ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಕೋವಿಡ್ ನಿಯಮ ಜಾರಿ ಮಾಡಿದ ಕೇರಳ ಸರ್ಕಾರ
ತಿರುವನಂತಪುರಂ, ಅಕ್ಟೋಬರ್ 04: ಕೇರಳ ಸರ್ಕಾರವು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಕೋವಿಡ್ ನಿಯಮವನ್ನು ಜಾರಿ ಮಾಡಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ.
ರಾಜ್ಯಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಕೇರಳ ಸರ್ಕಾರ ತನ್ನ ಮಾರ್ಗಸೂಚಿಗಳನ್ನು ನವೀಕರಿಸಿದೆ. ಈ ನೂತನ ಕ್ರಮವು ಕೇಂದ್ರ ಆರೋಗ್ಯ ಸಚಿವಾಲಯದ ಶಿಫಾರಸನ್ನು ಆಧರಿಸಿದೆ.
ಹೊಸ ಮಾರ್ಗಸೂಚಿ ಅಡಿಯಲ್ಲಿ ಯುಕೆಯಿಂದ ಆಗಮಿಸುವ ಪ್ರಯಾಣಿಕರು 10 ದಿನಗಳ ಹೋಮ್ ಕ್ವಾರಂಟೈನ್ಗೆ ಒಳಗಾಗಬೇಕು. ಹಾಗೆ ದಕ್ಷಿಣ ಆಫ್ರಿಕಾ, ಬ್ರೆಜಿಲ್ ಮತ್ತು ಯುರೋಪ್ ನಿಂದ ಬರುವವರು 7 ದಿನಗಳ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ.

ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯದ ವಿಮಾನ ನಿಲ್ದಾಣಗಳನ್ನು ತಲುಪಿದ ನಂತರ RT-PCR ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷೆ ನಡೆಸಿದ ನಂತರ ಏನಾದರೂ ರೋಗ ಲಕ್ಷಣ ಕಂಡುಬಂದರೆ 14 ದಿನಗಳ ಕ್ವಾರಂಟೈನ್ ಕಡ್ಡಾಯ.
ಕೋವಿಡ್ ಪರೀಕ್ಷೆಯ ಹೊರತಾಗಿ, ಯುಕೆ, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಯುರೋಪ್, ಮಧ್ಯಪ್ರಾಚ್ಯ, ಬಾಂಗ್ಲಾದೇಶ, ಬೋಟ್ಸ್ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ ದೇಶಗಳ ಪ್ರಯಾಣಿಕರ ಮಾದರಿಗಳನ್ನು ವೈರಸ್ ರೂಪಾಂತರದ ಉಪಸ್ಥಿತಿಯನ್ನು ಪರೀಕ್ಷಿಸಲು ಮಾದರಿ ರವಾನಿಸಲಾಗುತ್ತದೆ.
ಭಾನುವಾರ ಕೇರಳದಲ್ಲಿ 12,297 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 74 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 25,377 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 47,20,233 ಪ್ರಕರಣಗಳಿವೆ. 16,333 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 45,57,199 ಮಂದಿ ಗುಣಮುಖರಾಗಿದ್ದಾರೆ. 1,37,043 ಸಕ್ರಿಯ ಪ್ರಕರಣಗಳಿವೆ.
ಕೊರೊನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 20,799 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 180 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,34,702ಕ್ಕೆ ತಲುಪಿದ್ದು, 4,48,997ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,64,458ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 26,718 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,21,247ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 9,91,676 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 57,42,52,400 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್











Click it and Unblock the Notifications