'ಜೈವಿಕ ಅಸ್ತ್ರ' ಆರೋಪ: ಲಕ್ಷದ್ವೀಪ ನಟಿ ವಿರುದ್ಧ ದೇಶದ್ರೋಹ ಪ್ರಕರಣ
ತಿರುವನಂತಪುರಂ, ಜೂನ್ 11: ಕೇಂದ್ರ ಸರ್ಕಾರ 'ಜೈವಿಕ ಅಸ್ತ್ರ' ಪ್ರಯೋಗ ಮಾಡಿರುವುದಾಗಿ ಆರೋಪಿಸಿದ್ದ ಲಕ್ಷದ್ವೀಪ ಸಿನೆಮಾ ನಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಲಕ್ಷದ್ವೀಪದ ಸಿನೆಮಾ ನಟಿ, ರೂಪದರ್ಶಿ ಆಯಿಷಾ ಸುಲ್ತಾನಾ ಕೇಂದ್ರ ಸರ್ಕಾರ ಜೈವಿಕ ಅಸ್ತ್ರ ಬಳಸಿರುವುದಾಗಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಮುಖ್ಯಸ್ಥರ ದೂರಿನ ಆಧಾರದಲ್ಲಿ ದೇಶದ್ರೋಹ ಮತ್ತು ದೋಷಪೂರಿತ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಪ್ರಾದೇಶಿಕ ಚಾನೆಲ್ ಒಂದರ ಚರ್ಚೆಯಲ್ಲಿಪಾಲ್ಗೊಂಡಿದ್ದ ಆಯಿಷಾ , ಪ್ರಫುಲ್ ಪಟೇಲ್ ನೇತೃತ್ವದ ಸರ್ಕಾರ ದ್ವೀಪ ರಾಷ್ಟ್ರದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಟೀಕಿಸಿದ್ದರು.
ಕೇಂದ್ರ ಸರ್ಕಾರ ಲಕ್ಷದ್ವೀಪದ ವಿರುದ್ಧ ಜೈವಿಕ ಶಸ್ತ್ರಾಸ್ತ್ರ ಬಳಸಿದೆ ಎಂದು ಆರೋಪಿಸಿದ್ದರು .

ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್, ಲಕ್ಷದ್ವೀಪದ ಚೆತಿಯಾತ್ ದ್ವೀಪ ನಿವಾಸಿ ಆಯೆಷಾ ಸುಲ್ತಾನಾ ವಿರುದ್ಧ ದೂರು ದಾಖಲಿಸಿದ್ದಾರೆ ಕವರತ್ತಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಅನ್ವಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ನಿರ್ಮಾಪಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಲಕ್ಷದ್ವೀಪ ಪ್ರವೇಶಿಸಿದ ವ್ಯಕ್ತಿಗಳಿಗೆ ಕಡ್ಡಾಯವಾಗಿ 14 ದಿನ ಕ್ವಾರಂಟೈನ್ಗೆ ಗುರಿಪಡಿಸಲಾಗುವುದು ಎಂದು ವರದಿ ಹೇಳಿದೆ. ಲಕ್ಷದ್ವೀಪದಲ್ಲಿ ಕೋವಿಡ್ 19 ಪ್ರಕರಣ ಶೂನ್ಯವಾಗಿದ್ದವು.
ಈಗ ದಿನಂಪ್ರತಿ ನೂರು ಪ್ರಕರಣಗಳು ವರದಿಯಾಗುತ್ತಿವೆ, ಇದು ಕೇಂದ್ರ ಸರ್ಕಾರ ಹರಡಿಸಿರುವ ಜೈವಿಕ ಅಸ್ತ್ರವಾಗಿದೆ. ಈ ಜೈವಿಕ ಅಸ್ತ್ರವನ್ನು ಕೇಂದ್ರ ಸರ್ಕಾರವೇ ಕಳುಹಿಸಿರುವುದಾಗಿ ಆರೋಪಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications