ರಾಮ್ದೇವ್ ಬಳಿ ಯೋಗ ಕಲಿಯಿರಿ, ಪೆಟ್ರೋಲ್ ಬೆಲೆ 6 ಆಗುತ್ತದೆ: ತರೂರ್ ವ್ಯಂಗ್ಯ
ತಿರುವನಂತಪುರಂ, ಫೆಬ್ರವರಿ 17: ತೈಲ ಬೆಲೆಗಳ ಸತತ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಬೆಲೆ ಶತಕದ ಸಮೀಪ ಬಂದಿದೆ. ಕೆಲವು ರಾಜ್ಯಗಳಲ್ಲಿನ ನಗರಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಈಗಾಗಲೇ 100 ರೂ ತಲುಪಿದೆ. ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಯೋಗ ಗುರು ಬಾಬಾ ರಾಮ್ದೇವ್ ಅವರ ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡು ಸರ್ಕಾರವನ್ನು ಲೇವಡಿ ಮಾಡಿದ್ದಾರೆ.
ಪೆಟ್ರೋಲ್ ಬಂಕ್ ಒಂದರ ಎದುರು ಬಾಬಾ ರಾಮ್ದೇವ್ ಅವರು ತಲೆಕೆಳಗಾಗಿ ಯೋಗಾಸನ ಮಾಡುತ್ತಿರುವ ವ್ಯಂಗ್ಯಚಿತ್ರವೊಂದನ್ನು ಶಶಿ ತರೂರ್ ಹಂಚಿಕೊಂಡಿದ್ದಾರೆ. ಅವರ ಎದುರಿನ ಫಲಕದಲ್ಲಿ ಲೀಟರ್ಗೆ 90 ರೂ ಎಂದು ಬರೆಯಲಾಗಿದೆ. ಈ ಚಿತ್ರದಲ್ಲಿ ಮಲಯಾಳಂ ಭಾಷೆಯಲ್ಲಿ ಅಡಿಶೀರ್ಷಿಕೆಯಿದ್ದು, ಅದನ್ನು ಶಶಿ ತರೂರ್ ಇಂಗ್ಲಿಷ್ಗೆ ತರ್ಜುಮೆ ಮಾಡಿದ್ದಾರೆ.
'ಬಾಬಾ ರಾಮ್ದೇವ್ ಅವರಿಂದ ನೀವು ಯೋಗ ಪಾಠಗಳನ್ನು ಕಲಿತರೆ ನೀವು ಕೂಡ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ ಕೇವಲ 6 ರೂಪಾಯಿಯಂತೆ ನೋಡಬಹುದು' ಎಂದು ಶಶಿ ತರೂರ್ ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ಸತತ ಒಂಬತ್ತನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 26 ಪೈಸೆಯಷ್ಟು ತೈಲ ಬೆಲೆಯಲ್ಲಿ ಹೆಚ್ಚಳವಾಗಿದೆ.
If you took yoga lessons from BabaRamdev, you too could see petrol prices at 06 rupees a litre! pic.twitter.com/zatuS6t6cs
— Shashi Tharoor (@ShashiTharoor) February 16, 2021
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು 2014ರಲ್ಲಿ ಆಡಳಿತ ನಡೆಸುತ್ತಿದ್ದಾಗ ಮತ್ತು ಈಗಿನ ಬಿಜೆಪಿ ಸರ್ಕಾರ ಅವಧಿಯಲ್ಲಿನ ತೈಲದ ಮೇಲಿನ ಕೇಂದ್ರ ಸುಂಕದ ವ್ಯತ್ಯಾಸವನ್ನು ತೋರಿಸಿದ್ದಾರೆ. 2014ರಲ್ಲಿ ಪೆಟ್ರೋಲ್ ಮೇಲೆ 10.7 ರೂ ಇದ್ದರೆ, ಡೀಸೆಲ್ ಮೇಲೆ 4.9 ರೂ ಕೇಂದ್ರ ಸುಂಕವಿತ್ತು. ಈಗ 2021ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಕೇಂದ್ರ ಸುಂಕ 32.9 ರೂ ಇದ್ದರೆ, ಡೀಸೆಲ್ ಸುಂಕ 31.8ರಷ್ಟಿದೆ ಎಂದು ಅವರು ತಿಳಿಸಿದ್ದಾರೆ.
-
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications