ಇಂಧನ ಬೆಲೆ ಏರಿಕೆ: ಖಾಸಗಿ ಬಸ್ ಅನಿರ್ಧಿಷ್ಟಾವಧಿ ಮುಷ್ಕರ
ತಿರುವನಂತಪುರಂ, ಮಾರ್ಚ್ 24: ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಬೆಲೆ ಏರಿಳಿತವಾಗುತ್ತಿದೆ. ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಟಿಕೆಟ್ ದರ ಏರಿಕೆಗೆ ಆಗ್ರಹಿಸಿ ಬಸ್ ನಿರ್ವಾಹಕರ ಸಮನ್ವಯ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರ ಘೋಷಿಸಿವೆ. ಕೇರಳದಲ್ಲಿ ಇಂದಿನಿಂದ ಖಾಸಗಿ ಬಸ್ಗಳು ರಸ್ತೆಗಿಳಿದಿಲ್ಲ. ಕನಿಷ್ಠ ದರವನ್ನು ₹ 8 ರಿಂದ ₹ 12 ಕ್ಕೆ, ವಿದ್ಯಾರ್ಥಿ ರಿಯಾಯಿತಿಯನ್ನು ₹ 2 ರಿಂದ ₹ 6 ಕ್ಕೆ ಮತ್ತು ಪ್ರತಿ ಕಿ.ಮೀ ದರವನ್ನು ₹ 1.10 ಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.
ಕೇರಳ ರಾಜ್ಯ ಖಾಸಗಿ ಬಸ್ ಆಪರೇಟರ್ಸ್ ಫೆಡರೇಶನ್ ಅಧ್ಯಕ್ಷ ಸತ್ಯನ್ ಸುದ್ದಿ ಸಂಸ್ಥೆ ಪಿಟಿಐಗೆ ಮಾತನಾಡಿ, ಉದ್ದೇಶಿತ ಮುಷ್ಕರದ ಕುರಿತು ಎರಡು ವಾರಗಳ ಹಿಂದೆ ಸರ್ಕಾರಕ್ಕೆ ನೋಟಿಸ್ ನೀಡಲಾಗಿತ್ತು ಮತ್ತು ಇಲ್ಲಿಯವರೆಗೆ ಯಾರೂ ಈ ವಿಷಯದ ಬಗ್ಗೆ ಚರ್ಚೆಯಲ್ಲಿ ತೊಡಗಿಲ್ಲ.
ಪರೀಕ್ಷೆಗಳು ಬರುತ್ತಿವೆ ಮತ್ತು ತರಗತಿ ನಡೆಯುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಮಾಲೀಕರು ಮುಷ್ಕರ ನಡೆಸುವುದಿಲ್ಲ ಎಂದು ಆಶಿಸುತ್ತೇನೆ ಎಂದು ರಾಜ್ಯ ಸಾರಿಗೆ ಸಚಿವ ಆಂಟನಿ ರಾಜು ಹೇಳಿಕೆಗೆ ಸಂಬಂಧಿಸಿದಂತೆ ಸತ್ಯನ್, ಈ ರೀತಿಯ ಹೇಳಿಕೆ ನೀಡಬಾರದಿತ್ತು ಎಂದಿದ್ದಾರೆ.

ವರದಿಗಳ ಪ್ರಕಾರ, ನಿರ್ವಾಹಕರು ಕನಿಷ್ಠ ಪ್ರಯಾಣ ದರವನ್ನು ₹ 8 ರಿಂದ ₹ 12 ಕ್ಕೆ, ವಿದ್ಯಾರ್ಥಿ ರಿಯಾಯಿತಿಯನ್ನು ₹ 2 ರಿಂದ ₹ 6 ಕ್ಕೆ ಮತ್ತು ಪ್ರತಿ ಕಿ.ಮೀ ದರವನ್ನು ₹ 1.10 ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಡೀಸೆಲ್ ಬೆಲೆ ಲೀಟರ್ಗೆ ₹62 ಇದ್ದಾಗ ಕೊನೆಯ ಬಾರಿ ದರವನ್ನು ಪರಿಷ್ಕರಿಸಲಾಗಿತ್ತು.
ಮಾಲೀಕರ ಬೇಡಿಕೆಗಳ ಬಗ್ಗೆ ಕಳೆದ ವರ್ಷ ನವೆಂಬರ್ನಲ್ಲಿ ಸಾರಿಗೆ ಸಚಿವರು ಮತ್ತು ರಾಜ್ಯ ಸರ್ಕಾರಕ್ಕೆ ತಿಳಿಸಲಾಯಿತು, ಆದರೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಮತ್ತು ಅದರ ಜವಾಬ್ದಾರಿ ಬಸ್ ಮಾಲೀಕರ ಮೇಲಲ್ಲ ಎಂದು ಅವರು ಹೇಳಿದರು.
ಸಾರ್ವಜನಿಕರ ಪ್ರಯಾಣ ದರವನ್ನು ಹೆಚ್ಚಿಸಬೇಕು ಮತ್ತು ವಿದ್ಯಾರ್ಥಿಗಳ ರಿಯಾಯಿತಿ ದರವನ್ನು ಹೆಚ್ಚಿಸಬೇಕು ಎಂದು ಮಾಲೀಕರು ಒತ್ತಾಯಿಸಿದ್ದಾರೆ.
Recommended Video
ಇದಲ್ಲದೆ, ನಿರ್ವಾಹಕರು ಕಿಲೋಮೀಟರ್ ಶುಲ್ಕವನ್ನು ಈಗಿನ 90 ಪೈಸೆಯಿಂದ 1.10 ರೂ.ಗೆ ಹೆಚ್ಚಿಸುವಂತೆ ಮತ್ತು ಕೋವಿಡ್ 19 ಸಾಂಕ್ರಾಮಿಕ ಅವಧಿಗೆ ರಸ್ತೆ ತೆರಿಗೆಯನ್ನು ಮನ್ನಾ ಮಾಡಲು ಕೋರಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications