ಕೇರಳದ ಸರ್ಕಾರಿ ಅರ್ಜಿಗಳಲ್ಲಿ ತೃತೀಯ ಲಿಂಗದವರಿಗೆ ಪ್ರತ್ಯೇಕ ಆಯ್ಕೆ
ತಿರುವನಂತಪುರಂ, ಜನವರಿ.19: ಕೇರಳದಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ಹಲವು ಇಲಾಖೆಗಳ ಅರ್ಜಿಗಳನ್ನು ಪರಿಷ್ಕರಿಸಲಾಗಿದೆ ಎಂದು ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ಸಚಿವೆ ಕೆ.ಕೆ. ಶೈಲಜಾ ಅವರು ತಿಳಿಸಿದ್ದಾರೆ.
ಸರ್ಕಾರಿ ಇಲಾಖೆಯ ಅರ್ಜಿಗಳಲ್ಲಿ ಪುರುಷ ಮತ್ತು ಮಹಿಳೆ ಜೊತೆಗೆ ತೃತೀಯ ಲಿಂಗಿಯರಿಗೆ ಅನುಕೂಲವಾಗುವ ರೀತಿಯಲ್ಲಿ ಎಂಬ ಹೊಸ ಕಾಲಂನ್ನು ಸೇರ್ಪಡೆಗೊಳಿಸಲಾಗಿದೆ. ಆ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ತೃತೀಯ ಲಿಂಗಿ ಸಮುದಾಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಕೇರಳದಲ್ಲಿ ತೃತೀಯ ಲಿಂಗಿಗಳ ಕ್ಷೇಮಾಭಿವೃದ್ಧಿ ಉದ್ದೇಶದಿಂದ ಹೊಸ ನೀತಿಯನ್ನು ರೂಪಿಸಲು ಹೊರಟಿದೆ. ಸರ್ಕಾರದ ಅರ್ಜಿಗಳಲ್ಲಿ ಪುರುಷ / ಮಹಿಳೆ/ಟ್ರಾನ್ಸ್ ಜೆಂಡರ್ / ಟ್ರಾನ್ಸ್ ವುಮೆನ್ / ಟ್ರಾನ್ಸ್ ಮೆನ್/ ಎಂಬ ವಿಭಾಗಗಳನ್ನು ಮಾಡಲಾಗಿದೆ. ಹಿಂದುಳಿದ ಒಂದು ವರ್ಗವನ್ನು ಮುಂದಿನ ಹಂತಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ತೃತೀಯ ಲಿಂಗದ ಸಮುದಾಯಕ್ಕೆ ಅನುಕೂಲ:
ತೃತೀಯ ಲಿಂಗಿಯರ ಹಕ್ಕು ಮತ್ತು ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಸಮುದಾಯದಲ್ಲಿ ಗುರುತಿಸಿಕೊಂಡವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅರ್ಜಿಗಳಲ್ಲಿ ಬದಲಾವಣೆ ತರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ತಿಳಿಸಿದ್ದಾರೆ.
2014ರಲ್ಲಿ ತೃತೀಯ ಲಿಂಗಿಯರಿಗೆ ಸಂಬಂಧಿಸಿದ ಸುರಕ್ಷತಾ ಕಾಯ್ದೆಯನ್ನು ಕೇರಳದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಗಿತ್ತು. ಕೇರಳ ರಾಜ್ಯ ಮಹಿಳಾ ಅಭಿವೃದ್ಧಿ ಸಹಕಾರದ ವತಿಯಿಂದ ತೃತೀಯ ಲಿಂಗ ಸಮುದಾಯದ ಜನರು ಸ್ವಯಂ ಉದ್ಯೋಗ ಆರಂಭಿಸುವುದಕ್ಕೆ 3 ರಿಂಗ 15 ಲಕ್ಷ ರೂಪಾಯಿವರೆಗೆ ಸಾಲಸೌಲಭ್ಯ ಒದಗಿಸುವುದಕ್ಕೆ ನಿರ್ಧರಿಸಿತ್ತು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications