ಕೇರಳ ವೈದ್ಯಕೀಯ ವಿದ್ಯಾರ್ಥಿಗಳ ನೃತ್ಯದ ವೈರಲ್ ವಿಡಿಯೋಕ್ಕೆ ಕೋಮು ಬಣ್ಣ
ತಿರುವನಂತಪುರಂ, ಏಪ್ರಿಲ್ 10: ಕೇರಳದ ವೈದ್ಯಕೀಯ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳು ಬೋನಿ ಎಂ ಅವರ ಜನಪ್ರಿಯ ಗೀತೆ ರಾಸ್ಪುಟಿನ್ ಹಾಡಿಗೆ ನರ್ತಿಸಿದ್ದ ವಿಡಿಯೋ ವೈರಲ್ ಆಗಿತ್ತು. ಅದೀಗ ಕೋಮು ಸ್ವರೂಪ ಪಡೆದುಕೊಂಡಿದೆ.
ತ್ರಿಶ್ಶೂರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ನವೀನ್ ಕೆ ರಜಾಕ್ ಮತ್ತು ಜಾನಕಿ ಓಂಕುಮಾರ್ ಇಬ್ಬರೂ ಈ ಹಾಡಿಗೆ ನರ್ತಿಸಿದ ವಿಡಿಯೋ ವೈರಲ್ ಆಗಿತ್ತು. ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಗಳಿಸಿದ್ದರು. ಕಾಲೇಜು ಆವರಣದಲ್ಲಿ ಈ ವಿಡಿಯೋವನ್ನು ಅವರು ಚಿತ್ರಿಸಿದ್ದರು.
ಮಾರ್ಚ್ 23ರಂದು ಮೊದಲು ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಲಕ್ಷಾಂತರ ವ್ಯೂವ್ಸ್ ಮತ್ತು ಶೇರ್ ಆಗಿತ್ತು. ಜನರು ಅದನ್ನು ಮೆಚ್ಚಿಕೊಂಡು ಕಾಮೆಂಟ್ ಹಾಕಿದ್ದರು. ಆದರೆ ಕಳೆದ ಎರಡು ಮೂರು ದಿನಗಳಿಂದ ಜನರು ಈ ವಿಡಿಯೋ ನೋಡುತ್ತಿರುವ ರೀತಿ ಬದಲಾಗಿದ್ದು, ಅದಕ್ಕೆ ಕೋಮು ಬಣ್ಣ ನೀಡಲಾಗಿದೆ.

'ಜಾನಕಿ ಮತ್ತು ನವೀನ್. ವೈರಲ್ ಆಗಿರುವ ತ್ರಿಶ್ಶೂರ್ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ನೃತ್ಯದಲ್ಲಿ ಇರುವವರು ಜಾನಕಿ ಓಂಕುಮಾರ್ ಮತ್ತು ನವೀಕ್ ಕೆ ರಜಾಕ್. ಇದರ ಬಗ್ಗೆ ಏನೋ ಅನುಮಾನ ಮೂಡುತ್ತಿದೆ. ಜಾನಕಿಯ ಪೋಷಕರು ಹೆಚ್ಚು ಜಾಗ್ರತೆಯಿಂದ ಇರುವುದು ಒಳಿತು. ಜಾನಕಿಯ ಪತಿ ಓಂಕುಮಾರ್ ಮತ್ತು ಅವರ ಪತ್ನಿಗಾಗಿ ಪ್ರಾರ್ಥಿಸೋಣ' ಎಂದು ಕೃಷ್ಣರಾಜ್ ಎಂಬುವವರು ಫೇಸ್ಬುಕ್ನಲ್ಲಿ ಹೇಳಿದ್ದಾರೆ.
ಈ ಪೋಸ್ಟ್ ದೊಡ್ಡ ಸಂಚಲನ ಮೂಡಿಸಿದೆ. ವಿದ್ಯಾರ್ಥಿಗಳು ಮಾಡಿದ ನೃತ್ಯದಲ್ಲಿ ಅವರ ಧರ್ಮವನ್ನು ಹುಡುಕಿ ಅದಕ್ಕೆ ಕೊಮು ಬಣ್ಣ ಬಳಿಯುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನಿಸಿದ್ದಾರೆ. ಇನ್ನು ಅನೇಕರು ಕೃಷ್ಣರಾಜ್ ಪೋಸ್ಟ್ ಅನ್ನು ಬೆಂಬಲಿಸಿದ್ದಾರೆ. ಈ ವಿಡಿಯೋವನ್ನು ಚಿತ್ರಿಸಿ, ವೈರಲ್ ಮಾಡಿರುವುದು ಒಬ್ಬ ಮುಸ್ಲಿಂ. ಇದು ಪೂರ್ವ ನಿಯೋಜಿತ ಸಂಚು ಎಂದು ಕೆಲವರು ಹೇಳಿದ್ದಾರೆ.
After Naveen Razak and Janaki's #RASPUTIN dance went viral, some shameless people tried to find a communal angle. Their mates from Thrissur medical College decided to stand up for the duo by posting another dance clip using the hashtag #StepAgainstHatred pic.twitter.com/zPrZLtz9jB
— Andrew Amsan (@AndrewAmsan) April 10, 2021
ಆದರೆ ಇದಕ್ಕೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸಂಘಟನೆ ಮತ್ತೊಂದು ವಿಡಿಯೋ ಮೂಲಕ ಉತ್ತರ ನೀಡಿದೆ. ಅದೇ ಹಾಡಿಗೆ ವಿದ್ಯಾರ್ಥಿಗಳೆಲ್ಲರೂ ಸೇರಿ ನರ್ತಿಸಿದ್ದಾರೆ. 'ನೀವು ದ್ವೇಷಿಸಲು ಯೋಜಿಸಿದರೆ, ನಾವು ಪ್ರತಿರೋಧಿಸಲು ನಿರ್ಧಸಿರುತ್ತೇವೆ' ಎಂದು ಅದಕ್ಕೆ ಕ್ಯಾಪ್ಷನ್ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications