Breaking: ನೇಣು ಬಿಗಿದುಕೊಂಡು ಮಲಯಾಳಂ ನಟ ಆತ್ಮಹತ್ಯೆ
ತಿರುವನಂತಪುರಂ, ಜೂನ್ 27: ಮಲಯಾಳಂ ಚಲನಚಿತ್ರ ರಂಗದ ಜನಪ್ರಿಯ ನಟ ಎನ್. ಡಿ ಪ್ರಸಾದ್ ಮೃತಪಟ್ಟಿದ್ದಾರೆ. ನಟ ಪ್ರಸಾದ್ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಪ್ರಸಾದ್ ಶವ ಕಂಡ ಅವರ ಮಕ್ಕಳು ನೆರೆಮನೆಯವರಿಗೆ ವಿಷಯ ತಿಳಿಸಿದ್ದಾರೆ.
ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿರುವ ಪ್ರಸಾದ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನೆರೆಮನೆಯವರ ಹೇಳಿಕೆ ಪಡೆದುಕೊಂಡಿದ್ದು, ಪ್ರಾಥಮಿಕ ತನಿಖೆಯಂತೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಜೂನ್ 25ರಂದು ಎನ್ ಡಿ ಪ್ರಸಾದ್ ಮೃತಪಟ್ಟಿದ್ದು, ಘಟನೆ ಬಗ್ಗೆ ವಿವರಗಳು ತಡವಾಗಿ ಬೆಳಕಿಗೆ ಬಂದಿದೆ.

43 ವರ್ಷ ವಯಸ್ಸಿನ ಪ್ರಸಾದ್ ಜೂನ್ 25 ರಂದು ಕೊಚ್ಚಿ ಬಳಿಯ ಕಲಮಚ್ಚೇರಿಯಲ್ಲಿರುವ ತಮ್ಮ ಮನೆಯ ಹೊರಗಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಎನ್ಡಿ ಪ್ರಸಾದ್ ಅನೇಕ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರೂ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯವು ಜನಪ್ರಿಯತೆ ತಂದುಕೊಟ್ಟಿತ್ತು.
ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ಕೌಟುಂಬಿಕ ಸಮಸ್ಯೆಗಳು ಪ್ರಸಾದ್ ಅವರನ್ನು ಕಾಡುತ್ತಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು. "ಕೆಲ ತಿಂಗಳಿಂದ ಪತ್ನಿಯೂ ದೂರ ಉಳಿದಿದ್ದರು ಹೀಗಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದು ಬಂದಿದೆ'' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2021ರಲ್ಲಿ ಬಂಧನಕ್ಕೊಳಗಾಗಿದ್ದ ಪ್ರಸಾದ್:
ಈ ಹಿಂದೆ ಪ್ರಸಾದ್ ಮಾದಕ ದ್ರವ್ಯ ಸೇವನೆ ಆರೋಪ ಹೊತ್ತಿದ್ದರು. 2021ರಲ್ಲಿ ಸಿಂಥೆಟಿಕ್ ಡ್ರಗ್ಸ್ (2.5 ಗ್ರಾಂ ಹ್ಯಾಶಿಶ್ ಆಯಿಲ್ ಮತ್ತು 15 ಗ್ರಾಂ ಗಾಂಜಾ) ಹೊಂದಿದ್ದ ಕಾರಣಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಪ್ರಸಾದ್ ಅವರನ್ನು ಬಂಧಿಸಿತ್ತು. ಜತೆಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಎನ್ಡಿ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಜೂನ್ 26 ರಂದು ವೈದ್ಯರು ಶವಪರೀಕ್ಷೆ ನಡೆಸಿದ ನಂತರ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಎನ್ಡಿ ಪ್ರಸಾದ್ ಅವರು ಇಬಾ ಮತ್ತು ಕರ್ಮಣಿಯಂತಹ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಿವಿನ್ ಪೌಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿ ನೆಗಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications