ಹಣ ವಂಚನೆ ಆರೋಪ; ಕೊಚ್ಚಿ ಪೊಲೀಸರಿಂದ ಸನ್ನಿ ಲಿಯೋನ್ ವಿಚಾರಣೆ
ಕೊಚ್ಚಿ, ಫೆಬ್ರುವರಿ 06: ಲಕ್ಷಾಂತರ ಹಣ ಪಡೆದುಕೊಂಡು ಕಾರ್ಯಕ್ರಮಕ್ಕೆ ಬರದೇ ವಂಚಿಸಿದ ಆರೋಪದಲ್ಲಿ ಕೇರಳದ ಕೊಚ್ಚಿ ಅಪರಾಧ ವಿಭಾಗದ ಪೊಲೀಸರು ನಟಿ ಸನ್ನಿ ಲಿಯೋನ್ ಅವರನ್ನು ವಿಚಾರಣೆ ನಡೆಸಿರುವುದಾಗಿ ತಿಳಿದುಬಂದಿದೆ.
ಸಿನಿಮಾ ಚಿತ್ರೀಕರಣಕ್ಕೆಂದು ಕೇರಳಕ್ಕೆ ಬಂದಿದ್ದ ಸನ್ನಿ ಲಿಯೋನ್ ಅವರನ್ನು ಶುಕ್ರವಾರ ರಾತ್ರಿ ಪೊಲೀಸರು ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
"ನಾವು ಆಯೋಜಿಸಿದ್ದ ಎರಡು ಕಾರ್ಯಕ್ರಮಗಳಿಗೆ ಅತಿಥಿಯಾಗಿ ಬರುವುದಾಗಿ ಭರವಸೆ ನೀಡಿ ಸನ್ನಿ ಲಿಯೋನ್ ಅವರು 29 ಲಕ್ಷ ರೂಪಾಯಿಯನ್ನು ಪಡೆದಿದ್ದರು. ಆದರೆ ಕಾರ್ಯಕ್ರಮಕ್ಕೆ ಬರದೇ ವಂಚನೆ ಮಾಡಿದ್ದಾರೆ" ಎಂದು ಪೆರುಂಬವೋರ್ ನ ಆರ್. ಶಿಯಾಸ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಪರಾಧ ವಿಭಾಗದ ತಂಡ ಸನ್ನಿ ಲಿಯೋನ್ ಅವರ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ತಿರುವನಂತಪುರಂನ ಪೂವಾರ್ ಎಂಬಲ್ಲಿ ಹೋಗಿ ಹೇಳಿಕೆ ಪಡೆದಿರುವುದಾಗಿ ತಿಳಿಸಿದೆ.

"ಕೊರೊನಾ ಕಾರಣದಿಂದಾಗಿ ಐದು ಬಾರಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಸರಿಯಾದ ಸಮಯಕ್ಕೆ ಕಾರ್ಯಕ್ರಮ ನಡೆದಿಲ್ಲ. ಹೀಗಾಗಿಯೇ ನಾನು ಹೋಗಲು ಸಾಧ್ಯವಾಗಿಲ್ಲ" ಎಂದು ಅಪರಾಧ ವಿಭಾಗದ ಪೊಲೀಸರಿಗೆ ಸನ್ನಿ ಲಿಯೋನ್ ತಿಳಿಸಿದ್ದಾರೆ.
ಆದರೆ ಸರಿಯಾದ ದಿನಾಂಕ ನಿಗದಿ ಮಾಡಿದರೆ ಖಂಡಿತ ಬರುತ್ತೇನೆ ಎಂದು ಅವರು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications