ಸಿಪಿಎಂ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದ ಕೊಡಿಯೇರಿ
ತಿರುವನಂತಪುರಂ, ನ. 13: ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರು ಕೇರಳ ಸಿಪಿಎಂ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಶುಕ್ರವಾರದಂದು ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ್ದು, ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ಕೇರಳದಿಂದ ಹೊರಗಡೆ ಇರಬೇಕಾಗುತ್ತದೆ, ಹೀಗಾಗಿ ಈ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಎಲ್ ಡಿ ಎಫ್ ಸಂಚಾಲಕ ಎ ವಿಜಯರಾಘವನ್ ಅವರು ಕೊಡಿಯೇರಿ ಅವರ ಹುದ್ದೆಯನ್ನು ಸಂಭಾಳಿಸಲಿದ್ದಾರೆ. ಹೊಸಬರನ್ನು ಹುದ್ದೆ ಆಯ್ಕೆ ಮಾಡಬೇಕಾಗುತ್ತದೆ.
ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಡ್ರಗ್ಸ್ ಹಾಗೂ ಮನಿಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದ್ದಾರೆ. ಮನಿ ಲಾಂಡ್ರಿಂಗ್ ಕಾಯ್ದೆ ಸೆಕ್ಷನ್ 19(1) ಅನ್ವಯ ಬಿನೀಶ್ ಬಂಧಿಸಿರುವ ಜಾರಿ ನಿರ್ದೇಶನಾಲಯವು ವಿಚಾರಣೆ ಮುಂದುವರೆಸಿದೆ.

ಬೆಂಗಳೂರಿನ ಡ್ರಗ್ಸ್ ಪೆಡ್ಲರ್ ಮೊಹಮ್ಮದ್ ಅನೂಪ್ ಜೊತೆಗೂಡಿ ಡ್ರಗ್ಸ್ ಹಾಗೂ ಮನಿ ಲಾಂಡ್ರಿಂಗ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ನವೆಂಬರ್ 25ರ ತನಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರಬೇಕಾಗಿದ್ದು, ಇತ್ತೀಚೆಗೆ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಬಿನೀಶ್ ದೆಸೆಯಿಂದ ಕೊಡಿಯೇರಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರೂ ಅನಾರೋಗ್ಯದ ನೆಪ ಹೇಳಿದ್ದಾರೆ.
ಕೇರಳ ಹಾಗೂ ಕರ್ನಾಟಕದ ನಟ, ನಟಿಯರು, ಸೆಲೆಬ್ರಿಟಿಗಳು, ಉದ್ಯಮಿಗಳ ಸಂಪರ್ಕ ಹೊಂದಿದ್ದ ಅನೂಪ್ ಪೆಡ್ಲರ್ ಆಗಿ ಎಲ್ ಎಸ್ ಡಿ, ಎಂಡಿಎಂಎ, ಕೊಕೈನ್ ಮಾರಾಟ ಮಾಡುತ್ತಿದ್ದ ಎಂಬುದು ಪತ್ತೆಯಾಗಿದೆ. ಅನೂಪ್ ಹಾಗೂ ಬಿನೀಶ್ ನಡುವಿನ ಆರ್ಥಿಕ ವ್ಯವಹಾರ ವಿದೇಶಕ್ಕೂ ವ್ಯಾಪಿಸಿದ್ದು, ಈ ಬಗ್ಗೆ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications