತೆಗೆ ವಿದ್ಯಾರ್ಥಿಗಳ ಪಾಸ್ ದರವು ಕೂಡ 6 ರುಪಾಯಿ ಹೆಚ್ಚಸಬೇಕೆಂದು ಖಾಸಗಿ ಬಸ್ ಮಾಲೀಕರು ಪ್ರತಿಭಟನೆ ನಡೆಸಿದ್ದರು.

ಆದ್ರೆ ಸರ್ಕಾರ ಪ್ರಯಾಣಿಕರ ದರವನ್ನು 8 ರಿಂದ 10 ರೂಪಾಯಿಗೆ ಹಾಗೂ ಪ್ರತಿ ಕಿಲೋಮೀಟರ್ಗೆ 90 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲು ನಿರ್ಧಾರ ಮಾಡಿದೆ. ಅಲ್ಲದೆ ವಿದ್ಯಾರ್ಥಿಗಳ ಪಾಸ್ ದರ ಹೆಚ್ಚಿಸುವ ವಿಚಾರವನ್ನು ಪರಿಶೀಲಿಸಲು ಆಯೋಗವನ್ನ ರಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಇನ್ನು ಆಟೋ ದರ ಕೂಡ ಹೆಚ್ಚಾಗಿದ್ದು, ಎರಡು ಕಿಲೋಮೀಟರ್ಗಳಿಗೆ 30 ರೂಪಾಯಿಗೆ ಏರಿಸಲು ನಿರ್ಧರಿಸಿದ್ದು, ಒಂದೂವರೆ ಕಿಲೋಮೀಟರ್ಗೆ ಈಗಿರುವ 25 ರೂಪಾಯಿ, ನಂತರ ಪ್ರತಿ ಕಿಲೋಮೀಟರ್ಗೆ ಈಗಿರುವ 12 ರೂಪಾಯಿಯಂತೆ, ನಂತರ ಕಿಲೋಮೀಟರ್ಗೂ ಕೂಡ 15 ರೂಪಾಯಿಗೆ ಹೆಚ್ಚಿಸಲಾಗಿದೆ.

ಇನ್ನು ಟ್ಯಾಕ್ಸಿ ದರ ಕೂಡ ಹೆಚ್ಚಾಗಿದ್ದು, 1,500 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯದ ಕಾರುಗಳಿಗೆ, ಮೊದಲ 5 ಕಿಲೋಮೀಟರ್ಗೆ 175 ರೂಪಾಯಿಯಿಂದ 200 ರೂಗೆ ಹೆಚ್ಚಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ಪ್ರತಿ ಕಿಲೋಮೀಟರ್ಗೆ ಈಗಿರುವ 15 ರೂ ದರವನ್ನು 18 ರೂಪಾಯಿಗೆ ಏರಿಸಿದೆ. ಅಲ್ಲದೆ ಇವುಗಳ ಜೊತೆಗೆ ಕ್ವಾಡ್ರಿ ಕನಿಷ್ಟ ದರವನ್ನು ರೂ 30 ರಿಂದ 35ಕ್ಕೆ ಹೆಚ್ಚಿಸಲಾಗಿದ್ದು, ಪ್ರತಿ ಕಿಲೋಮೀಟರ್ಗೆ 12 ರೂಪಾಯಿ ಹೆಚ್ಚಿಸಿದೆ.
ಈ ಮೂಲಕ ಎಲ್ಲಾ ರೀತಿಯ ಸಾರಿಗೆ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಸಾರ್ವಜನಿಕರ ಮೇಲೆ ಮತ್ತಷ್ಟು ಹೊರೆ ಹೊರಿಸಿದೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸಾರಿಗೆ ದರವು ಹೆಚ್ಚಾಗಿದ್ದು, ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.
-
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಪೂರೈಕೆ ವ್ಯತ್ಯಯ: ಬೆಂಗಳೂರಿನ ಪಿಜಿಗಳಲ್ಲೂ ಆಹಾರ ಪೂರೈಕೆ ಸ್ಥಗಿತದ ಭೀತಿ, ಆತಂಕದಲ್ಲಿ 10 ಲಕ್ಷ ಮಂದಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್












Click it and Unblock the Notifications