ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ LDFಗೆ ಗೆಲುವು: ಬಿಜೆಪಿ, ಕಾಂಗ್ರೆಸ್ಗೆ ತಿರುಗೇಟು
ತಿರುವನಂತಪುರಂ, ಡಿಸೆಂಬರ್ 16: ಕೇರಳ ವಿಧಾನಸಭೆಯ ಸೆಮಿಫೈನಲ್ ಎಂದೇ ಪ್ರಚಾರವಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು, ಎಡ ಪಕ್ಷಗಳ ನೇತೃತ್ವದ ಎಲ್ಡಿಎಫ್ ಭರ್ಜರಿ ಗೆಲುವು ಸಾಧಿಸಿದ್ದು, ಹಲವಾರು ಸ್ಥಾನಗಳನ್ನು ಗೆದ್ದಿದೆ. ಇದರೊಂದಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಲೆ ತಮ್ಮ ಹಿಡಿತವನ್ನು ಉಳಿಸಿಕೊಂಡಿದೆ.
ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪರಿಸ್ಥಿತಿ ಕೆಟ್ಟದಾಗಿದೆ. ಈ ಗೆಲುವು ಕೇರಳವನ್ನು ನಾಶಮಾಡಲು ಪ್ರಯತ್ನಿಸುತ್ತಿರುವವರಿಗೆ ಉತ್ತರವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತೋಷ ವ್ಯಕ್ತಪಡಿಸಿದರು.
ಈ ಫಲಿತಾಂಶಗಳು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಅದರ ಅವಕಾಶವಾದಿ ರಾಜಕಾರಣಕ್ಕೆ ಕೇರಳದಲ್ಲಿ ಸ್ಥಾನವಿಲ್ಲ ಎಂದು ತೋರಿಸುತ್ತದೆ. ಬಿಜೆಪಿಯೊಂದಿಗೆ ಸುಳ್ಳು ಪ್ರಚಾರ ನಡೆಸುತ್ತಿದ್ದ ಅವರು ಯಶಸ್ವಿಯಾಗಲಿಲ್ಲ ಎಂದಿದ್ದಾರೆ.

ಕೇರಳದಲ್ಲಿ 941 ಗ್ರಾಮ ಪಂಚಾಯಿತಿಯ 15,962ವಾರ್ಡ್, 152 ಬ್ಲಾಕ್ ಪಂಚಾಯಿತಿಯ 2080 ವಾರ್ಡು, 14 ಜಿಲ್ಲಾ ಪಂಚಾಯಿತಿಯ 331 ಡಿವಿಷನ್, 86 ಮುನ್ಸಿಪಾಲಿಟಿಯ 3078 ವಾರ್ಡು, 6 ಮುನ್ಸಿಪಲ್ ಕಾರ್ಪೊರೇಷನ್ ನ 414 ವಾರ್ಡುಗಳಿಗೆ ಡಿಸೆಂಬರ್ 8, 10 ಹಾಗೂ 14ರಂದು ಮತದಾನ ನಡೆಸಲಾಗಿದ್ದು, ಒಟ್ಟಾರೆ, 76% ಮತದಾನ ದಾಖಲಾಗಿದೆ. ಡಿಸೆಂಬರ್ 16ರಂದು ಫಲಿತಾಂಶ ಹೊರಬಂದಿದೆ.
ಇದರಲ್ಲಿ ಪ್ರಮುಖವಾದುದು ತಿರುವನಂತಪುರಂ ಮಹಾನಗರ ಪಾಲಿಕೆ. ಇದರಲ್ಲಿ ಎಲ್ಡಿಎಫ್ ಹಿಂದಿನ ಚುನಾವಣೆಗಿಂತ 8 ಸ್ಥಾನಗಳನ್ನು ಪಡೆದುಕೊಂಡಿದೆ, ಅಂದರೆ 50 ಸ್ಥಾನಗಳು. ಇದಲ್ಲದೆ ಬಿಜೆಪಿಯೂ 34 ಸ್ಥಾನಗಳನ್ನು ವಶಪಡಿಸಿಕೊಂಡಿದೆ. ಇನ್ನು ಕಾಂಗ್ರೆಸ್ ಕೇವಲ 10 ಸ್ಥಾನಗಳನ್ನು ಗೆದ್ದಿದೆ.
ಕೇರಳದಲ್ಲಿ ಎಲ್ಡಿಎಫ್ ಹಿಡಿತ ಬಲವಾಗಿದೆ, ಆದರೆ ಇತ್ತೀಚೆಗೆ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆಪ್ತರು ಸಿಕ್ಕಿಬಿದ್ದರು. ಇದಾದ ನಂತರ, ಅದರ ತನಿಖೆ ಎನ್ಐಎ ಮತ್ತು ಇಡಿಯನ್ನು ತಲುಪಿತು. ಅಂದಿನಿಂದ ಕೇರಳದಲ್ಲಿ ಎಲ್ಡಿಎಫ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಸಂಚು ರೂಪಿಸುತ್ತಿದೆ ಎಂದು ಎಲ್ಡಿಎಫ್ ಆರೋಪಿಸುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications