ಶಬರಿಮಲೆ ವಿವಾದ: ಕೂಡಲೇ ಅರ್ಜಿ ವಿಚಾರಣೆ ನಡೆಸಲು ಕೇರಳ ಸರ್ಕಾರ ಮನವಿ
ತಿರುವನಂತಪುರಂ, ಜನವರಿ 7: ಶಬರಿಮಲೆ ದೇವಸ್ಥಾನದ ಒಳಗೆ ಭಕ್ತರ ಸಂಖ್ಯೆಯನ್ನು 5,000ಕ್ಕೆ ಹೆಚ್ಚಳ ಮಾಡಿರುವ ರಾಜ್ಯ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಯನ್ನು ಕೂಡಲೇ ವಿಚಾರಣೆಗೆ ಒಳಪಡಿಸುವಂತೆ ಕೇರಳ ಸರ್ಕಾರ ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ.
ದೇಶದ ಅನೇಕ ರಾಜ್ಯಗಳಲ್ಲಿ ಕೋವಿಡ್ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದರೂ ಕೇರಳದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯ ಹೆಚ್ಚಳಕ್ಕೆ ಅವಕಾಶ ನೀಡಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎಂದು ಕೇರಳ ಸರ್ಕಾರ ಹೇಳಿದೆ. ಕೇರಳ ಸರ್ಕಾರದ ಮನವಿ ಕುರಿತಂತೆ ಸುಪ್ರೀಂಕೋರ್ಟ್ ಕೂಡಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಕ್ತರ ಸಂಖ್ಯೆಯ ಏರಿಕೆಯ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಕೇರಳ ಸರ್ಕಾರದ ಅರ್ಜಿಯಲ್ಲಿ ನಾಲ್ಕು ತಪ್ಪುಗಳು ಇದ್ದು, ಅವುಗಳನ್ನು ಸರಿಪಡಿಸುವಂತೆ ಸುಪ್ರೀಂಕೋರ್ಟ್ ರಿಜಿಸ್ಟ್ರಿ ಸೂಚನೆ ನೀಡಿತ್ತು. ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ತಿದ್ದಿದ್ದರೂ ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜೆಗಳ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಗೆ ಬಂದಿರಲಿಲ್ಲ.

ಜನವರಿ 5ರಂದು ಅಹವಾಲು ಮಂಡಿಸಲು ಕೇರಳಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ಅರ್ಜಿಯನ್ನು ಕೂಡಲೇ ವಿಚಾರಣೆಗೆ ಎತ್ತಿಕೊಳ್ಳುವಂತೆ ಸರ್ಕಾರದ ಪರ ಜಿ ಪ್ರಕಾಶ್ ಅವರು ರಿಜಿಸ್ಟ್ರಾರ್ಗೆ ಪತ್ರ ಬರೆದಿದ್ದರು.
ಡಿಸೆಂಬರ್ 30ರಂದು ಮಕರವಿಳಕ್ಕು ಅವಧಿಯಲ್ಲಿ ಪ್ರತಿದಿನ 5,000 ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಸುಮಾರು 250 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ಹೆಚ್ಚಿನವರು ಶಬರಿಮಲೆ ದೇವಸ್ಥಾನ ಸಿಬ್ಬಂದಿ ಮತ್ತು ಭಕ್ತರು ಇದ್ದಾರೆ. ಹೈಕೋರ್ಟ್ ಆದೇಶ ನೀಡುವಾಗ ಇದನ್ನೆಲ್ಲ ಗಣನೆಗೆ ತೆಗೆದುಕೊಂಡಿಲ್ಲ ಎಂದು ಆಕ್ಷೇಪಿಸಿರುವ ಸರ್ಕಾರ, ಕೂಡಲೇ ತಡೆಯಾಜ್ಞೆ ನೀಡುವಂತೆ ಕೋರಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications