ಕೇರಳ ರಾಜ್ಯದ ಪಾಲಾದ KSRTC ಟ್ರೇಡ್ ಮಾರ್ಕ್!
ತಿರುವನಂತಪುರಂ, ಜೂನ್ 02; ಏಳು ವರ್ಷಗಳ ಕಾನೂನು ಹೋರಾಟದ ಬಳಿಕ KSRTC ಬ್ರಾಂಡ್ ಕೇರಳ ರಾಜ್ಯದ ಪಾಲಾಗಿದೆ. ಕರ್ನಾಟಕ ಕೆಎಸ್ಆರ್ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ.
Recommended Video
ಬುಧವಾರ ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈ ಕುರಿತು ತೀರ್ಪು ನೀಡಿದೆ. ತೀರ್ಪಿನ Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ.
ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಮತ್ತು ಕೇರಳ ರಾಜ್ಯದ ನಡುವೆ KSRTC ವಿಸ್ತೃತ ರೂಪಕ್ಕಾಗಿ ಕಾನೂನು ಹೋರಾಟ ನಡೆಯುತ್ತಿತ್ತು. ಈ ಹೋರಾಟದಿಂದ ಕೇರಳಕ್ಕೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಕಳೆದ ಹಲವು ವರ್ಷಗಳಿಂದ ರಾಜ್ಯದ ಸಾರಿಗೆ ನಿಗಮ ನಷ್ಟವನ್ನು ಎದುರಿಸುತ್ತಿದೆ.

ಕೇರಳ ಮತ್ತು ಕರ್ನಾಟಕ 2013ರಲ್ಲಿ KSRTC ವಿಸ್ತ್ರತ ರೂಪಕ್ಕಾಗಿ ಕಾನೂನು ಹೋರಾಟವನ್ನು ತೀವ್ರಗೊಳಿಸಿದವು. ಕೇರಳ ರಾಜ್ಯವು Kerala State Road Transport Corporation (KSRTC) ಹೆಸರಿನಲ್ಲಿ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆಯನ್ನು ಹೊಂದಿದೆ.
ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ಈಗ ತೀರ್ಪು ಪ್ರಕಟವಾಗಿದ್ದು ಕೆಎಸ್ಆರ್ಟಿಸಿ ಕೇರಳದ ಪಾಲಾಗಿದೆ. ಕೆಎಸ್ಆರ್ಟಿಸಿ ಎಂಬ ಹೆಸರನ್ನು ಕೇರಳ 1962ರಲ್ಲೇ ನೋಂದಣಿ ಮಾಡಿಸಿದೆ. ಕರ್ನಾಟಕ 1972ರಲ್ಲಿ ನೋಂದಣಿ ಮಾಡಿಸಿದ್ದು ಎಂಬ ಅಂಶವನ್ನು ತೀರ್ಪು ನೀಡುವಾಗ ಪರಿಗಣಿಸಲಾಗಿದೆ.
ಟ್ರೇಡ್ ಮಾರ್ಕ್ ರಿಜಿಸ್ಟರಿ ನೀಡಿರುವ ತೀರ್ಪಿನ ಕುರಿತು ಸಾರಿಗೆ ಸಚಿವರೂ ಆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಲ್ಲಿಯ ತನಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತಕ್ಷಣದಿಂದಲೇ ಕರ್ನಾಟಕ ಕೆಎಸ್ಆರ್ಟಿಸಿ ಹೆಸರು ಬಳಕೆ ಮಾಡುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
-
ಕೇರಳ ವಿಧಾನಸಭೆ ಚುನಾವಣೆಗೆ 55 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ | Kerala Assembly Elections 2026 -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications