ಕೇರಳ ಮಹಾಮಳೆ: ಹೆಚ್ಚುವರಿ ರಕ್ಷಣಾ ಪಡೆಗಳ ನಿಯೋಜನೆ

ತಿರುವನಂತಪುರಂ ಅಕ್ಟೋಬರ್ 17: ಕೇರಳದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಕೆಲ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಧಾರಾಕಾರ ಮಳೆಗೆ ಕೇರಳಿಗರು ತತ್ತರಿಸಿ ಹೋಗಿದ್ದಾರೆ. ಬೆಂಬಿಡದೆ ಸುರಿಯುತ್ತಿರುವ ಮಹಾಮಳೆಗೆ ಈವರೆಗೆ 11 ಜನಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಜನ ಕಾಣೆಯಾಗಿದ್ದಾರೆ. ಕಾಣೆಯಾದವರ ಪತ್ತೆ ಕಾರ್ಯ ನಡೆಯುತ್ತಿದ್ದು, ಹೆಚ್ಚುವರಿ ರಕ್ಷಣಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವಾ ಪಡೆಗಳು (DSC) ತಂಡಗಳನ್ನು ಕೇರಳದ ದಕ್ಷಿಣ ಮತ್ತು ಮಧ್ಯ ಭಾಗಗಳಲ್ಲಿ ನಿಯೋಜಿಸಲಾಗಿದೆ.

ರಾಜ್ಯಸಭೆಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸಂಸತ್ ಸದಸ್ಯ ಬಿನೋಯ್ ವಿಶ್ವಂ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೇರಳದಾದ್ಯಂತ ಭಾರೀ ಮಳೆಯತ್ತ ಗಮನ ಹರಿಸಲು ಮತ್ತು ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವಂತೆ ಒತ್ತಾಯಿಸಿದರು. ಇದರ ಬೆನ್ನಲ್ಲೆ ಜನರ ಜೀವಗಳನ್ನು ರಕ್ಷಿಸಲು NDRF ಪಡೆಯನ್ನು ನಿಯೋಜನೆ ಮಾಡಲಾಗಿದೆ.

Kerala Rain: Deployment of additional security forces

ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ. "ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಹದಗೆಡುತ್ತಿದೆ. ಹೀಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳ ಹೆಚ್ಚಿನ ಗಮನ ಅಗತ್ಯವಿದೆ" ಎಂದು ಹೇಳಿದ್ದಾರೆ.

ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಟ್ಟಾಯಂನ ಕುಟ್ಟಿಕ್ಕಲ್ ಮತ್ತು ಇಡುಕ್ಕಿ ಜಿಲ್ಲೆಯ ಕೊಕ್ಕಾಯಾರ್‌ನಲ್ಲಿ ಭೂಕುಸಿತದಿಂದ ನಾಲ್ಕು ಜರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ರಾಜ್ಯ ತುರ್ತು ನಿರ್ವಹಣಾ ಕೇಂದ್ರವನ್ನು ಹೆಚ್ಚು ಸಕ್ರಿಯಗೊಳಿಸಲಾಗಿದೆ. ಅಣೆಕಟ್ಟುಗಳ ಸ್ಥಿತಿಯನ್ನು ನಿರ್ಣಯಿಸಲು ಕೆಎಸ್‌ಇಬಿ ಮತ್ತು ನೀರಾವರಿ ಇಲಾಖೆಗಳ ಪ್ರತಿನಿಧಿಗಳನ್ನು ನಿಯೋಜಿಸಲಾಗಿದೆ.

ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಐಎಂಡಿ ಪತ್ರಿಕಾ ಪ್ರಕಟಣೆಯ ಪ್ರಕಾರ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ರಾಜ್ಯದ ತಿರುವನಂತಪುರಂ, ಕೊಲ್ಲಂ, ಅಲಪುಜಾ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯಾಗುವ ಮನ್ಸೂಚನೆ ಇರುವುದರಿಂದ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಅಮಿತ್ ಶಾ ಟ್ವೀಟ್

"ಭಾರೀ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ನಾವು ಕೇರಳದ ಕೆಲವು ಭಾಗಗಳ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅಗತ್ಯವಿರುವ ಜನರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತದೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು NDRF ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥನೆ ಮಾಡುತ್ತೇವೆ " ಎಂದು ಗೃಹ ಸಚಿವ ಅಮಿತ್ ಶಾ ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.

ಇನ್ನೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿ ರಕ್ಷಣಾ ಕಾರ್ಯಗಳನ್ನು ತೀವ್ರಗೊಳಿಸಿದರು. ಕೊಟ್ಟಾಯಂ ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಎಲ್ಲಾ ವಿಧಾನಗಳಿಂದ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಕೋವಿಡ್ ಪ್ರೋಟೋಕಾಲ್ ಅನುಸರಿಸುವ ಮೂಲಕ ಶಿಬಿರಗಳನ್ನು ಆರಂಭಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಮುಖವಾಡಗಳು, ಸ್ಯಾನಿಟೈಸರ್‌ಗಳು, ಕುಡಿಯುವ ನೀರು, ಔಷಧಗಳು ಶಿಬಿರಗಳಲ್ಲಿ ಲಭ್ಯವಿರಬೇಕು. ಜೊತೆಗೆ ಸಹವರ್ತಿಗಳು ಮತ್ತು ಲಸಿಕೆ ತೆಗೆದುಕೊಳ್ಳದ ಜನರಿಗೆ ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+